NEWSನಮ್ಮರಾಜ್ಯರಾಜಕೀಯ

ಸದನದಲ್ಲಿ ಅಂಗಿ ಬಿಚ್ಚಿನ ಭದ್ರಾವತಿ ಶಾಸಕ ಸಂಗಮೇಶ್ ಸಸ್ಪೆಂಡ್‌

ಒಂದು ವಾರ ಅಮಾನತು ಮಾಡಿ ಆದೇಶ ಹೊರಡಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಇಂದು ಮತ್ತೊಂದು ವಿಚಿತ್ರ ಘಟನೆಗೆ ಸಾಕ್ಷಿಯಾಯಿತು. ಸಿಎಂ ಬಿಎಸ್ವೈ ವಿರುದ್ಧ ಪ್ರತಿಭಟನೆ ಮಾಡುವ ವೇಳೆ ಕಾಂಗ್ರೆಸ್ ಶಾಸಕ ಸಂಗಮೇಶ್ ಅವರು ಸದನದಲ್ಲಿ ಅಂಗಿ ಬಿಚ್ಚಿದ್ದರು. ಇದನ್ನು ಕಂಡ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಿಡಿಕಾರಿದರು.

ವಿಧಾನಸಭೆಯಲ್ಲಿ ಒಂದು ದೇಶ ಒಂದು ಚುನಾವಣೆ ಕುರಿತಾದ ಚರ್ಚೆ ನಡೆಯುತ್ತಿದ್ದರೆ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಭದ್ರಾವತಿ ಶಾಸಕ ಸಂಗಮೇಶ್ ಸಿಎಂ ಯಡಿಯೂರಪ್ಪ ವಿರುದ್ಧ ವೈಯಕ್ತಿಕ ವಿಚಾರಗಳ ಬಗ್ಗೆ ಆರೋಪ ಮಾಡಿ ಪ್ರತಿಭಟನೆ ಮಾಡುವ ಭರದಲ್ಲಿ ಶರ್ಟ್ ಬಿಚ್ಚಿದ್ದರು. ಅವರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮೊದಲಿಗೆ ಕಲಾಪವನ್ನು 15 ನಿಮಿಷ ಮುಂದೂಡಿದರು.

ಮತ್ತೆ ಸದನ ಸೇರುತ್ತಿದ್ದಂತೆ ಸಂಗಮೇಶ್ ಅವರು ಅಗೌರವದಿಂದ ನಡೆದುಕೊಂಡಿರುವುದರ ವಿರುದ್ಧ ಪ್ರಸ್ತಾಪ ಮಂಡಿಸಲಾಯಿತು. ಧ್ವನಿಮತದ ಮೂಲಕ ಪ್ರಸ್ತಾವನೆಗೆ ಒಪ್ಪಿಗೆ ಪಡೆದ ಕಾಗೇರಿಯವರು ಸಭ್ಯತೆ ಮತ್ತು ಗೌರವದಿಂದ ನಡೆದುಕೊಂಡಿರದ ಅವರನ್ನು ಒಂದು ವಾರದ ಕಾಲ ಸದನದಿಂದ ಹೊರಹಾಕಿದರು.

ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಿಯಮಾವಳಿಗಳ ನಿಯಮ 348ನೇ ಕಲಂ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮಾ. 12 ರವರೆಗೆ ಸಂಗಮೇಶ್ವರ ಅವರು ಸದನಕ್ಕೆ ಹಾಜರಾಗುವುದಕ್ಕೆ ತಡೆ ನೀಡಿ ಇದು ಇತರ ಶಾಸಕರಿಗೂ ಎಚ್ಚರಿಕೆ ಗಂಟೆಯಾಗಿದೆ.

 

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...