Please assign a menu to the primary menu location under menu

NEWSನಮ್ಮರಾಜ್ಯಶಿಕ್ಷಣ-

ಸರ್ಕಾರಿ ಕಾಲೇಜುಗಳಲ್ಲಿ ‘ಕ್ಯಾಂಪಸ್ ಇಂಟರ್ವ್ಯೂ’ ಆಯೋಜಿಸಿ: ಎಎಪಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಕ್ಯಾಂಪಸ್ ಇಂಟರ್ವ್ಯೂ ಇಂದು ಖಾಸಗಿ ಕಾಲೇಜುಗಳಿಗೆ ಮಾತ್ರ ಸೀಮಿತವಾಗಿದ್ದು, ಸರ್ಕಾರಿ ಕಾಲೇಜುಗಳಲ್ಲಿ ಕೂಡ ಕ್ಯಾಂಪಸ್ ಇಂಟರ್ವ್ಯೂ ನಡೆಸಬೇಕು. ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೂ ಕ್ಯಾಂಪಸ್‌ ಇಂಟರ್ವ್ಯೂನಲ್ಲಿ ಉದ್ಯೋಗ ಸಿಗುವಂತಾಗಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಯುವ ಘಟಕದ ಅಧ್ಯಕ್ಷ ಲೋಹಿತ್ ಜಿ. ಹನುಮಾಪುರ ಒತ್ತಾಯಿಸಿದ್ದಾರೆ.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಖಾಸಗಿ ಕಾಲೇಜುಗಳಲ್ಲಿ ಮಾತ್ರ ಯಾಕೆ ಕ್ಯಾಂಪಸ್‌ ಇಂಟರ್ವ್ಯೂ ಆಯೋಜಿಸಲಾಗುತ್ತದೆ. ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಕೆಲಸಕ್ಕೆ ಎಲ್ಲಿ ಹೋಗಬೇಕು, ಈ ತಾರತಮ್ಯ ಯಾಕೆ ಎಂದು ಪ್ರಶ್ನೆ ಮಾಡಿದರು.

ಈ ಸಮಸ್ಯೆಗಳ ಬಗ್ಗೆ ಆಮ್ ಆದ್ಮಿ ಪಾರ್ಟಿ ಧ್ವನಿ ಎತ್ತಿದ್ದು ರಾಜ್ಯಾದ್ಯಂತ ‘ನಮಗೇಕಿಲ್ಲ ಕ್ಯಾಂಪಸ್ ಇಂಟರ್ವ್ಯೂ?’ ಎನ್ನುವ ಅಭಿಯಾನ ನಡೆಸುತ್ತಿದೆ. ಅದರ ಅಂಗವಾಗಿ ಈಗ ಗದಗ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಆಮ್ ಆದ್ಮಿ ಪಾರ್ಟಿ ಯುವ ಘಟಕದಿಂದ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದರು.

ರಾಜ್ಯ ಮಾಧ್ಯಮ ಉಸ್ತುವಾರಿ ಜಗದೀಶ್ ವಿ. ಸದಂ ಮಾತನಾಡಿ, ಈಗಾಗಲೇ ರಾಜ್ಯದ 16 ಜಿಲ್ಲೆಗಳಲ್ಲಿ ಈ ಅಭಿಯಾನ ಯಶಸ್ವಿಯಾಗಿದೆ. ಗ್ರಾಮೀಣ ಮಕ್ಕಳಿಗೂ ಉದ್ಯೋಗದಲ್ಲಿ ಅವಕಾಶ ಸಿಗಬೇಕು ಎಂದರೆ, ಸರ್ಕಾರಿ ಕಾಲೇಜುಗಳಲ್ಲಿ ಪ್ರತಿ ವರ್ಷ ಕ್ಯಾಂಪಸ್ ಇಂಟರ್ವ್ಯೂ ನಡೆಸಬೇಕು. ಸರ್ಕಾರ ಈ ಬಗ್ಗೆ ಎಚ್ಚೆತ್ತು ಸರ್ಕಾರಿ ಕಾಲೇಜುಗಳಲ್ಲಿ ಕೂಡ ಕ್ಯಾಂಪಸ್ ಇಂಟರ್ವ್ಯೂ ನಡೆಸಲು ಕ್ರಮ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ಅಭಿಯಾನ ನಿಲ್ಲುವುದಿಲ್ಲ ಎಂದರು.

ಉತ್ತರ ಕರ್ನಾಟಕದ ಅನೇಕ ಶಾಲಾ-ಕಾಲೇಜುಗಳಲ್ಲಿ ಸರಿಯಾದ ಮೂಲಭೂತ ವ್ಯವಸ್ಥೆ ಇಲ್ಲದಂತಾಗಿದೆ, ಮುಂದಿನ ದಿನಗಳಲ್ಲಿ ಈ ವಿಚಾರದಲ್ಲಿ ಕೂಡ ಆಮ್ ಆದ್ಮಿ ಪಾರ್ಟಿ ಹೋರಾಟ ಮಾಡುವುದು ಎಂದರು.

ಆಮ್ ಆದ್ಮಿ ಪಾರ್ಟಿಯ ಯುವ ಘಟಕದ ಅಧ್ಯಕ್ಷ ಲೋಹಿತ್ ಜಿ. ಹನುಮಾಪುರ, ರಾಜ್ಯ ಮಾಧ್ಯಮ ಉಸ್ತುವಾರಿ ಜಗದೀಶ್ ವಿ. ಸದಂ, ರಾಜ್ಯ ಯುವ ಘಟಕದ ಉಪಾಧ್ಯಕ್ಷ ಆನಂದ್ ದೇವಾಡಿಗ, ಜಿಲ್ಲಾ ಮಾಧ್ಯಮ ಉಸ್ತುವಾರಿ ಅರವಿಂದ್ ಮುಚಕಂಡಿ, ಜಿಲ್ಲಾ ಯುವ ಘಟಕ ನಾಯಕರಾದ ಮಂಜುನಾಥ್, ವೀರಭದ್ರಯ್ಯ ಹಾಗೂ ಇತರ ಮುಖಂಡರು ಇದ್ದರು.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ