ಚಿನ್ನ ಕದ್ದು ಗಿರಿವಿ ಇಟ್ಟು ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನ ಬರ್ಬರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು

ಮೈಸೂರು: ಚಿನ್ನ ಕದ್ದು, ಅದನ್ನು ಗಿರಿವಿ ಇಟ್ಟು, ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಚಾಮರಾಜನಗರ ಜಿಲ್ಲೆಯ ಬ್ಯಾಡರಪುರದ ಮೋಹನ್ ಕುಮಾರ್ (31) ಹತ್ಯೆಯಾದ ಯುವಕ. ಆರೋಪಿಗಳು ಯುವಕ 60 ಗ್ರಾಂ ಚಿನ್ನ ಕದ್ದ ಎಂದು ಕಾರಿನಲ್ಲೇ ಹೊಡೆದು ಕೊಂದು ನಂತರ ಆತನ ದೇಹವನ್ನು ಸುಟ್ಟು ಹಾಕಿದ್ದರು.
ಮೈಸೂರು ಜಿಲ್ಲಾ ಪೊಲೀಸರು ಅಪರಿಚಿತ ಶವ ಸುಟ್ಟು ಹಾಕಿದ್ದ ಪ್ರಕರಣ ದಾಖಲಿಸಿಕೊಂಡು ಬಳಿಕ ಶೋಧಕಾರ್ಯದಲ್ಲಿ ತೊಡಗಿದರು. ಈಗ ಅದನ್ನು ಭೇದಿಸಿದ್ದಾರೆ. ಹೀಗಾಗಿ ಕಳೆದ ಏಪ್ರಿಲ್ 18 ರಂದು ಮೈಸೂರಿನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಒಟ್ಟು 4 ಆರೋಪಿಗಳನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.
ಮೈಸೂರು ಮೂಲದ ಶ್ರೀನಿವಾಸ್ ಪ್ರಮುಖ ಆರೋಪಿ. ಮೋಹನ್ ಕುಮಾರ್ ಕೊಲೆ ಪ್ರಕರಣದಲ್ಲಿ ಪ್ರಜ್ವಲ್, ಚಂದು, ಕಬೀರ್ ಕಾಳಯ್ಯ ಮತ್ತು ದರ್ಶನ್ ಎಂಬುವರನ್ನು ಬಂಧಿಸಲಾಗಿದೆ. ಕೊಲೆಯಾದ ಮೋಹನ್ ಕುಮಾರ್ ಬೋಗಾದಿಯಲ್ಲಿರುವ ಲಾಡ್ಜ್ ಒಂದರ ಮ್ಯಾನೇಜರ್ ಆಗಿದ್ದರು.
ಕೊಲೆ ಆರೋಪಿ ಶ್ರೀನಿವಾಸ್ ಇಸ್ಪೀಟ್ ಆಡಲು ಲಾಡ್ಜ್ಗೆ ಬರುತ್ತಿದ್ದ. ಶ್ರೀನಿವಾಸ್ ಜೂಜಾಟಕ್ಕಾಗಿ ತನ್ನ ಪತ್ನಿಯ 60 ಗ್ರಾಂ ಚಿನ್ನದ ಸರವನ್ನು ತಂದಿದ್ದ. ಆ ದಿನ ಹುಣ್ಣಿಮೆ ಇದ್ದ ಕಾರಣ ಅದನ್ನು ಗಿರವಿ ಇಟ್ಟುಕೊಳ್ಳಲ್ಲ ಎಂದು ಮಾರ್ವಾಡಿ ಅಂಗಡಿಯವನು ಹೇಳಿದ್ದ.
ನಂತರ, ಶ್ರೀನಿವಾಸ್ ಲಾಡ್ಜ್ ಕೋಣೆಯಲ್ಲಿ ಹಾಸಿಗೆಯ ದಿಂಬಿನ ಕೆಳಗೆ ಚಿನ್ನದ ಸರವನ್ನು ಇಟ್ಟಿದ್ದ. ಅದೇ ಸಮಯದಲ್ಲಿ, ಮೋಹನ್ ಕುಮಾರ್ ಚಿನ್ನದ ಸರವನ್ನು ಕದ್ದಿದ್ದ. ನಂತರ, ಅವನು ತನ್ನ ಊರಾದ ಬ್ಯಾಡರಪುರಕ್ಕೆ ಹೋಗಿ, ಕದ್ದ ಚಿನ್ನದ ಸರವನ್ನು ಅಡವಿಟ್ಟು ನಿಶ್ಚಿತಾರ್ಥ ಮಾಡಿಕೊಂಡನು.
ಈ ಸಂಬಂಧ ಸರಸ್ವತಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಶ್ರೀನಿವಾಸ್ ತನ್ನ ಸ್ನೇಹಿತರ ತಂಡವನ್ನು ರಚಿಸಿ, ಮನೆಯಿಂದ ಮೋಹನ್ ಕುಮಾರ್ ಅವರನ್ನು ಕರೆಸಿ, ಕಾರಿನಲ್ಲಿ ಕರೆದೊಯ್ದು ಕೊಲೆ ಮಾಡಿದ್ದಾನೆ.
ನಂತರ ಆರೋಪಿಗಳು ಮೈಸೂರು ತಾಲೂಕಿನ ಗುಮಚನಹಳ್ಳಿ ಬಳಿ ಯಾರಿಗೂ ತಿಳಿಯದಂತೆ ಹಗಲು ಹೊತ್ತಿನಲ್ಲೇ ಶವವನ್ನು ಸುಟ್ಟು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಜಯಪುರ ಪೊಲೀಸರು ತನಿಖೆ ನಡೆಸಿದಾಗ ಕೊಲೆಯ ನಿಗೂಢತೆ ಬಯಲಾಗಿದೆ.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29)...