NEWSನಮ್ಮಜಿಲ್ಲೆಸಂಸ್ಕೃತಿ

ಮಾ.8ರ ಅಂತಾರಾಷ್ಟ್ರೀಯ ಮಹಿಳಾ ದಿನದಂದು ಕಾದಂಬರಿಗಾರ್ತಿ ವಿಜಯಾ ಶಂಕರರ ಎರಡು ಕೃತಿಗಳ ಲೋಕಾರ್ಪಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ
  • ವಿಜಯಾ ಶಂಕರ ಕಾವ್ಯನಾಮದಿಂದ ಹಲವು ದಶಕಗಳಿಂದ ಸಾಹಿತ್ಯ ಕೃಷಿ ಮಾಡುತ್ತಿರುವ ಕಾದಂಬರಿಗಾರ್ತಿ ಎ.ವಿಜಯಕುಮಾರಿ ಅವರದು ಸಾಹಿತ್ಯ ಕ್ಷೇತ್ರದಲ್ಲಿ ಅದರಲ್ಲೂ ವಿಶೇಷವಾಗಿ ಮಹಿಳಾ ಸಾಹಿತ್ಯ ವಲಯದಲ್ಲಿ ಪ್ರಮುಖವಾದ ಹೆಸರು. 

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಈಗಾಗಲೇ 25ಕ್ಕೂ ಹೆಚ್ಚು ಮೌಲಿಕ ಕೃತಿಗಳನ್ನು ಸಾಹಿತ್ಯಲೋಕಕ್ಕೆ ನೀಡಿ ಖ್ಯಾತರಾಗಿರುವ  ವಿಜಯಾಶಂಕರ ಅವರ ಕವಲುದಾರಿ ( ಕಾದಂಬರಿ ) ಹಾಗೂ ಭೂತಾಯಿ ನಕ್ಕಾಗ  ( ಕಥಾಸಂಕಲನ  ) ಕೃತಿಗಳೆರಡೂ ಮಾರ್ಚ್ 8ರ ಅಂತಾರಾಷ್ಟ್ರೀಯ ಮಹಿಳಾ ದಿನದಂದು ಲೋಕಾರ್ಪಣೆಗೊಳ್ಳುತ್ತಿವೆ.

ಮಾರ್ಚ್ 8 ಸೋಮವಾರ ಬೆಳಗ್ಗೆ 10.30 ಕ್ಕೆ ಮೈಸೂರು ನಗರದ ತ್ಯಾಗರಾಜ ರಸ್ತೆ 5ನೇ ತಿರುವಿನಲ್ಲಿರುವ ಅಕ್ಕನಬಳಗ ಸಭಾಂಗಣದಲ್ಲಿ ಹಿರಣ್ಮಯಿ ಪ್ರತಿಷ್ಠಾನ ಮತ್ತು ಕಾವೇರಿ ಬಳಗ ಒಟ್ಟಾಗಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ  ಸಾಹಿತಿ,  ಪತ್ರಕರ್ತ ಬನ್ನೂರು ಕೆ. ರಾಜು ಕೃತಿಗಳನ್ನು ಬಿಡುಗಡೆ ಮಾಡುವರು.

ಮೈಸೂರು ಆರ್ಟ್ ಗ್ಯಾಲರಿಯ ಸಂಸ್ಥಾಪಕ ಅಧ್ಯಕ್ಷ ಚಿತ್ರಕಲಾವಿದ ಎಲ್.ಶಿವಲಿಂಗಪ್ಪ ಅಧ್ಯಕ್ಷತೆ ವಹಿಸಲಿದ್ದು, ಕೃತಿಗಳನ್ನು ಕುರಿತು ಲೇಖಕಿ ಹಾಗೂ ವಿಶ್ರಾಂತ ಪ್ರಾಧ್ಯಾಪಕಿ ಡಾ. ಸಿ. ಜಿ. ಉಷಾದೇವಿ  ಮಾತನಾಡುವರು.

ಇದೇ ಸಂದರ್ಭದಲ್ಲಿ ಕವಿಗೋಷ್ಠಿ ನಡೆಯಲಿದ್ದು, ಚಿತ್ರಕಲಾವಿದೆ, ಕವಯಿತ್ರಿ ಡಾ. ಜಮುನಾರಾಣಿ ಮಿರ್ಲೆ  ಅವರು ಕವಿಗೋಷ್ಠಿ ಉದ್ಘಾಟಿಸುವರು.  ವಿವಿಧ ಕಡೆಗಳಿಂದ ಆಗಮಿಸುವ ಸುಮಾರು ಇಪ್ಪತ್ತು ಮಂದಿ  ಕವಿ ಕವಯತ್ರಿಯರು  ತಮ್ಮ ಕವನಗಳನ್ನು ವಾಚಿಸಿಸುವರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಎಚ್.ವಿ. ಮುರಳೀಧರ, ಹಿರಣ್ಮಯಿ  ಪ್ರತಿಷ್ಠಾನದ ಅಧ್ಯಕ್ಷ ಎ.ಸಂಗಪ್ಪ, ಕಾವೇರಿ ಬಳಗದ ಅಧ್ಯಕ್ಷೆ ಎನ್.ಕೆ.ಕಾವೇರಿಯಮ್ಮ ಉಪಸ್ಥಿತರಿರುವರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ