ರೈತರ ಮಕ್ಕಳೆಂದು ಅಧಿಕಾರಕ್ಕೆ ಬಂದ ಜನರಿಂದ ರೈತರ ಒಕ್ಕಲಪಿಸುವ ಕೆಲಸ: ಕುರುಬೂರು ಶಾಂತಕುಮಾರ್ ಆಕ್ರೋಶ

- ಕೂರ್ಗಳ್ಳಿ ಗ್ರಾಮ ಘಟಕ ಉದ್ಘಾಟನೆ
ಮೈಸೂರು: ರೈತರ ಮಕ್ಕಳೆಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಜನರು ಬಳಿಕ ರೈತರ ಒಕ್ಕಲಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಕೂರ್ಗಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ರೈತ ಸಂಘಟನೆಗಳ ಒಕ್ಕೂಟದ ಗ್ರಾಮ ಘಟಕವನ್ನು ಗಿಡ ನೆಟ್ಟು ನೀರೆರೆಯುವ ಮೂಲಕ ಉದ್ಘಾಟಿಸಿದ ಬಳಿಕ ಮಾಡಿದರು.
ಫಲವತ್ತಾದ ಕೃಷಿ ಭೂಮಿಗಳನ್ನು ರೈತರಿಂದ ಕಿತ್ತುಕೊಂಡು ಕೈಗಾರಿಕೆಗಳಿಗೆ ದಾನ ಮಾಡುತ್ತಿರುವ ಸರ್ಕಾರದ ನೀತಿಯ ವಿರುದ್ಧ ರೈತರು ಸಂಘಟಿತರಾಗಿ ಹೋರಾಟ ಮಾಡಬೇಕು. ಎಲ್ಲ ಪಕ್ಷದ ಅಧಿಕಾರಸ್ತರು ಹಸಿರು ಶಾಲು ಹಾಕಿಕೊಂಡು ರೈತರಿಗೆ ಮಕ್ಮಲ್ ಟೋಪಿ ಹಾಕುತ್ತಿದ್ದಾರೆ ಈ ಬಗ್ಗೆ ರೈತರು ಜಾಗೃತರಾಗಿರಬೇಕು ಎಂದು ಸಲಹೆ ನೀಡಿದರು.
ಇನ್ನು ಇದೇ ಆಗಸ್ಟ್ 25 ರಂದು ದೆಹಲಿಯಲ್ಲಿ ನಡೆಯಲಿರುವ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯತರ ಸಂಘಟನೆಯೇತರ ರೈತರ ಬೃಹತ್ ರ್ಯಾಲಿಯಲ್ಲಿ ಕರ್ನಾಟಕದಿಂದಲೂ ನೂರಾರು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಹಸಿರು ಶಾಲು ಮಹತ್ವ ಕುರಿತು ಮಾತನಾಡಿ, ಗ್ರಾಮ ಘಟಕಗಳು ಪ್ರತಿಷ್ಠೆಯ ಕಾರ್ಯಕ್ರಮಕ್ಕೆ ಬದಲು ರೈತರ ನೆರವಿಗೆ ಶ್ರಮಿಸಬೇಕು, ಆಗಮಾತ್ರ ಘಟಕ ಮಾಡಿದ್ದಕ್ಕೆ ಸಾರ್ಥಕವಾಗುತ್ತದೆ ಎಂದು ಸಲಹೆ ನೀಡಿದರು.
ಮೈಸೂರ್ ತಾಲೂಕ ಅಧ್ಯಕ್ಷ ಪೈಲ್ವಾನ್ ವೆಂಕಟೇಶ್ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರದಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ತಾಲೂಕು ಅಧ್ಯಕ್ಷ ಲಕ್ಷ್ಮೀಪುರ ವೆಂಕಟೇಶ್, ಸಂಘಟನಾ ಕಾರ್ಯದರ್ಶಿ ವರ್ಕೂಡು ನಾಗೇಶ್ ಕೂರ್ಗಳ್ಳಿ ಗ್ರಾಮ ಘಟಕದ ಅಧ್ಯಕ್ಷ ರವಿ, ಧನಂಜಯ್, ಶಿವರಾಜ್,ರಾಮು ಪ್ರಕಾಶ್, ಅಣ್ಣಯ್ಯ ,ರಾಜೇಂದ್ರ ,ನಾಗಣ್ಣ,ತಿಮ್ಮೇಗೌಡ, ಮನು, ಕೃಷ್ಣ, ವಾಜ ಮಂಗಲ ಮಹದೇವ್, ದೇವನೂರು ವಿಜಯೇಂದ್ರ, ಅಂಬಳೆ ಮಂಜುನಾಥ್, ಸಾಥಗಳ್ಳಿ ಬಸವರಾಜ್, ಕಾಟೂರ್ ಮಹದೇವಸ್ವಾಮಿ, ನಾಗೇಶ್, ಕೆಂಡಗಣ್ಣಪ್ಪ, ಸಿದ್ದರಾಮ, ಗಿರೀಶ್ ಸೇರಿದಂತೆ ನೂರಾರು ರೈತರು ಇದ್ದರು.
Related

You Might Also Like
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ನಿಧನ
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಇಂದು ತಡರಾತ್ರಿ ನಿಧನಹೊಂದಿದ್ದಾರೆ. ಕೆಂಗೇರಿ ಸಮೀಪ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ...
EPS ಪಿಂಚಣಿದಾರರಿಗೆ ಕನಿಷ್ಠ ಪಿಂಚಣಿ ಜಾರಿಗೆ ಸಂಸತ್ತಿನಲ್ಲಿ ಒತ್ತಾಯಿಸಲು ಆಗ್ರಹಿಸಿ ಸಂಸದರ ಮನೆ ಮುಂದೆ ಧರಣಿಗೆ ನಿರ್ಧಾರ
ಮೈಸೂರು: ಇಪಿಎಸ್ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ 7500 ರೂ.+ ಇತರೆ ಸೌಲಭ್ಯಗಳನ್ನು ಜಾರಿ ಮಾಡುವ ಸಂಬಂಧ ಲೋಕಸಭೆ ಅಧಿವೇಶನದಲ್ಲಿ ಗಮನ ಸೆಳೆಯುವಂತೆ ಮೈಸೂರು ಹಾಗೂ ಚಾಮರಾಜನಗರ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್: ಮತ್ತೆ ಜೈಲಿಗೆ ನಟ ದರ್ಶನ್ ಅಂಡ್ ಟೀಂ
ನ್ಯೂಡೆಲ್ಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಜಾಮೀನು...
ವಿಶ್ವವಿಖ್ಯಾತ ಮೈಸೂರು ದಸರಾ ನವ ತರುಣಿಯಂತೆ ಆಚರಣೆಯಲ್ಲಿರುವುದು ಕನ್ನಡಿಗರ-ಕರ್ನಾಟಕದ ಹೆಮ್ಮೆ!
ಮೈಸೂರು ಮಲ್ಲಿಗೆ, ಅರಮನೆಗಳ ನಗರಿ, ಪಾರಂಪರಿಕ ಕಟ್ಟಡಗಳುಳ್ಳ ಸಾಂಸ್ಕೃತಿಕ ನಗರಿ ಎಂಬಿತ್ಯಾದಿಯಾಗಿ ವರ್ಣನೆಗೆ ನಿಲುಕಿ ವಿಶ್ವದಲ್ಲೇ ಚಿರ ಪರಿಚಿತವಾಗಿರುವ ಮೈಸೂರು ಈಗ ಪ್ರವಾಸಿಗರ ಕೇಂದ್ರ ಬಿಂದು. ರಾಜರ...
ಮೈಸೂರು: ದಸರಾ ಆನೆಗಳಿಗೆ ನಿತ್ಯ ಅರಮನೆಯಿಂದ ಬನ್ನಿ ಮಂಟಪದವರೆಗೆ ಬೆಳಗ್ಗೆ-ಸಂಜೆ ದೈನಂದಿನ ನಡಿಗೆ ತಾಲೀಮು
ಮೈಸೂರು: ನಾಡಹಬ್ಬ ದಸರಾದ ಜಂಬೂ ಸವಾರಿ ಮೆರವಣಿಗೆ ತಾಲೀಮನ್ನು ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಈಗಾಗಲೇ ಆರಂಭಿಸಿದ್ದು, ಈ ತಾಲೀಮಿನಲ್ಲಿ ಗಜಪಡೆಯ ಮೊದಲ ಹಂತದ 9 ಆನೆಗಳು...