ಬೆಂಗಳೂರು: ಬಿಬಿಎಂಪಿಯಲ್ಲಿ ಒಟ್ಟು 12,692 ಡಿ.ಪಿ.ಎಸ್ ಪೌರಕಾರ್ಮಿಕರುಗಳನ್ನು ಕ್ರಮಬದ್ಧಗೊಳಿಸಲಾಗಿದ್ದು, ಈಗಾಗಲೇ 1ನೇ ಮೇ 2025ರಂದು 3,628 ಮಂದಿ ಪೌರ ಕಾರ್ಮಿಕರಿಗೆ ಹಾಗೂ ಇಂದು 1,400 ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶಗಳನ್ನು ನೀಡಲಾಗಿದೆ.
ಈ ಕಾಯಂ ಪೌರ ಕಾರ್ಮಿಕರಿಗೆ ಮೇ-2025 ರಿಂದ HRMS ನಲ್ಲಿ ವೇತನ ಡ್ರಾ ಮಾಡಬೇಕಿದೆ. HRMS ನಲ್ಲಿ ಯಾವುದೇ ಅಧಿಕಾರಿ/ ಸಿಬ್ಬಂದಿಗಳ ವೇತನ ಡ್ರಾ ಮಾಡಲು ಅಧಿಕಾರಿ/ ಸಿಬ್ಬಂದಿಗಳ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಸಂಖ್ಯೆ ಹಾಗೂ ಕುಟುಂಬದಲ್ಲಿ ಅವಲಂಬಿತರ ವಿವರಗಳನ್ನೊಳಗೊಂಡಂತೆ ಇತರೆ ವಿವರಗಳ ನೋಂದಣಿ ಕಡ್ಡಾಯವಾಗಿದೆ.
ಪ್ರಸ್ತುತ ಬಿಬಿಎಂಪಿಯಲ್ಲಿ ನೇಮಕಾತಿಯಾಗಿರುವ ಕಾಯಂ ಪೌರ ಕಾರ್ಮಿಕರಿಗೂ ಈ ನಿಯಮವು ಅನ್ವಯಿಸುತ್ತಿದ್ದು, ನೇಮಕಾತಿಗೊಂಡಿರುವ ಎಲ್ಲ ಪೌರ ಕಾರ್ಮಿಕರಿಂದ ಮೇಲೆ ತಿಳಿಸಿರುವ ದಾಖಲೆಗಳನ್ನು ಪಡೆದು HRMS ನಲ್ಲಿ ನೋಂದಣಿ ಕೈಗೊಂಡು ವೇತನ ಡ್ರಾ ಮಾಡಬೇಕಿದೆ. ಆದರೆ ಬಹುತೇಕ ಪೌರಕಾರ್ಮಿಕರು ಮೇಲೆ ತಿಳಿಸಿರುವ ದಾಖಲಾತಿಗಳಲ್ಲಿ ಪ್ರಮುಖವಾಗಿ ಪ್ಯಾನ್ಕಾರ್ಡ್ ಹೊಂದಿಲ್ಲದಿರುವುದು ಹಾಗೂ ಕುಟುಂಬದ ಅವಲಂಬಿತ ಸದಸ್ಯರ ವಿವರ ಹಾಗೂ ವಿದ್ಯಾರ್ಹತೆ ಬಗ್ಗೆ ಮಾಹಿತಿ ನೀಡಿಲ್ಲದಿರುವುದು ಕಂಡುಬಂದಿದ್ದು, ಈ ಮಾಹಿತಿಗಳ ಸಂಗ್ರಹಣೆ ಚಾಲ್ತಿಯಲ್ಲಿದೆ.
ಪ್ರಸ್ತುತ HRMS ನಲ್ಲಿ ಈ ಮಾಹಿತಿಗಳ ನೋಂದಣಿಯಿಲ್ಲದೇ ವೇತನ ಡ್ರಾ ಮಾಡಲು ಸಮಸ್ಯೆಯಾಗಿದೆ. ಆದರೆ ಈಗಾಗಲೇ ನೇಮಿಸಿರುವ ಆದೇಶಗಳನ್ವಯ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವುದರಿಂದ ತಾತ್ಕಾಲಿಕವಾಗಿ ಪೌರ ಕಾರ್ಮಿಕರ ಇತರ ಎಲ್ಲ ದಾಖಲೆಗಳನ್ನು HRMSನಲ್ಲಿ ನೋಂದಾಯಿಸಿ, ಪ್ಯಾನ್ ಕಾರ್ಡ್, ಅವಲಂಬಿತ ಕುಟುಂಬದ ಸದಸ್ಯರ ವಿವರ ಹಾಗೂ ವಿದ್ಯಾರ್ಹತೆ ದಾಖಲೆಗಳನ್ನು HRMS ನೋಂದಣಿಯಿಂದ ವಿನಾಯಿತಿ ನೀಡಿ ಮೇಲಿನ ದಾಖಲೆಗಳನ್ನು ಎರಡು ತಿಂಗಳ ಅವಧಿಯೊಳಗೆ DDO ಗಳಿಗೆ ಸಲ್ಲಿಸುವ ಷರತ್ತು ವಿಧಿಸಿ ಮೇ-2025 ಮತ್ತು ಜೂನ್-2025ರ ಮಾಹೆಯ ವೇತನ ಡ್ರಾ ಮಾಡಬಹುದಾಗಿದ್ದು, ಅದರಂತೆ ಈ ಆದೇಶ ಹೊರಡಿಸಿದೆ.
ಮೇ-2025ರ ಮಾಹೆಯಲ್ಲಿ ಕಾಯಂಮಾತಿ ಗೊಂಡಿರುವ 12,692 ಪೌರಕಾರ್ಮಿಕರ ಮೇ-2025 ಹಾಗೂ ಜೂನ್-2025ರ ಮಾಹೆಯ ವೇತನವನ್ನು ಹಾಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ HRMS ನಲ್ಲಿ ವೇತನ ಪಾವತಿಸುತ್ತಿರುವ ಮಾದರಿಯಲ್ಲಿಯೇ ಸಂಬಂಧಪಟ್ಟ ಕಾರ್ಯಪಾಲಕ ಅಭಿಯಂತರರು, ಘನತ್ಯಾಜ್ಯ ವಿಲೇವಾರಿ ವಿಭಾಗರವರು ಕೂಡಲೇ ಪಾವತಿಸಬೇಕು ಎಂದು ಆದೇಶಿಸಿದ್ದಾರೆ.
ಈ ಸಂಬಂಧ ಹೊಸದಾಗಿ ನೇಮಕಾತಿಗೊಂಡಿರುವ ಕಾಯಂ ಪೌರ ಕಾರ್ಮಿಕರಿಗೆ ಪ್ಯಾನ್ಕಾರ್ಡ್, ಅವಲಂಬಿತ ಕುಟುಂಬದ ಸದಸ್ಯರ ವಿವರ ಹಾಗೂ ವಿದ್ಯಾರ್ಹತೆ ದಾಖಲೆಗಳಿಗೆ HRMS ನೋಂದಣಿಯಿಂದ ವಿನಾಯಿತಿ ನೀಡಿ, ಮೇಲಿನ ದಾಖಲೆಗಳನ್ನು ಎರಡು ತಿಂಗಳ ಅವಧಿಯೊಳಗೆ DDO ಗಳಿಗೆ ಸಲ್ಲಿಸಿ, HRMS ನೋಂದಣಿಗೆ ಒಳಪಡುವ ಷರತ್ತಿಗೊಳಪಟ್ಟು ಮೇ-2025 ಮತ್ತು ಜೂನ್-2025ರ ಮಾಹೆಯ ವೇತನ ಡ್ರಾ ಮಾಡಲು ಆಡಳಿತ ವಿಭಾಗದ ವಿಶೇಷ ಆಯುಕ್ತ ನವೀನ್ ಕುಮಾರ್ ರಾಜು ಆದೇಶಿಸಿದ್ದಾರೆ.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29)...