NEWSನಮ್ಮಜಿಲ್ಲೆನಮ್ಮರಾಜ್ಯಸಿನಿಪಥ

ರಾಜ್ಯ, ಅಂತಾರಾಜ್ಯ ಥಿಯೇಟರ್‌ಗಳಲ್ಲಿ ರಾಬರ್ಟ್ ಅಬ್ಬರ

ಮುಗಿಲು ಮುಟ್ಟಿದ ದರ್ಶನ್‌ ಅಭಿಮಾನಿಗಳ ಸಂಭ್ರಮ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಬರ್ಟ್ ಸಿನಿಮಾ ಕರ್ನಾಟಕದ 656 ಚಿತ್ರಮಂದಿರಗಳಲ್ಲಿ, ನೂರಕ್ಕೂ ಹೆಚ್ಚು ಮಲ್ಟಿಪ್ಲೆಕ್ಸ್ ಗಳಲ್ಲಿ. ಆಂಧ್ರಪ್ರದೇಶದಲ್ಲಿ 433 ಥಿಯೇಟರ್ ಗಳಲ್ಲಿ ಮತ್ತು ತೆಲಂಗಾಣದಲ್ಲಿ 407 ಥಿಯೇಟರುಳು ಸೇರಿದಂತೆ 1500ಕ್ಕೂ ಹೆಚ್ಚು ಬೆಳ್ಳಿ ಪರದೆಯ ಮೇಲೆ ಏಕಕಾಲಕ್ಕೆ ರಾರಾಜಿಸುತ್ತಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಜೋಡಿಯಾಗಿ ಆಶಾ ಭಟ್‌ ಅಭಿನಯಿಸಿದ್ದು, ತರುಣ್ ಸುಧೀರ್ ಚಿತ್ರವನ್ನು ನಿರ್ದೇಶಿಸಿದ್ದಾರೆ. ಉಮಾಪತಿ ಶ್ರೀನಿವಾಸ್ ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸಿದ್ದಾರೆ ಅರ್ಜುನ್ ಜನ್ಯ ಹಾಡುಗಳು ಈಗಾಗಲೇ ಹಿಟ್ ಆಗಿವೆ.

ಗುರುವಾರ ಬೆಳಗ್ಗೆ 6 ಗಂಟೆಯಿಂದಲೇ ಚಿತ್ರ ಪ್ರದರ್ಶನ ಆರಂಭವಾಗಿದ್ದು ಚಿತ್ರಮಂದಿರದ ಮುಂದೆ ಹೌಸ್ ಫುಲ್ ಬೋರ್ಡ್ ಕಾಣಿಸುತ್ತಿದೆ. ರಾಜ್ಯದ ಎಲ್ಲಾ ಕಡೆ ಚಿತ್ರಮಂದಿರಗಳ ಮುಂದೆ ದರ್ಶನ್‌ ಅವರ ಕಟೌಟ್‌ಗಳೂ ರಾರಾಜಿಸುತ್ತಿದ್ದು, ಅಭಿಮಾನಿಗಳು ಹಾಲಿನ ಅಭಿಷೇಕ ಮಾಡುತ್ತಿದ್ದಾರೆ.

ಮಂಡ್ಯದ ಥಿಯೇಟರ್ ಮುಂದಿನ ಕಟೌಟ್‌ಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು, ಜಾನಪದ ಹಾಡು ಡೋಲು ಕುಣಿತದೊಂದಿಗೆ ಸಂಭ್ರಮಿಸುತ್ತಿದ್ದಾರೆ. ಈನಡುವೆ ಅಭಿಮಾನಿಗಳ ಸಂಭ್ರಮ ಜೋರಾಗಿದ್ದು ಎಲ್ಲೆಡೆ ಕುಣಿದು ಕುಪ್ಪಳಿಸುವ ಮೂಲಕ ತಮ್ಮ ಅಭಿಮಾನವನ್ನು ತೋರುತ್ತಿದ್ದಾರೆ.

ಬೆಂಗಳೂರಿನ ಸಂತೋಷ್‌ ಥಿಯೇಟರ್‌ ಮುಂದೆಯು ಅಭಿಮಾನಗಳು ಸಂಭ್ರಮಿಸುತ್ತಿದ್ದಾರೆ. ಇಷ್ಟೇ ಅಲ್ಲದೇ ರಾಜ್ಯಾದ್ಯಂತ ರಾಬರ್ಟ್‌ ಸಿನಿಮಾ ಅಬ್ಬರ ಜೋರಾಗಿದೆ. ಕೊರೊನಾ ಲಾಕ್‌ಡೌನ್‌ನಿಂದ ಸಿನಿಮಾ ಪ್ರಿಯರಿಗೆ ಒಂದು ರೀತಿ ನುಂಗಲಾರದ ತುತ್ತಾಗಿದ್ದ ವಾತಾವರಣದಿಂದ ಈಗ ಹೊರ ಬಂದಿರುವ ಅಭಿಮಾನಿಗಳು ಸ್ವಚ್ಚಂದವಾದ ವಾತಾವಾರಣ ನಿರ್ಮಿಸಿಕೊಂಡಂತೆ ಸಂಭ್ರಮಿಸುತ್ತಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ