NEWSನಮ್ಮರಾಜ್ಯರಾಜಕೀಯ

ನಮ್ಮ ಮೆಟ್ರೋ ಜಟಾಪಟಿ: ಖಾಲಿ ಟ್ರಂಕ್‌ ಸರ್ಕಾರ ಅಂತ ಟ್ರಂಕ್‌ ಹಿಡ್ಕೊಂಡು ಬಂದ ಸಂಸದ ತೇಜಸ್ವಿ ಸೂರ್ಯ ವಶಕ್ಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೆಟ್ರೋ ದರ ಏರಿಸಿದ್ದನ್ನು ಖಂಡಿಸಿ ಆರ್‌.ವಿ. ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಜಯನಗರದ ಶಾಸಕ ಸಿ.ಕೆ.ರಾಮಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್‌ ನೀಡಿದ್ದರೂ ಇಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಖಾಲಿ ಟ್ರಂಕ್‌ ಹಿಡಿದುಕೊಂಡು ಬಂದ ತೇಜಸ್ವಿ ಸೂರ್ಯ ಟ್ರಂಕ್‌ ತೆರೆದು ರಾಜ್ಯ ಸರ್ಕಾರ ಖಾಲಿಯಾಗಿದೆ ಎಂದು ಹೇಳಿದರು.

ನಾನು ಪ್ರತಿಭಟನೆ ಮಾಡುತ್ತಿಲ್ಲ. ಖಾಲಿ ಟ್ರಂಕ್‌ ಹಿಡಿದಿದ್ದೇನೆ, ನನ್ನನ್ನು ಯಾರೂ ತಡೆಯಬಾರದು ಎಂದರು. ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ತಡೆದಾಗ, ನಾನು ಖಾಲಿ ಟ್ರಂಕ್‌ ಹಿಡಿದುಕೊಂಡಿದ್ದೇನೆ. ಸಂಸತ್ತು ಅಧಿವೇಶನ ನಡೆಯುತ್ತಿದ್ದಾಗ ನನ್ನನ್ನು ವಶಕ್ಕೆ ಪಡೆಯುವಂತಿಲ್ಲ. ಇನ್ನು ನಾನು ಒಬ್ಬ ವಕೀಲ ತಾವು ಕಾನೂನು ತಿಳಿದುಕೊಂಡು ವಶಕ್ಕೆ ಪಡೆಯಿರಿ ಎಂದು ಪೊಲೀಸರಿಗೆ ಹೇಳಿದರು.

ಇನ್ನು ತೇಜಸ್ವಿ ಸೂರ್ಯ ಅವರನ್ನು ವಶಕ್ಕೆ ಪಡೆದ ಪೊಲೀಸರು ಟ್ರಂಕ್‌ ಮೇಲಿದ್ದ ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ’ ಎಂದು ಬರೆದಿರುವ ಟ್ರಂಕ್‌ನಲ್ಲಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಭಾವಚಿತ್ರಗಳಿದ್ದವು. ಈ ಸರ್ಕಾರ ಖಾಲಿ ಟ್ರಂಕ್‌ ಸರ್ಕಾರ ಎಂದು ಇದ್ದ ಪೋಸ್ಟರ್‌ ತೆಗೆದರು.

ಬಿಜೆಪಿಯ ಮೌನ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ರಾಮಮೂರ್ತಿ ಅವರು, ದರ ಏರಿಕೆಗೆ ತಾತ್ಕಾಲಿಕ ತಡೆ ಆಗಿದೆ. ದರ ಏರಿಕೆ ಕೂಡಲೇ ಕೈ ಬಿಡಬೇಕು. ಈಗಿರುವ ದರವನ್ನೂ ಕಡಿಮೆ ಮಾಡಬೇಕು. ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಸಿಟ್ಟು ಹೊರಹಾಕಿದರು.

ಬಿಜೆಪಿ ಪ್ರತಿಭಟನೆ ನಡೆಸುವ ವಿಚಾರ ತಿಳಿದು ಮೊದಲೇ ಸರ್ಕಾರ ಆರ್‌.ವಿ. ಮೆಟ್ರೋ ನಿಲ್ದಾಣದಲ್ಲಿ 20ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿತ್ತು. ಒಂದು ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಿ ಭದ್ರತೆ ನೀಡಿತ್ತು. ನಿಲ್ದಾಣದ ಹೊರಗೆ ಬಿಎಂಆರ್‌ಸಿಎಲ್‌ ಭದ್ರತಾ ವಿಭಾಗದ ಸಿಬ್ಬಂದಿಯೂ ನಿಂತಿದ್ದರು.

ಇನ್ನು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ಗೂಂಡಾಗಳಿಗೇ ಹೆದರದೆ ಹೋರಾಟ ಮಾಡಿ ಬಂದಿದ್ದೇನೆ. ನಮ್ಮದೇ ಏರಿಯಾದಲ್ಲಿ ನೋಟಿಸ್ ಕೊಟ್ಟು ನನ್ನನ್ನು ಹೆದರಿಸಲು ಸಾಧ್ಯವಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಇದೇ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರತಿಭಟನೆ ನಡೆಸದಂತೆ ಪೊಲೀಸರು ನೀಡಿರುವ ನೋಟಿಸ್ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದ ಸೂರ್ಯ, ನಮ್ಮದೇ ಪ್ರದೇಶದಲ್ಲಿ ನನ್ನನ್ನು ಹೆದರಿಸಲು ಸಾಧ್ಯವಿಲ್ಲ ಎಂದರು.

ನಾವು ಮೆರವಣಿಗೆ, ಧರಣಿ ಅಥವಾ ಮುಷ್ಕರ ನಡೆಸುತ್ತಿಲ್ಲ, ಬದಲಾಗಿ ಸಾಮಾನ್ಯ ನಾಗರಿಕನಾಗಿ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದೇನೆ. ಈ ಹೋರಾಟವನ್ನು ಮುಂದುವರಿಸುವುದಾಗಿ ಹೇಳಿದ ಸೂರ್ಯ, ಬೆಂಗಳೂರು ಮೆಟ್ರೋಗೆ ಸರ್ಕಾರ ಬಜೆಟ್ ಬೆಂಬಲ ನೀಡಬೇಕು ಮತ್ತು ಹೊಸ ದರ ನಿಗದಿ ಸಮಿತಿ ರಚಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದರು.

ಬಿಎಂಆರ್​​ಸಿಎಲ್ ಭಾರತದ ಅತಿ ದುಬಾರಿ ಮೆಟ್ರೋ ಆಗಬಾರದು. ಬದಲಿಗೆ ಶುದ್ಧ, ಸುರಕ್ಷಿತ ಮತ್ತು ದಕ್ಷ ಮೆಟ್ರೋ ಆಗಬೇಕು ಎಂದು ಒತ್ತಾಯಿಸಿದರು.

Megha
the authorMegha

Leave a Reply

error: Content is protected !!
Latest news
BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ! ಮೇ 20ರಿಂದ ಸಾರಿಗೆ ನೌಕರರ ಮುಷ್ಕರ ಮಾಡೇ ತೀರುತ್ತೇವೆ: ವಿಜಯಭಾಸ್ಕರ್ KSRTC: ಮೇ 20 ರಿಂದ ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಎಂಟಿಸಿ-ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘ ಬೆಂಬಲ ವಿಜಯಪಥ ವರದಿಗೆ ಎಚ್ಚೆತ್ತ NWKRTC: ನೌಕರರಿಗೆ 11ತಿಂಗಳ ಹಿಂಬಾಕಿ ಪಾವತಿಯಾಗಿದೆ- ಸ್ಪಷ್ಟನೆ ನೀಡಿ ಸಿಬ್ಬಂದಿ ಗೊಂದಲ ನ... ಸಾರಿಗೆ ನೌಕರರಿಗೆ ಶೇ.12.5 ರಷ್ಟು ವೇತನ ಹೆಚ್ಚಳ ತೀವ್ರ ಖಂಡನೀಯ: ನೌಕರರ ಹಕ್ಕಿಗಾಗಿ ಹೋರಾಟಕ್ಕೆ ಸಿದ್ಧ: ಬೀದರ್‌ ಬಿಎಂ... ಚಿನ್ನ ಇಂದು ಬಲುಭಾರ: 1ಗ್ರಾಂ 22K ಚಿನ್ನದ ಬೆಲೆ ₹1275 ಏರಿಕೆ, ಬೆಳ್ಳಿ ₹20 ಸಾವಿರ ಏರಿಕೆ NWKRTC: ನೌಕರರಿಗೆ 11ತಿಂಗಳ ಬದಲಿಗೆ 8 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಹಾಕಿದ್ದಾರಾ? ಗೊಂದಲದಲ್ಲಿ ಸಿಬ್ಬಂದಿ! "ನಷ್ಟದ ನೆಪದಲ್ಲಿ ವೇತನ ತಡೆಹಿಡಿಯಲು" ಅವಕಾಶ ಇಲ್ಲ: ಭಾರತ ಸಂವಿಧಾನ ಮಿಲನ ಕಳನಾಯಕ ಖ್ಯಾತಿಯ, ಹಿಟ್ಲರ್ ಕಲ್ಯಾಣ’ ಧಾರವಾಹಿಯ ಹೀರೋ ದಿಲೀಪ್ ರಾಜ್ ಇನ್ನಿಲ್ಲ KSRTC ನೌಕರರ ವೇತನ ಪರಿಷ್ಕರಣೆಯ ಆದೇಶದಲ್ಲೇನಿದೆ, ನೌಕರರಿಗೆ ಎಷ್ಟು ತಿಂಗಳ ಹಿಂಬಾಕಿ ಕೊಡಬೇಕು..?