NEWSದೇಶ-ವಿದೇಶನಮ್ಮರಾಜ್ಯ

ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳ ಅಪಘಾತ ಸಂಖ್ಯೆ ಹೆಚ್ಚಳಕ್ಕೆ ಆಕ್ರೋಶ: ಕೇಂದ್ರಕ್ಕೆ ಎರಡನೇ ಪತ್ರ ಬರೆದ ಸಾರಿಗೆ ಸಚಿವ ರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಈ ಎಲೆಕ್ಟ್ರಿಕ್ ಬಸ್ ನಿರ್ವಹಣೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕಿಡಿಕಾರಿದ್ದು, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಎರಡನೇ ಪತ್ರ ಬರೆದಿದ್ದಾರೆ.

ಬೆಂಗಳೂರಿಗರ ಪ್ರಮುಖ ಸಂಚಾರನಾಡಿಯೆಂದರೆ ಅದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್‌ಗಳು. ಪ್ರತಿನಿತ್ಯ ಲಕ್ಷಾಂತರ ಮಂದಿ ಈ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಬಿಎಂಟಿಸಿ ನಿಗಮದಲ್ಲಿ 53 ಡಿಪೋಗಳನ್ನೂ ಸೇರಿ 6 ಸಾವಿರಕ್ಕೂ ಹೆಚ್ಚು ಬಸ್‌ಗಳಿದ್ದು, ಅದರಲ್ಲಿ ಸುಮಾರು 1,700 ಬಸ್‌ಗಳು ಎಲೆಕ್ಟ್ರಿಕ್ ಬಸ್‌ಗಳಾಗಿವೆ.

ಆದರೆ, ಇತ್ತೀಚಿನ ದಿನಗಳಲ್ಲಿ ಇವಿ ಬಸ್‌ಗಳಿಂದ ಅತೀ ಹೆಚ್ಚಾಗಿ ಅಪಘಾತಗಳು, ಬ್ರೇಕ್ ಫೇಲ್‌ಗಳಾಗುತ್ತಿವೆ. ಈ ಬಸ್‌ಗಳನ್ನು ಕೇಂದ್ರ ಸರ್ಕಾರದ ಸೂಚನೆಯಂತೆ ಜಿಸಿಸಿ ಮಾದರಿಯಲ್ಲಿ ಖಾಸಗಿ ಸಂಸ್ಥೆಗಳಿಂದ ಗುತ್ತಿಗೆ ಆಧಾರದಲ್ಲಿ ಬಿಎಂಟಿಸಿ ಓಡಿಸುತ್ತಿದೆ. ಈ ಬಸ್‌ಗಳಲ್ಲಿ ಡ್ರೈವರ್‌ಗಳನ್ನು ಕಂಪನಿಯೇ ತುಂಬಿಕೊಳ್ಳುತ್ತಿದೆ.

ಹೀಗಾಗಿ ಅಪಘಾತ ಮಾಡಿದ ಚಾಲಕರ ವಿರುದ್ಧವೂ ಯಾವುದೇ ಕ್ರಮವಾಗುತ್ತಿಲ್ಲ. ಜತೆಗೆ ಎಲೆಕ್ಟ್ರಿಕ್ ಬಸ್‌ಗಳ ನಿರ್ವಹಣೆ ಕೊರತೆಯಿಂದ, ಬ್ಯಾಟರಿ ಸಮಸ್ಯೆಯಿಂದ ನಿಗಮದ ಕಾರ್ಯಾಚರಣೆಗೆ ಸಮಸ್ಯೆಯಾಗುತ್ತಿದೆ ಎಂದು ಸಾರಿಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಎಲೆಕ್ಟ್ರಿಕ್ ಬಸ್‌ಗಳಲ್ಲಿ ಹೆಚ್ಚಾಗಿ ಬ್ರೇಕ್ ಡೌನ್ ಆಗುತ್ತಿವೆ. ಇವಿ ಬಸ್‌ಗಳು ಒಂದು ದಿನಕ್ಕೆ 200 ಕಿಲೋಮೀಟರ್ ಓಡಬೇಕು ಅಂತಾ ಇದೆ. ಆದರೆ 100-120 ಕಿಲೋಮೀಟರ್ ಮಾತ್ರ ಬ್ಯಾಟರಿ ಬರುತ್ತಿದೆ. ಪದೇಪದೆ ಕೆಟ್ಟು ನಿಲ್ಲುತ್ತಿವೆ ಎಂದು ಸಚಿವರು ಕಿಡಿಕಾರಿದ್ದಾರೆ.

ಅಲ್ಲದೆ 5-6 ತಿಂಗಳ ಹಿಂದೆ ಎಲೆಕ್ಟ್ರಿಕ್ ಬಸ್ ನಿರ್ವಹಣೆ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಈ ಸಂಬಂಧ ಪತ್ರ ಬರೆದಿದ್ದೆ. ಆದರೆ, 45 ದಿನದಲ್ಲಿ ಸಮಸ್ಯೆ ಬಗೆಹರಿಸುತ್ತೇನೆಂದು ಹೇಳಿದ ಅವರು ಬಳಿಕ ಯಾವುದೇ ಉತ್ತರವನ್ನು ಕೊಟ್ಟಿಲ್ಲ ಕೆಲಸವೂ ಆಗಿಲ್ಲ. ಹೀಗಾಗಿ ಎರಡನೇ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು: ಚಾಲಕನಿಗೆ ಗಂಭೀರ ಗಾಯ KSRTC: ವಿದ್ಯಾರ್ಥಿಗಳ ಬಸ್ ಪಾಸ್ ಮಾನ್ಯತಾ ಅವಧಿ ಏ.10ರವರೆಗೆ ವಿಸ್ತರಿಸಿ ಆದೇಶ ಬಟ್ಟೆ ಬ್ಯಾಗ್‌ ಖರೀದಿ ಅವ್ಯವಹಾರ ಪ್ರಕರಣ: ರೋಹಿಣಿ ಸಿಂಧೂರಿಗೆ ಸಂಕಷ್ಟ NWKRTC ಹಾವೇರಿ: ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್‌ ಪ್ಲಾಟ್‌ಫಾರಂನಲ್ಲಿ ನಿಂತಿದ್ದವರಿಗೆ ಡಿಕ್ಕಿ- ಮಗು ಸಾವು ಗ್ಯಾಸ್‌ ಸಿಲಿಂಡರ್‌ಗೆ 195.50 ರೂ ಏರಿಕೆ: ಶಾಕ್‌ಕೊಟ್ಟ ಕೇಂದ್ರ ಸರ್ಕಾರ KSRTC: ಏ.6ರ ಸಭೆಯಲ್ಲಿ ನೌಕರರ ಬೇಡಿಕೆ ಈಡೇರದಿದ್ದರೆ 8ರಿಂದ ಪಾದಯಾತ್ರೆ, 21ರಿಂದ ಆಮರಣಾಂತ ಉಪವಾಸ -ಕೂಟದ ಸಭೆಯಲ್ಲಿ ನ... ಡೀಸೆಲ್‌ ಟ್ಯಾಂಕರ್‌-ಕಾರಿನ ನಡುವೆ ಭೀಕರ ಅಪಘಾತ: ತಪ್ಪಿದ ಭಾರಿ ದುರಂತ KSRTC: ಸಿಬ್ಬಂದಿಗಳಿಗೆ 38 ತಿಂಗಳ ಹಿಂಬಾಕಿ, ವೇತನ ಹೆಚ್ಚಳ ಮಾಡೋಕೆ ಹಣವಿಲ್ಲವೆನ್ನೋ ಸಚಿವರಿಗೆ ಅನಾವಶ್ಯ ಖರ್ಚು ಮಾಡೋಕ... ರೈತರತ್ನ ಕುರುಬೂರು ಶಾಂತಕುಮಾರ್ ಹುಟ್ಟು ಹಬ್ಬ ನೆನಪಿಗಾಗಿ ಕೃಷಿ ಕಾರ್ಮಿಕ ಮಹಿಳೆಯರಿಗೆ ಸನ್ಮಾನ ಕನಿಷ್ಠ ಹೆಚ್ಚುವರಿ ಪಿಂಚಣಿ 7500 ರೂ. ಭತ್ಯೆ, ವೈದ್ಯಕೀಯ ಸೌಲಭ್ಯಕ್ಕೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟ...