NEWSಕೃಷಿಮೈಸೂರು

ರೈತರ ಮಕ್ಕಳೆಂದು ಅಧಿಕಾರಕ್ಕೆ ಬಂದ ಜನರಿಂದ ರೈತರ ಒಕ್ಕಲಪಿಸುವ ಕೆಲಸ: ಕುರುಬೂರು ಶಾಂತಕುಮಾರ್ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ
  • ಕೂರ್ಗಳ್ಳಿ ಗ್ರಾಮ ಘಟಕ ಉದ್ಘಾಟನೆ

ಮೈಸೂರು: ರೈತರ ಮಕ್ಕಳೆಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಜನರು ಬಳಿಕ ರೈತರ ಒಕ್ಕಲಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಕೂರ್ಗಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ರೈತ ಸಂಘಟನೆಗಳ ಒಕ್ಕೂಟದ ಗ್ರಾಮ ಘಟಕವನ್ನು ಗಿಡ ನೆಟ್ಟು ನೀರೆರೆಯುವ ಮೂಲಕ ಉದ್ಘಾಟಿಸಿದ ಬಳಿಕ ಮಾಡಿದರು.

ಫಲವತ್ತಾದ ಕೃಷಿ ಭೂಮಿಗಳನ್ನು ರೈತರಿಂದ ಕಿತ್ತುಕೊಂಡು ಕೈಗಾರಿಕೆಗಳಿಗೆ ದಾನ ಮಾಡುತ್ತಿರುವ ಸರ್ಕಾರದ ನೀತಿಯ ವಿರುದ್ಧ ರೈತರು ಸಂಘಟಿತರಾಗಿ ಹೋರಾಟ ಮಾಡಬೇಕು. ಎಲ್ಲ ಪಕ್ಷದ ಅಧಿಕಾರಸ್ತರು ಹಸಿರು ಶಾಲು ಹಾಕಿಕೊಂಡು ರೈತರಿಗೆ ಮಕ್ಮಲ್ ಟೋಪಿ ಹಾಕುತ್ತಿದ್ದಾರೆ ಈ ಬಗ್ಗೆ ರೈತರು ಜಾಗೃತರಾಗಿರಬೇಕು ಎಂದು ಸಲಹೆ ನೀಡಿದರು.

ಇನ್ನು ಇದೇ ಆಗಸ್ಟ್ 25 ರಂದು ದೆಹಲಿಯಲ್ಲಿ ನಡೆಯಲಿರುವ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯತರ ಸಂಘಟನೆಯೇತರ ರೈತರ ಬೃಹತ್ ರ‍್ಯಾಲಿಯಲ್ಲಿ ಕರ್ನಾಟಕದಿಂದಲೂ ನೂರಾರು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು.

ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಹಸಿರು ಶಾಲು ಮಹತ್ವ ಕುರಿತು ಮಾತನಾಡಿ, ಗ್ರಾಮ ಘಟಕಗಳು ಪ್ರತಿಷ್ಠೆಯ ಕಾರ್ಯಕ್ರಮಕ್ಕೆ ಬದಲು ರೈತರ ನೆರವಿಗೆ ಶ್ರಮಿಸಬೇಕು, ಆಗಮಾತ್ರ ಘಟಕ ಮಾಡಿದ್ದಕ್ಕೆ ಸಾರ್ಥಕವಾಗುತ್ತದೆ ಎಂದು ಸಲಹೆ ನೀಡಿದರು.

ಮೈಸೂರ್ ತಾಲೂಕ ಅಧ್ಯಕ್ಷ ಪೈಲ್ವಾನ್ ವೆಂಕಟೇಶ್ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರದಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ತಾಲೂಕು ಅಧ್ಯಕ್ಷ ಲಕ್ಷ್ಮೀಪುರ ವೆಂಕಟೇಶ್, ಸಂಘಟನಾ ಕಾರ್ಯದರ್ಶಿ ವರ್ಕೂಡು ನಾಗೇಶ್ ಕೂರ್ಗಳ್ಳಿ ಗ್ರಾಮ ಘಟಕದ ಅಧ್ಯಕ್ಷ ರವಿ, ಧನಂಜಯ್, ಶಿವರಾಜ್,ರಾಮು ಪ್ರಕಾಶ್, ಅಣ್ಣಯ್ಯ ,ರಾಜೇಂದ್ರ ,ನಾಗಣ್ಣ,ತಿಮ್ಮೇಗೌಡ, ಮನು, ಕೃಷ್ಣ, ವಾಜ ಮಂಗಲ ಮಹದೇವ್, ದೇವನೂರು ವಿಜಯೇಂದ್ರ, ಅಂಬಳೆ ಮಂಜುನಾಥ್, ಸಾಥಗಳ್ಳಿ ಬಸವರಾಜ್, ಕಾಟೂರ್ ಮಹದೇವಸ್ವಾಮಿ, ನಾಗೇಶ್, ಕೆಂಡಗಣ್ಣಪ್ಪ, ಸಿದ್ದರಾಮ, ಗಿರೀಶ್ ಸೇರಿದಂತೆ ನೂರಾರು ರೈತರು ಇದ್ದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ