CrimeNEWSನಮ್ಮರಾಜ್ಯಸಂಸ್ಕೃತಿ

ಪೋಕ್ಸೋ ಪ್ರಕರಣ: 9ದಿನ ನ್ಯಾಯಾಂಗ ಬಂಧನಕ್ಕೆ ಮುರುಘಾ ಶ್ರೀ – ಜಾಮೀನು ಸಿಗುವುದು ಕಷ್ಟ

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾ ಶ್ರೀ ಅವರನ್ನು ಕೋರ್ಟ್‌ 9ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇಂದು ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಶ್ರೀಗಳಿಗೆ ಸೆಪ್ಟೆಂಬರ್ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ. ಹೀಗಾಗಿ 9 ದಿನಗಳ ನ್ಯಾಯಾಂಗ ಬಂಧನದಲ್ಲಿ ಶ್ರೀಗಳು ಇರಬೇಕಿದೆ.

ಭಾನುವಾರ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಪೊಲೀಸರು ಶ್ರೀಗಳನ್ನು ಜೆಎಂಎಫ್‍ಸಿ ಕೋರ್ಟ್‌ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೋಮಲ ವಿಚಾರಣೆ ಮುಗಿತಾ ಎಂದು ಪ್ರಶ್ನಿಸಿದರು.

ಈ ವೇಳೆ ತನಿಖೆ ಮುಗಿದಿದ್ದು ನಮ್ಮ ಕಸ್ಟಡಿಗೆ ಬೇಡ ಎಂದು ಪೊಲೀಸರು ಕೋರ್ಟ್‌ಗೆ ತಿಳಿಸಿದ್ದರು. ಹೀಗಾಗಿ ನ್ಯಾ.ಕೋಮಲಾ ಅವರು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.

ಜಾಮೀನು ಸಿಗುವುದು ಕಷ್ಟ: ಈವರೆಗೆ ದಾಖಲಾದ ಪೋಕ್ಸೋ ಪ್ರಕರಣಗಳಲ್ಲಿ ಅಷ್ಟು ಸುಲಭವಾಗಿ ಜಾಮೀನು ಸಿಕ್ಕಿಲ್ಲ. ಪೋಕ್ಸೋ ಕೇಸ್‍ನಲ್ಲಿ ಆರೋಪ ಸಾಬೀತಾರೆ, 16 ವರ್ಷದೊಳಗಿನ ಮಕ್ಕಳ ಮೇಲೆ ದೌರ್ಜನ್ಯ ಎಸಗಿದರೆ ಕನಿಷ್ಠ 20 ವರ್ಷ ಜೈಲುವಾಸವಾದರೆ, ಗರಿಷ್ಠ ಜೀವಾವಧಿ ಶಿಕ್ಷೆ ಇದೆ. 16 ರಿಂದ 18 ವರ್ಷ ಒಳಗಿನ ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಕನಿಷ್ಟ 10 ವರ್ಷ ಜೈಲು ಶಿಕ್ಷೆ, ಗರಿಷ್ಠ ಜೀವಾವಧಿ ಶಿಕ್ಷೆಯನ್ನು ಸಹ ವಿಧಿಸಬಹುದಾಗಿದೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್