CRIMENEWSಬೆಂಗಳೂರು

BMTC ಬಸ್‌ ಬಾಗಿಲಿಗೆ ಸಿಲುಕಿದ ಕೈ- ಬಿದ್ದು ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವು

ಸಾಂದರ್ಭಿಕ ಚಿತ್ರ.
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಎಲೆಕ್ಟ್ರಿಕ್‌ ಬಸ್‌ ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಮೃತಪಟ್ಟಿರುವ ಘಟನೆ ಇಂದು ಜಯನಗರದ 4ನೇ ಬ್ಲಾಕ್‌ನಲ್ಲಿ ನಡೆದಿದೆ.

ಸಂಪಂಗಿ (64) ಮೃತಪಟ್ಟವರು. ಪ್ರಯಾಣಿಕ ಸಂಪಂಗಿ ಬಸ್‌ ಹತ್ತುವ ಸಮಯಲ್ಲಿ ಚಾಲಕ ಬಾಗಿಲು ಬಂದ್‌ ಮಾಡಿದ್ದಾನೆ. ಈ ವೇಳೆ ಬಂದ್‌ ಮಾಡಿದ್ದರಿಂದ ಸಂಪಂಗಿಯ ಕೈ ಬಾಗಿಲಿನ ಒಳಡೆ ಸಿಲುಕಿಕೊಂಡಿದ್ದರೆ ದೇಹ ಹೊರಗಡೆ ಇತ್ತು.

ಅದನ್ನು ಗಮನಿಸದೆ ಚಾಲಕ ಬಸ್‌ ಮುಂದಕ್ಕೆ ಚಲಾಯಿಸಿದ್ದರಿಂದ ಸಂಪಂಗಿ ಬಾಗಿಲಿನಿಂದ ಕೈ ಎಳೆದುಕೊಂಡು ಬಿಸಿಕೊಳ್ಳುವ ವೇಳೆ ಆಯತಪ್ಪಿ ಚಕ್ರದ ಅಡಿಗೆ ಬಿದ್ದು ಹಸುನೀಗಿದ್ದಾರೆ.

ಎಲೆಕ್ಟ್ರಿಕ್‌ ಬಸ್‌ ಜಯನಗರ ಬಸ್‌ ನಿಲ್ದಾಣದಿಂದ ಮೆಜೆಸ್ಟಿಕ್ ಕಡೆಗೆ ಹೋಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ವಿಷಯ ತಿಳಿದು ಸ್ಥಳಕ್ಕೆ ಬಂದ ಜಯನಗರ ಪೊಲೀಸರು ಮೃತ ಸಂಪಂಗಿಯ ಕುಟುಂಬಸ್ಥರನ್ನು ಸಂಪರ್ಕಿಸಿದ ಬಳಿಕ ಮೃತದೇಹವನ್ನು ಕಿಮ್ಸ್‌ ಆಸ್ಪತ್ರೆಗೆ ಸಾಗಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ