ಬೆಂಗಳೂರು: ಬಿಬಿಎಂಪಿಯಲ್ಲಿ ಒಟ್ಟು 12,692 ಡಿ.ಪಿ.ಎಸ್ ಪೌರಕಾರ್ಮಿಕರುಗಳನ್ನು ಕ್ರಮಬದ್ಧಗೊಳಿಸಲಾಗಿದ್ದು, ಈಗಾಗಲೇ 1ನೇ ಮೇ 2025ರಂದು 3,628 ಮಂದಿ ಪೌರ ಕಾರ್ಮಿಕರಿಗೆ ಹಾಗೂ ಇಂದು 1,400 ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶಗಳನ್ನು ನೀಡಲಾಗಿದೆ.
ಈ ಕಾಯಂ ಪೌರ ಕಾರ್ಮಿಕರಿಗೆ ಮೇ-2025 ರಿಂದ HRMS ನಲ್ಲಿ ವೇತನ ಡ್ರಾ ಮಾಡಬೇಕಿದೆ. HRMS ನಲ್ಲಿ ಯಾವುದೇ ಅಧಿಕಾರಿ/ ಸಿಬ್ಬಂದಿಗಳ ವೇತನ ಡ್ರಾ ಮಾಡಲು ಅಧಿಕಾರಿ/ ಸಿಬ್ಬಂದಿಗಳ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಸಂಖ್ಯೆ ಹಾಗೂ ಕುಟುಂಬದಲ್ಲಿ ಅವಲಂಬಿತರ ವಿವರಗಳನ್ನೊಳಗೊಂಡಂತೆ ಇತರೆ ವಿವರಗಳ ನೋಂದಣಿ ಕಡ್ಡಾಯವಾಗಿದೆ.
ಪ್ರಸ್ತುತ ಬಿಬಿಎಂಪಿಯಲ್ಲಿ ನೇಮಕಾತಿಯಾಗಿರುವ ಕಾಯಂ ಪೌರ ಕಾರ್ಮಿಕರಿಗೂ ಈ ನಿಯಮವು ಅನ್ವಯಿಸುತ್ತಿದ್ದು, ನೇಮಕಾತಿಗೊಂಡಿರುವ ಎಲ್ಲ ಪೌರ ಕಾರ್ಮಿಕರಿಂದ ಮೇಲೆ ತಿಳಿಸಿರುವ ದಾಖಲೆಗಳನ್ನು ಪಡೆದು HRMS ನಲ್ಲಿ ನೋಂದಣಿ ಕೈಗೊಂಡು ವೇತನ ಡ್ರಾ ಮಾಡಬೇಕಿದೆ. ಆದರೆ ಬಹುತೇಕ ಪೌರಕಾರ್ಮಿಕರು ಮೇಲೆ ತಿಳಿಸಿರುವ ದಾಖಲಾತಿಗಳಲ್ಲಿ ಪ್ರಮುಖವಾಗಿ ಪ್ಯಾನ್ಕಾರ್ಡ್ ಹೊಂದಿಲ್ಲದಿರುವುದು ಹಾಗೂ ಕುಟುಂಬದ ಅವಲಂಬಿತ ಸದಸ್ಯರ ವಿವರ ಹಾಗೂ ವಿದ್ಯಾರ್ಹತೆ ಬಗ್ಗೆ ಮಾಹಿತಿ ನೀಡಿಲ್ಲದಿರುವುದು ಕಂಡುಬಂದಿದ್ದು, ಈ ಮಾಹಿತಿಗಳ ಸಂಗ್ರಹಣೆ ಚಾಲ್ತಿಯಲ್ಲಿದೆ.
ಪ್ರಸ್ತುತ HRMS ನಲ್ಲಿ ಈ ಮಾಹಿತಿಗಳ ನೋಂದಣಿಯಿಲ್ಲದೇ ವೇತನ ಡ್ರಾ ಮಾಡಲು ಸಮಸ್ಯೆಯಾಗಿದೆ. ಆದರೆ ಈಗಾಗಲೇ ನೇಮಿಸಿರುವ ಆದೇಶಗಳನ್ವಯ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವುದರಿಂದ ತಾತ್ಕಾಲಿಕವಾಗಿ ಪೌರ ಕಾರ್ಮಿಕರ ಇತರ ಎಲ್ಲ ದಾಖಲೆಗಳನ್ನು HRMSನಲ್ಲಿ ನೋಂದಾಯಿಸಿ, ಪ್ಯಾನ್ ಕಾರ್ಡ್, ಅವಲಂಬಿತ ಕುಟುಂಬದ ಸದಸ್ಯರ ವಿವರ ಹಾಗೂ ವಿದ್ಯಾರ್ಹತೆ ದಾಖಲೆಗಳನ್ನು HRMS ನೋಂದಣಿಯಿಂದ ವಿನಾಯಿತಿ ನೀಡಿ ಮೇಲಿನ ದಾಖಲೆಗಳನ್ನು ಎರಡು ತಿಂಗಳ ಅವಧಿಯೊಳಗೆ DDO ಗಳಿಗೆ ಸಲ್ಲಿಸುವ ಷರತ್ತು ವಿಧಿಸಿ ಮೇ-2025 ಮತ್ತು ಜೂನ್-2025ರ ಮಾಹೆಯ ವೇತನ ಡ್ರಾ ಮಾಡಬಹುದಾಗಿದ್ದು, ಅದರಂತೆ ಈ ಆದೇಶ ಹೊರಡಿಸಿದೆ.
ಮೇ-2025ರ ಮಾಹೆಯಲ್ಲಿ ಕಾಯಂಮಾತಿ ಗೊಂಡಿರುವ 12,692 ಪೌರಕಾರ್ಮಿಕರ ಮೇ-2025 ಹಾಗೂ ಜೂನ್-2025ರ ಮಾಹೆಯ ವೇತನವನ್ನು ಹಾಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ HRMS ನಲ್ಲಿ ವೇತನ ಪಾವತಿಸುತ್ತಿರುವ ಮಾದರಿಯಲ್ಲಿಯೇ ಸಂಬಂಧಪಟ್ಟ ಕಾರ್ಯಪಾಲಕ ಅಭಿಯಂತರರು, ಘನತ್ಯಾಜ್ಯ ವಿಲೇವಾರಿ ವಿಭಾಗರವರು ಕೂಡಲೇ ಪಾವತಿಸಬೇಕು ಎಂದು ಆದೇಶಿಸಿದ್ದಾರೆ.
ಈ ಸಂಬಂಧ ಹೊಸದಾಗಿ ನೇಮಕಾತಿಗೊಂಡಿರುವ ಕಾಯಂ ಪೌರ ಕಾರ್ಮಿಕರಿಗೆ ಪ್ಯಾನ್ಕಾರ್ಡ್, ಅವಲಂಬಿತ ಕುಟುಂಬದ ಸದಸ್ಯರ ವಿವರ ಹಾಗೂ ವಿದ್ಯಾರ್ಹತೆ ದಾಖಲೆಗಳಿಗೆ HRMS ನೋಂದಣಿಯಿಂದ ವಿನಾಯಿತಿ ನೀಡಿ, ಮೇಲಿನ ದಾಖಲೆಗಳನ್ನು ಎರಡು ತಿಂಗಳ ಅವಧಿಯೊಳಗೆ DDO ಗಳಿಗೆ ಸಲ್ಲಿಸಿ, HRMS ನೋಂದಣಿಗೆ ಒಳಪಡುವ ಷರತ್ತಿಗೊಳಪಟ್ಟು ಮೇ-2025 ಮತ್ತು ಜೂನ್-2025ರ ಮಾಹೆಯ ವೇತನ ಡ್ರಾ ಮಾಡಲು ಆಡಳಿತ ವಿಭಾಗದ ವಿಶೇಷ ಆಯುಕ್ತ ನವೀನ್ ಕುಮಾರ್ ರಾಜು ಆದೇಶಿಸಿದ್ದಾರೆ.
Related

You Might Also Like
ಬೆಂ.ಗ್ರಾಮಾಂತರ: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮ- ವಾಹನ, ಸಾರ್ವಜನಿಕರ ಪ್ರವೇಶ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ (ಜೂ.20) ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದಲ್ಲಿನ ಬಿ.ಜಿ.ಎಸ್ ಆಸ್ಪತ್ರೆಯ ನೂತನ ಘಟಕದ ಕಟ್ಟಡ...
ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ...
ಮಾವಿನ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ
ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದ...
ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ
ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ...
KKRTC ಕಂಡಕ್ಟರ್ ಮೇಲೆ ಹಲ್ಲೆ: ಮೂವರಿಗೆ ₹75 ಸಾವಿರ ದಂಡ- ಕಟ್ಟಲಾಗದಿದ್ದರೆ 6 ತಿಂಗಳು ಜೈಲು ಶಿಕ್ಷೆ- ಕೋರ್ಟ್ ಮಹತ್ವದ ತೀರ್ಪು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಮೂವರಿಗೆ ಅಫಜಲಪುರ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯ ತಲಾ...
KKRTC ವಿಜಯಪುರ: ತಂದೆ ನಿಧನರಾದ ನಾಲ್ಕೇ ದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಅಂತ ಚಾಲಕನಿಗೆ ಗೈರುಹಾಜರಿ ಮಾಡಿದ ಡಿಸಿ ನಾರಾಯಣಪ್ಪ ಕುರುಬರ
ಒಟ್ಟು 58 ದಿನ ರಜೆಯಲ್ಲಿದ್ದ ಚಾಲಕ ಕಂ ನಿರ್ವಾಹಕನಿಗೆ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ 7ದಿನ ರಜೆ ಮಂಜೂರು ಮಾಡಿದ ಡಿಸಿಯ ನಡೆ ಅನುಮಾನಕ್ಕೆ ಎಡೆ...
BMTC: ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣದ FIRಗೆ ಹೈ ಕೋರ್ಟ್ ತಡೆ
ಬಿಎಂಟಿಸಿ ಚಾಲಕನ ಪರ ವಕ್ಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ವಕೀಲ ಎಚ್.ಬಿ.ಶಿವರಾಜು ಬಹುತೇಕ ಸಾರಿಗೆ ನೌಕರರ ಎಲ್ಲ ಪ್ರಕರಣಗಳಲ್ಲೂ ಜಾಣ್ಮೆಯ ವಾದ ಮಂಡಿಸಿ...
KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....