NEWSನಮ್ಮರಾಜ್ಯಸಿನಿಪಥ

ಸರಳ ವಿವಾಹದ ಮೂಲಕ ಇಂದು ನವ ಜೀವನಕ್ಕೆ ಕಾಲಿಟ್ಟ ಮಳೆ ಹುಡುಗಿ ಪೂಜಾ ಗಾಂಧಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಂಗಾರು ಮಳೆ ಸಿನಿಮಾ ಮೂಲಕ ಅಭಿಮಾನಿಗಳಿಗೆ ಚಿರಪರಿಚಿತರಾದ ನಟಿ ಪೂಜಾ ಗಾಂಧಿ ಇಂದು ಯಲಹಂಕದ ಖಾಸಗಿ ರೆಸಾರ್ಟ್‌ವೊಂದರಲ್ಲಿ ವಿಜಯ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಪಾದರ್ಪಣೆ ಮಾಡಿದರು.

ಉದ್ಯಮಿ ಹಾಗೂ ಕನ್ನಡ ಕಲಿಸಿಕೊಟ್ಟ ವಿಜಯ್ ಘೋರ್ಪಡೆ ಅವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಟ್ಟಿದ್ದಾರೆ. ವಿಜಯ್ ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರಾಗಿದ್ದು, ಅವರನ್ನು ಇಂದು ಸರಳ ವಿವಾಹವಾಗುವ ಮೂಲಕ ನವ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮದುವೆ ಅತ್ಯಂತ ಸರಳವಾಗಿ ನಡೆದಿರುವುದರಿಂದ ಕೇವಲ ಹಸ್ತಾಕ್ಷರದಲ್ಲಿ ಆಮಂತ್ರಣ ಪತ್ರಿಕೆಯನ್ನು ಸಿದ್ಧಮಾಡಿ, ಆಪ್ತರಿಗೆ ಕಳುಹಿಸಿದ್ದರು ಅವರಲ್ಲಿ ಯೋಗರಾಜ್ ಭಟ್, ಸುಧಾರಾಣಿ, ಶುಭ ಪೂಂಜಾ, ಸುಮನಾ ಕಿತ್ತೂರು, ಸಾಹಿತಿ ಜಯಂತ್ ಕಾಯ್ಕಿಣಿ ಸಂಜನಾ ಗಲ್ರಾನಿ ಸೇರಿದಂತೆ ಅನೇಕರು ಭಾಗಿಯಾಗಿ ನವಜೋಡಿಗೆ ಶುಭ ಕೋರಿದರು. ಮಳೆ ಹುಡುಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರೋದು ಅಭಿಮಾನಿಗಳಿಗೂ ಖುಷಿ ಕೊಟ್ಟಿದ್ದು ಅವರು ಶುಭಾಶಯ ತಿಳಿಸಿದ್ದಾರೆ.

ಮದುವೆಯಲ್ಲಿ ಪೂಜಾ ಗಾಂಧಿ ಶ್ವೇತವರ್ಣದ ಸೀರೆಯಲ್ಲಿ ಮಿಂಚಿದರೆ, ವಿಜಯ್ ಕೂಡ ಬಿಳಿ ಬಣ್ಣದ ಶೆರ್ವಾನಿಯಲ್ಲಿ ಕಾಣಿಸಿಕೊಂಡರು. ಒಟ್ಟಾರೆ 10 ವರ್ಷಗಳ ಪ್ರೀತಿಗೆ ಈ ಜೋಡಿ ಇಂದು ಮದುವೆಯ ಮುದ್ರೆ ಒತ್ತಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ