NEWSನಮ್ಮಜಿಲ್ಲೆಬೆಂಗಳೂರು

ಕೆಂಗೇರಿ-ಬೈಯಪ್ಪನಹಳ್ಳಿ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ದಿಢೀರ್‌ ಸ್ಥಗಿತ: ಪ್ರಯಾಣಿಕರ ಪರದಾಟ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಂಗೇರಿ-ಬೈಯಪ್ಪನಹಳ್ಳಿ ಮಾರ್ಗದಲ್ಲಿ ದಿಢೀರ್‌ ಎಂದು ನಮ್ಮ ಮೆಟ್ರೋ ಸಂಚಾರ ಸ್ಥಗಿತವಾಗಿದ್ದು, ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು.

ಇಂದು (ಮಂಗಳವಾರ ಜು.4) ತಾಂತ್ರಿಕ ಸಮಸ್ಯೆಯಿಂದ ನಮ್ಮ ಮೆಟ್ರೋ ಸ್ಥಗಿತವಾಗಿದ್ದು, ಹೆಚ್ಚು ಜನ ಸಂಚರಿಸುವ ಅವಧಿಯಲ್ಲೇ ಮೆಟ್ರೋ ಏಕಾಏಕಿ ಸ್ಥಗಿತಗೊಂಡಿದ್ದರಿಂದ ಕಚೇರಿ, ಶಾಲಾ-ಕಾಲೇಜುಗಳೀಗೆ ಹೋಗಲು ಮೆಟ್ರೋ ಅವಲಂಬಿಸಿದ್ದ ಪ್ರಯಾಣಿಕರು ಸಮಸ್ಯೆಗೆ ಸಲುಕಿದರು.

ನೇರಳೆ ಮಾರ್ಗದ ಕೆಂಗೇರಿ – ಬೈಯ್ಯಪ್ಪನಹಳ್ಳಿ ಮೆಟ್ರೋ ಸಂಚಾರ ಸ್ಥಗಿತವಾಗಿದ್ದು, ಆಫೀಸ್​ಗೆ ಹೊರಟವರೆಲ್ಲ ನಿಲ್ದಾಣದಲ್ಲೇ ಕಾಯುತ್ತಿದ್ದರು. ವಿಷಯ ತಿಳಿದ ಕೂಡಲೇ ಆತಂಕದಲ್ಲೇ ಅವರು ಬೇರೆಬೇರೆ ವ್ಯವಸ್ಥೆ ಮಾಡಿಕೊಂಡರು ಎಂದು ತಿಳಿದು ಬಂದಿದೆ.

ಇನ್ನು ಮೊನ್ನೇ ಅಷ್ಟೇ ಈ ಮಾರ್ಗದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದ್ದರಿಂದ ಭಾನುವಾರ ಎರಡು ಗಂಟೆಗಳ ಕಾಲ ನಮ್ಮ ಮೆಟ್ರೋ ಸ್ಥಗಿತವಾಗಿತ್ತು. ಜೂನ್ 30ರಂದು ಎಂಜಿ ರಸ್ತೆ ಮೆಟ್ರೋದಿಂದ ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಬೆಳಗ್ಗೆ 7ರಿಂದ 9 ಗಂಟೆವರೆಗೆ ಸಂಚರಿಲ್ಲ ಈ ಬಗ್ಗೆ ಬಿಎಂಆರ್​ಸಿಎಲ್ (BMRCL) ಪ್ರಕಟಣೆ ಮೂಲಕ ಮಾಹಿತಿ ನೀಡಿತ್ತು.

ಆದರೆ, ಇಂದು ಯಾವುದೇ ಮಾಹಿತಿ ನೀಡದೆ ತಾಂತ್ರಿಕ ಸಮಸ್ಯೆಯಿಂದ ಮೆಟ್ರೋ ಸ್ಥಗಿತವಾಗಿದೆ ಆಗಿದೆ ಎಂದರೆ ಇದಕ್ಕೆ ಯಾರು ಉತ್ತರ ಕೊಡಬೇಕು. ತಾಂತ್ರಿಕ ಸಮಸ್ಯೆ ಆಗದಂತೆ ನೋಡಿಕೊಳ್ಳುವುದಕ್ಕೆ ತಾಂತ್ರಿಕ ಸಿಬ್ಬಂದಿ ಇಲ್ಲವೇ ಎಂದು ಪ್ರಯಾಣಿಕರು ಕಿರಿಕಾರಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ