NEWSನಮ್ಮಜಿಲ್ಲೆಸಂಸ್ಕೃತಿ

ಜಾನಪದ ಸಾಹಿತ್ಯ ಉಳಿಸಿ ಬೆಳೆಸೋಣ: ಪದ್ಮಶ್ರೀ ಪುರಸ್ಕೃತೆ ಬಿ.ಮಂಜಮ್ಮ ಜೋಗತಿ ಕರೆ

ಜೇವರ್ಗಿಯಲ್ಲಿ ಕರ್ನಾಟಕ ಜಾನಪದ ಕಲಾ ಪ್ರದರ್ಶನದ ಸಂಭ್ರಮ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಜೇವರ್ಗಿ: ನಮ್ಮ ಮೂಲ ಜನಪದ ಕಲೆಯನ್ನು ಉಳಿಸೋಣ ಬೆಳೆಸೋಣ, ಜೊತೆಗೆ ಎಚ್.ಎಲ್.ನಾಗೇಗೌಡರ ಕನಸು ನನಸು ಮಾಡೋಣ ಎಂದು ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷರಾದ, ಪದ್ಮಶ್ರೀ ಪುರಸ್ಕೃತೆ ಬಿ.ಮಂಜಮ್ಮ ಜೋಗತಿ ಹೇಳಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ತಾಲೂಕು ಜಾನಪದ ಪರಿಷತ್ತು ನಗರದ ಕನ್ನಡ ಭವನದಲ್ಲಿ ಆಯೋಜಿಸಿದ್ದ ಕರ್ನಾಟಕ ಜಾನಪದ ಕಲಾ ಪ್ರದರ್ಶನ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಆಗಮಿಸಿ ವಿಶೇಷ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿರುವ ಜನಪದ ಸಾಹಿತ್ಯದ ಬೆಳವಣಿಗೆಗೆ ಶ್ರಮಿಸಿ ಮುಂದಿನ ಪೀಳಿಗೆಗೆ ಅದರ ಪರಿಚಯ ಕೊಡುವ ಕೆಲಸ ಆಗಬೇಕೆಂದರು.

ಕಲಾವಿದರನ್ನು ಕುರಿತು, ನೀವು ಆಧುನಿಕ ವಾದ್ಯಗಳನ್ನು ಬಳಸಬೇಡಿ ನಮ್ಮ ಪೂರ್ವ ಕಾಲದ ಚರ್ಮದ ವಾದ್ಯದ ಬಳಸುವದರಿಂದ ಕೇಳಲು ಮನಸ್ಸಿಗೆ ಇಂಪಾಗಿರುತ್ತದೆ ಎಂದ ಅವರು, ತಮ್ಮ ನಿಜ ಜೀವನದಲ್ಲಿ ನಡೆದ ಘಟನೆಗಳನ್ನು ವಿವರಿಸಿದರು.

ತಾವೂ ಅನೇಕ ಕಷ್ಟ ನಷ್ಟಗಳನ್ನು ಅನುಭವಿಸಿ ಅನೇಕ ರಾಜ್ಯ ಮಟ್ಟದ ಪುರಸ್ಕಾರಗಳನ್ನು ಪಡೆದು ಇಂದು ಕೇಂದ್ರ ಸರ್ಕಾರದ ಅತ್ಯುನ್ನತ ಪ್ರಶಸ್ತಿಯಾದ ಪದ್ಮಶ್ರೀ ಪುರಸ್ಕೃತಳಾಗಿ ನಿಮ್ಮ ಮುಂದೆ ನಿಂತಿದ್ದೇನೆ ಎಂದು ಹೇಳಿದರು.

ಸರಕಾರ ನನಗೆ ಪ್ರಶಸ್ತಿ ನೀಡಿದೆ. ಆದರೆ ನನಗೆ ಇಂದಿಗೂ ಇರಲಿಕ್ಕೆ ಸೂರಿಲ್ಲ ಎಂಬುವ ಪರಿಸ್ಥಿತಿ ನನ್ನದಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.

ಕಾರ್ಯಕ್ರಮದ ಸಾನ್ನಿಧ್ಯವನ್ನು ಸೊನ್ನದ ಪೂಜ್ಯ ಡಾ.ಶಿವಾನಂದ ಸ್ವಾಮಿಗಳು ವಹಿಸಿದ್ದರು. ಉದ್ಘಾಟನೆಯನ್ನು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನೆರವೇರಿಸಿದರು. ನೇತೃತ್ವವನ್ನು ತಹಸೀಲ್ದಾರ್‌ ಸಿದರಾಯ ಬೋಸಗಿ ವಹಿಸಿದ್ದರು.

ಅಧ್ಯಕ್ಷರಾಗಿ ರಾಜಶೇಖರ ಸೀರಿ, ಮುಖ್ಯ ಅತಿಥಿಗಳಾಗಿ ವಿಜಯಕುಮಾರ ತೇಗಲತಿಪ್ಪಿ, ಡಿ.ಬಿ.ಪಾಟೀಲ, ಉದ್ಯಮಿಗಳಾದ ಬಸವರಾಜ ಸಾಸಾಬಾಳ,ಬಾಪುಗೌಡ ಬಿರಾಳ. ಶಾಂತಲಿಂಗ ಪಾಟೀಲ, ನಾಗಪ್ಪ ಸಜ್ಜನ, ಶಕುಂತಲಾ ಇದ್ದರು.

ಸೋಮಶೇಖರ ಬಂಡಿ, ಮಹಾಂತ ಸಾಹು, ಹರವಾಳ ಬಸವರಾಜ ತಿಳಗೂಳ, ಗುಂಡು ವಿಶ್ವಕರ್ಮ, ದೇವಿಂದ್ರ ಬಾಕಾ, ಸಂಗೀತಾ ಹಿರೇಮಠ, ಐ.ಎಸ್.ಹಿರೇಮಠ, ಹಂಪನಗೌಡ ಪಾಟೀಲ, ವಿಜಯಕುಮಾರ ಬಿರಾದಾರ, ಗೀತಾ ರಾಜೋಳ್ಳಿ, ಮಹಾನಂದಾ ಹಿರೇಗೌಡ, ರಾಜೇಶ್ವರಿ ಹಿರೇಗೌಡ, ರೇವಣಸಿದ್ದ ಅಕ್ಕಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ತತ್ವಪದ ಗಾಯನ, ಜಾನಪದ ಹಾಡುಗಳು ಮುಂತಾದ ಕಾರ್ಯಕ್ರಮ ಜರುಗಿದವು.

ಕಾರ್ಯಕ್ರಮದ ನಿರೂಪಣೆಯನ್ನು ತಾಲೂಕು ಜಾನಪದ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿರಾದಾರ, ಸೊನ್ನ ಮತ್ತು ತಾಲೂಕು ಪರಿಷತ್ತಿನ ಅಧ್ಯಕ್ಷ ಎಸ್.ಕೆ.ಬಿರಾದಾರ ಸ್ವಾಗತಿಸಿದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ