NEWSನಮ್ಮಜಿಲ್ಲೆಸಂಸ್ಕೃತಿ

ಕನ್ನಡ ಪರಂಪರೆ ಉಳಿಸಲು ನಮ್ಮ ಸರ್ಕಾರ ಬದ್ದ: ಸಚಿವ ಮುನಿಯಪ್ಪ

ವಿಜಯಪಥ ಸಮಗ್ರ ಸುದ್ದಿ

ದೊಡ್ಡಬಳ್ಳಾಪುರ: ಕನ್ನಡ ಪರಂಪರೆಯನ್ನು ಉಳಿಸಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಆಹಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.‌ಮುನಿಯಪ್ಪ ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನಸವಾಡಿಯಲ್ಲಿ ಆಯೋಜಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 26ನೇ ಕನ್ನಡಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು. ನ್ನಡಭಾಷೆಯನ್ನು ಉಳಿಸಿ ಬೆಳೆಸಲು ಈ ಸಾಹಿತ್ಯ ಸಮ್ಮೇಳನಗಳು ಸಹಕಾರಿಯಾಗಲಿದೆ ಎಂದು ಹೇಳಿದರು.

ಕನ್ನಡದದ ದಾರ್ಶನಿಕ ಕವಿಗಳಾದ ರನ್ನ, ಪಂಪ, ಹಾಗೂ ಜ್ಞಾನ ಪೀಠ ಪುರಸ್ಕೃತರಾದ ಕುವೆಂಪು, ಮಾಸ್ತಿವೆಂಕಟೇಶ ಅಯ್ಯಂಗಾರ್, ದಾರಾಬೇಂದ್ರೆ, ಚಂದ್ರಶೇಖರ ಕಂಬಾರ ಮುಂತಾದ ಕವಿಗಳು ಈ ನಾಡಿಗೆ ತನ್ನದೇ ಆದ ಕನ್ನಡ ಸೇವೆ ಮಾಡುವ ಮೂಲಕ ಅವರ ಸಾಹಿತ್ಯ ಹಾಗೂ ಕವನಗಳನ್ನು ಜ್ಞಾನದ ರೂಪದಲ್ಲಿ ಈ ನಾಡಿನ ಜನತೆಗೆ ಹಾಗೂ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಿದ್ದಾರೆ ಎಂದರು.

ಕನ್ನಡದ ಇತಿಹಾಸ ಈ ರಾಷ್ಟ್ರದ ಭಾಷೆಯಾಗಿದ್ದು ಕನ್ನಡದ ಶಾಸನಗಳು ಐತಿಹಾಸಿಕವಾಗಿ ಹೆಸರುವಾಸಿಯಾಗಿವೆ. ಈ ನೆಲ, ಜಲ, ಭಾಷೆ, ನಾಡಿಗಾಗಿ ನಾವು ಸದಾ ಜೊತೆಯಾಗಿ ಕೆಲಸಮಾಡಬೇಕಿದೆ ಎಂದರು.

ಕನ್ನಡದ ಪರಂಪರೆಯನ್ನು ಉಳಿಸಲು ನಮ್ಮ ಸರ್ಕಾರ ಬದ್ದವಾಗಿದ್ದು ಈ ಕನ್ನಡ ಸಾಹಿತ್ಯ ಪರಿಷತ್ತು ಗೆ ಎಲ್ಲಾರೀತಿಯ ಸಹಕಾರ ಹಾಗೂ ನೆರವನ್ನು ಕಲ್ಪಿಸಲು ಪ್ರಾಮಣಿಕ ಪ್ರಯತ್ನ ವನ್ನು ಮಾಡಲಾಗುವುದು ಎಂದರು.

ಪ್ರತಿಯೊಬ್ಬರಲ್ಲಿ ಕನ್ನಡದ ಬಗ್ಗೆ ಪ್ರತೀ ಬರಬೇಕು ಮತ್ತು ನಾವು ಈ ಭಾಷೆಯನ್ನು ಹೆಚ್ಚಾಗಿ ಬಳಸುವುದಲ್ಲದೆ ನಮ್ಮ ಮುಂದಿನ ಪೀಳಿಗೆಯ ಜನ ಈ ಭಾಷೆಯನ್ನು ಉಳಿಸಿ ಬೆಳೆಸಲು ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುವುದು ಸೂಕ್ತವಾಗಿದೆ ಎಂದರು.

ಈ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಟಿ.ಕೆಂಪಣ್ಣ,ಹಿರಿಯ ಸಾಹಿತಿಗಳಾದ ಚನ್ನಬಸಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅದ್ಯಕ್ಷರಾದ ರಾಜಣ್ಣ, ತಹಶಿಲ್ದಾರ್ ವಿಭಾ ರಾಥೋಡ್,ಡಿವೈಎಸ್ಪಿ ರವಿ, ಕಾರ್ಯ ನಿರ್ವಹಣಾಧಿಕಾರಿ ಮುನಿರಾಜು,ಹಾಗೂ ಕನ್ನಡಪರ ಚಿಂತಕರಾದ ಚುಂಚೇಗೌಡ, ರಾಮಕೃಷ್ಣಪ್ಪ ಮುಂತಾದವರು ಉಪಸ್ಥಿತರಿದ್ದರು.

Deva
the authorDeva

Leave a Reply

error: Content is protected !!
Latest news
KSRTC ಮೈಸೂರು ಡಿಸಿಗೆ- RC, FC ಚಾಲಕ ನಿರ್ವಾಹಕರ ಜವಾಬ್ದಾರಿನಾ?: ಹೇ ತಲೆಕೆಟ್ಟ ಡಿಸಿ ನೀನು ನಿಜವಾಗಲು ಜವಾಬ್ದಾರಿಯಿಂ... ಭಾರೀ ಮಳೆಗೆ ನೆಲಕಚ್ಚಿದ ಪರಂಗಿ ಅಡಿಕೆ ಗಿಡಗಳು -ಅಪಾರ ಪ್ರಮಾಣದ ಬೆಳೆ ಹಾನಿ ರೈತರ ಗೋಳಾಟ ಪ್ರೀತಿ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿ ಕುಳಿತಿರುವ ಪಾಗಲ್‌ ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಸಾರಿಗೆ ನೌಕರರ ಮುಷ್ಕರ ವಾಪಸ್‌: ಜಂಟಿ ಕ್ರಿಯಾ ಸಮಿತಿ ಜಂಟಿ ಕ್ರಿಯಾ ಸಮಿತಿಗೆ ಶಾಕ್‌: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್‌ ತಡೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ ಮತ್ತೊಂದು KSRTC ನೌಕರರ ಸಂಘ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಸಾವು ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ