NEWSನಮ್ಮಜಿಲ್ಲೆರಾಜಕೀಯ

ಮಂಡ್ಯದ ಜನತೆ ಪ್ರಾಮಾಣಿಕರು ಎಎಪಿ ಕೈ ಹಿಡಿಯುತ್ತಾರೆ : ಮುಖ್ಯಮಂತ್ರಿಚಂದ್ರು

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಈ ಮೂರು ಪಕ್ಷಗಳು ನಾಡಿನ ಜನತೆಗೆ ದ್ರೋಹ ಮಾಡಿವೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಡಾ. ಮುಖ್ಯ ಮಂತ್ರಿ ಚಂದ್ರು ಕಿಡಿಕಾರಿದ್ದಾರೆ.

ಸೋಮವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ರಾಜ್ಯದ 224 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದೆ ಎಂದು ತಿಳಿಸಿದರು.

ಇನ್ನು ಮಂಡ್ಯದ ಜನತೆ ಪ್ರಾಮಾಣಿಕರಾಗಿದ್ದು ಪ್ರಾಮಾಣಿಕರನ್ನು ನಂಬುವವರು. ಹೀಗಾಗಿ ಈ ಬಾರಿ ಎಎಪಿಯನ್ನು ಕೈ ಹಿಡಿಯಲಿದ್ದಾರೆ ಎಂಬ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ನಮ್ಮ ಪಕ್ಷದ ಕಾರುಯಕರ್ತರು ಎಎಪಿ ಬೆಂಬಲಿಸಲು ಮನವಿ ಮಾಡಬೇಕಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ಚೆನ್ನಪ್ಪ ಗೌಡ, ರಾಜ್ಯ ಕಾರ್ಯದರ್ಶಿ ನಂಜಪ್ಪ ಕಾಳೆಗೌಡ, ರಾಜ್ಯ ಜಂಟಿ ಕಾರ್ಯದರ್ಶಿ ಬಿ.ಸಿ.ಮಹದೇವಸ್ವಾಮಿ ಮತ್ತು ಮಳವಳ್ಳಿ ಕ್ಷೇತ್ರ, ಮಂಡ್ಯ ಜಿಲ್ಲಾಧ್ಯಕ್ಷರು ಶಿವಕುಮಾರ್, ಬೂದನೂರ ಬೋಮ್ಮಾಯ್ಯ, ಮುಖಂಡರಾದ ಜೆಸಿಬಿ ಕುಮಾರ್, ಅಭಿಷೇಕ್, ಅಶೋಕ್, ವಿಶ್ವನಾಥ್  ಹಾಗೂ ಶಿವಣ್ಣ ಇತರರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ