CrimeNEWSನಮ್ಮರಾಜ್ಯ

ಪಿ.ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣ: ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವ ಮಂತ್ರಿಯ ಸಂಪುಟದಿಂದ ಕಿತ್ತುಹಾಕಿ: ಎಎಪಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅನೇಕ ಗುತ್ತಿದಾರರು, ಅಧಿಕಾರಿಗಳ ಜೀವದ ಜತೆ ಆಟವಾಡಿದ್ದ ಹಿಂದಿನ “40% ಕಮಿಷನ್‌ ಸರ್ಕಾರ”ದ ಚಾಳಿಯನ್ನೇ ಕಾಂಗ್ರೆಸ್‌ ಸರ್ಕಾರವೂ ಮೈಗೂಡಿಸಿಕೊಂಡಿದೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಆರೋಪಿಸಿದ್ದಾರೆ.

ಶಿವಮೊಗ್ಗದಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ. ಚಂದ್ರಶೇಖರನ್ (52) ಆತ್ಮಹತ್ಯೆ ಸಂಬಂಧ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ಸುಮಾರು 187 ಕೋಟಿ ರೂ. ಮೊತ್ತದ ಅವ್ಯವಹಾರಕ್ಕೆ ಸಂಬಂಧಿಸಿ ಬೆಂಗಳೂರು ಕಚೇರಿ ಅಧೀಕ್ಷಕ ಪಿ.ಚಂದ್ರಶೇಖರ್‌ ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದೇ ಇದಕ್ಕೆ ಸಾಕ್ಷಿ ಎಂದು ಆರೋಪಿಸಿದರು.

ಇನ್ನು ಡೆತ್‌‌ನೋಟ್‌ನಲ್ಲಿ ಚಂದ್ರಶೇಖರನ್‌ ಅವರು ನಮೂದಿಸಿರುವ ಮಂತ್ರಿ ಬಿ. ನಾಗೇಂದ್ರ ಅವರನ್ನು ಕೂಡಲೇ ಸಂಪುಟದಿಂದ ಕಿತ್ತುಹಾಕಬೇಕು. ಉನ್ನತ ಮಟ್ಟದ ತನಿಖೆ ನಡೆಸಬೇಕು. ಅವ್ಯವಹಾರದಲ್ಲಿ ಭಾಗಿಯಾಗಿರುವ ಮಂತ್ರಿ, ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅಧಿಕಾರಿಯ ಆತ್ಮಹತ್ಯೆ ಪ್ರಕರಣ ರಾಜ್ಯ ಸರ್ಕಾರವು ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿದೆ ಎಂಬುದನ್ನು ಎತ್ತಿ ತೋರಿಸುತ್ತಿದೆ. ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಾಗೆಲ್ಲ ದಾಖಲೆ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕೇಳುತ್ತಿದ್ದರು. ಇದೀಗ ದಾಖಲೆಯ ಸ್ವರೂಪವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿಯ ಡೆತ್‌ನೋಟ್‌ ಇದೆ.

ನಿಗಮದ 85 ಕೋಟಿ ರೂ.ಗಳನ್ನು ಅನ್ಯಾಯ ಮತ್ತು ನಿಯಮಬಾಹಿರವಾಗಿ ಲೂಟಿ ಮಾಡಿರುವ ಬಗ್ಗೆಯೂ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಸಚಿವರು ಮೌಖಿಕವಾಗಿ ಆದೇಶ ನೀಡಿದ್ದರೆಂದು ಉಲ್ಲೇಖಿಸಿದ್ದಾರೆ. ಇದೇನು ಕೇವಲ ಬಾಯಿ ಮಾತಿನಲ್ಲೇ ನಡೆಸುವ ಸರ್ಕಾರವಾಗಿದೆಯೇ ಎಂದು ಪ್ರಶ್ನಿಸಿದರು.

ಇನ್ನು ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ನೀಡುವುದಾಗಿ ಜನರಿಗೆ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರವೂ ಕಮಿಷನ್‌ ಭ್ರಷ್ಟಾಚಾರದ ಹಾದಿ ಹಿಡಿದಿರುವುದು ವಿಪರ್ಯಾಸ ಎಂದು ಜಗದೀಶ್‌ ವಿ. ಸದಂ ಬೇಸರ ವ್ಯಕ್ತಪಡಿಸಿದರು.

Leave a Reply

error: Content is protected !!
LATEST
ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ