NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಸರ್ಕಾರದ ನಡೆ ವಿರುದ್ಧ ಮಾ.13ರಂದು  ಶಿವಮೊಗ್ಗ ಚಲೋ ಪ್ರತಿಭಟನೆ : ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ಮೇಲೆ ಸುಳ್ಳು ಪ್ರಕರಣ ದಾಖಲಿ ದೌರ್ಜನ್ಯ ನಡೆಸುತ್ತಿದೆ. ಇದನ್ನು ಖಂಡಿಸಿ ಮಾ.13ರಂದು ಶಿವಮೊಗ್ಗ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆ ನಿನ್ನೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಬಿಜೆಪಿ ನಾಯಕರು ಶಾಂತಿ ಭಂಗದ ಹೇಳಿಕೆ ನೀಡಿದ್ದರೂ ಸರ್ಕಾರ ಯಾರ ಮೇಲೂ ಕೇಸು ದಾಖಲಿಸಲಿಲ್ಲ. ಅಧಿಕಾರ ದುರ್ಬಳಕೆ ಮಾಡಿಕೊಂಡು ಕೊರೊನಾ ಸಮಯದಲ್ಲಿ ಸರಕಾರದ ಪದಾರ್ಥವನ್ನು ತಮ್ಮ ಪದಾರ್ಥ ಎಂಬಂತೆ ಹಂಚಿದ್ದರು. ಅದನ್ನು ಬಯಲು ಮಾಡಿದ್ದರು ಕ್ರಮ ಕೈಗೊಳ್ಳಲಿಲ್ಲ ಎಂದರು.

ಬಿಜೆಪಿ ಸರ್ಕಾರದ ಈ ನಡೆಯ ವಿರುದ್ಧ ಪ್ರತಿಭಟನೆಗೆ ನಾವು ನಿರ್ಧರಿಸಿದ್ದೇವೆ. ಈ ಬಗ್ಗೆ ಸದನದಲ್ಲಿ ಹಾಗೂ ಇತರ ಕಡೆಗಳಲ್ಲಿ ಚರ್ಚೆ ಮಾಡಿದ್ದೇವೆ. ಪಕ್ಷದ ಶಾಸಕ ಸಂಗಮೇಶ್ವರ್‌ ಮತ್ತು ಅವರ ಕುಟುಂಬ ಸದಸ್ಯರು ಹಾಗೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಅವರನ್ನು ಬಿಜೆಪಿಗೆ ಸೆಳೆಯಲು ಒತ್ತಡ ಹೇರಿದ್ದರು. ಆಪರೇಷನ್ ಕಮಲಕ್ಕೆ ಬಲಿಯಾಗಲಿಲ್ಲ ಎಂಬ ಕಾರಣಕ್ಕೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಒಬ್ಬ ಕಾಂಗ್ರೆಸ್ ಶಾಸಕ ಇದ್ದಾನೆ ಎಂದು ಪೊಲೀಸರ ಕೈಯಲ್ಲಿ ಎಫ್‌ಐಆರ್‌ ಹಾಕಿಸಿ ತೊಂದರೆ ನೀಡುತ್ತಿದ್ದಾರೆ. ನಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಮಾತನಾಡಲು ಅವಕಾಶ ಕೊಡಿ ಎಂದು ಕೇಳಿದರು ಅವಕಾಶ ನೀಡಲಿಲ್ಲ. ಆಗ ನೋವಿನಿಂದ ತಮ್ಮ ಅಂಗಿ ಬಿಚ್ಚಿ ಮೈ ಮೇಲೆ ಆಗಿರುವ ಗಾಯ ತೋರಿಸಲು ಮುಂದಾದಾಗ ಅಸಭ್ಯ ವರ್ತನೆ ಎಂದು ಹೇಳಿ ಅವರನ್ನು ವಿಧಾನಸಭೆಯ ಕಲಾಪದಿಂದ ಒಂದು ವಾರ ಕಾಲ ಹೊರಗಿಡಲಾಗಿದೆ. ಆ ಮೂಲಕ ಅವರಿಗೆ ತೊಂದರೆ ನೀಡಲಾಗಿದೆ ಎಂದು ದೂರಿದರು.

Leave a Reply

error: Content is protected !!
LATEST
APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ