Breaking NewsNEWS

ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ಇನ್ನಾರು ದಿನಗಳೊಳಗೆ ಹೈ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ: ವಕೀಲ ಶಿವರಾಜು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ 4 ನಿಗಮಗಳಲ್ಲೂ ಕಳೆದ ಮೂರು ವರ್ಷದಿಂದ ವೇತನ ಪರಿಷ್ಕರಣೆ ಆಗದಿರುವುದನ್ನು ಪ್ರಶ್ನಿಸಿ ಹೈ ಕೋರ್ಟ್‌ನಲ್ಲಿ ಅತೀ ಇದೇ ಜ.30ರೊಳಗೆ ಅರ್ಜಿಸಲ್ಲಿಸಲಾಗುವುದು ಎಂದು ಸುಪ್ರೀಂ ಕೋರ್ಟ್‌ ಮತ್ತು ಹೈ ಕೋರ್ಟ್‌ ವಕೀಲರಾದ ಎಚ್‌.ಬಿ. ಶಿವರಾಜು ತಿಳಿಸಿದ್ದಾರೆ.

ಕಳೆದ 2020ರ ಜನವರಿ 1ರಿಂದ ಅಂದರೆ ಸರಿ ಸುಮಾರು 3ವರ್ಷ ಒಂದು ತಿಂಗಳ ಹಿಂದೆಯೇ ನಾಲ್ಕೂ ನಿಗಮಗಳ ಅಧಿಕಾರಿಗಳಿಗೆ ಮತ್ತು ನೌಕರರಿಗೆ ವೇತನ ಪರಿಷ್ಕರಣೆ ಆಗಬೇಕಿತ್ತು. ಆದರೆ ಈವರೆಗೂ ಆಗಿಲ್ಲ. ಹೀಗಾಗಿ ಅಧಿಕಾರಿಗಳು ಮತ್ತು ನೌಕರರು ಕಳೆದ ಮೂರು ವರ್ಷದಿಂದಲೂ ವೇತನ ಹೆಚ್ಚಳವಿಲ್ಲದೆ ದುಡಿಯುತ್ತಿದ್ದಾರೆ. ಹೀಗಾಗಿ ಅವರ ವೇತನ ಪರಿಷ್ಕರಣೆಗಾಗಿ ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ವೇತನ ಸೇರಿದಂತೆ ನೌಕರರಿಗೆ ನಿಗಮಗಳಲ್ಲಿ ಆಗುತ್ತಿರುವ ಅನೇಕ ಸಮಸ್ಯೆಗಳನ್ನು ವಿವರವಾಗಿ ಸುಮಾರು 60 ಪುಟಗಳನ್ನೊಳಗೊಂಡ ಈ ಅರ್ಜಿಯನ್ನು ಸಿದ್ಧಪಡಿಸಿದ್ದು, ಹೈ ಕೋರ್ಟ್‌ಗೆ ಹಾಕುವುದೊಂದೆ ಬಾಕಿ ಇದೆ ಎಂದು ವಿಜಯಪಥಕ್ಕೆ  ಶಿವರಾಜು ಮಾಹಿತಿ ನೀಡಿದ್ದಾರೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ