NEWSನಮ್ಮಜಿಲ್ಲೆನಮ್ಮರಾಜ್ಯ

ಕಳಪೆ ಬೇರಿಂಗ್, ಶಾಕ್‌ ಅಬ್ಸಾರ್ವರ್‌ ಬಳಕೆ- ಸ್ಟೀಲ್‌ ಸೇತುವೆ ಬಿಜೆಪಿ ಸರ್ಕಾರದ 40% ದಂಧೆಯ ಅಕ್ರಮ ಶಿಶು: ಮೋಹನ್‌ ದಾಸರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜಧಾನಿಯ ಶಿವಾನಂದ ವೃತ್ತದಲ್ಲಿ 39 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಸ್ಟೀಲ್‌ ಬ್ರಿಡ್ಜ್‌ ಬಿಜೆಪಿ ಸರ್ಕಾರದ 40% ಕಮಿಷನ್‌ ದಂಧೆಯ ಅಕ್ರಮ ಶಿಶು ಎಂದು ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇಂದು ಪಕ್ಷದ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮೋಹನ್‌ ದಾಸರಿ, “ಶಿವಾನಂದ ವೃತ್ತದ ಸ್ಟೀಲ್‌ ಸೇತುವೆಯನ್ನು ಕಳಪೆ ಗುಣಮಟ್ಟದ ಬೇರಿಂಗ್, ಶಾಕ್‌ ಅಬ್ಸಾರ್ವರ್‌ ಬಳಸಿ ನಿರ್ಮಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಗಸ್ಟ್‌ 15ರಿಂದ ಒಂದು ಬದಿಯ ಸಂಚಾರ ಆರಂಭವಾಗಿದ್ದು, ಅಲ್ಲಿ ಸಂಚರಿಸಿದರೆ ಕಳಪೆ ಕಾಮಗಾರಿ ಸ್ಪಷ್ಟವಾಗುತ್ತಿದೆ. ಸೇತುವೆಯಲ್ಲಿ ಸುಮಾರು 20 ಮೀಟರ್‌ಗೊಮ್ಮೆ ಜಾಯಿಂಟ್‌ಗಳಿದ್ದು, ಅಲ್ಲಿ ವಾಹನಸವಾರರಿಗೆ ಕಿರಿಕಿರಿಯಾಗುವಂತಹ ಅವೈಜ್ಞಾನಿಕ ಹಂಪುಗಳನ್ನು ನಿರ್ಮಿಸಲಾಗಿದೆ. ಲಘು ವಾಹನ ಸಂಚರಿಸಿದರೂ ಸೇತುವೆಯು ವೈಬ್ರೇಟ್‌ ಆಗುತ್ತಿದೆ ಎಂದು ಆರೋಪಿಸಿದರು.

ಆಗಸ್ಟ್‌ 30ರಂದು ಶಿವಾನಂದ ವೃತ್ತದ ಸ್ಟೀಲ್‌ ಸೇತುವೆಯು ಪೂರ್ಣಪ್ರಮಾಣದಲ್ಲಿ ಲೋಕಾರ್ಪಣೆಯಾಗುವ ಸಾಧ್ಯತೆಯಿದೆ. ಆಮ್‌ ಆದ್ಮಿ ಪಾರ್ಟಿಯು ಅದರ ಹಿಂದಿನ ದಿನವಾದ ಆಗಸ್ಟ್‌ 29ರಂದು ಉದ್ಘಾಟನೆಯ ಅಣಕು ಪ್ರದರ್ಶನ ನಡೆಸಿ ಕಳಪೆ ಕಾಮಗಾರಿಯನ್ನು ಬಯಲು ಮಾಡಲಿದೆ. ಈ ಮೂಲಕ ಭ್ರಷ್ಟ ಬಿಜೆಪಿ ಸರ್ಕಾರದ ಅವ್ಯವಹಾರದ ಕುರಿತು ಜನಜಾಗೃತಿ ಮೂಡಿಸುತ್ತೇವೆ ಎಂದು ದಾಸರಿ ತಿಳಿಸಿದರು.

2017ರಲ್ಲಿ ಆರಂಭವಾದ ಕಾಮಗಾರಿಯು ಪೂರ್ಣಗೊಳ್ಳಲು ಇಷ್ಟು ವರ್ಷಗಳ ಸಮಯ ತೆಗೆದುಕೊಂಡಿರುವುದು ದುರಂತ. ಆರಂಭದಲ್ಲಿ ಕೇವಲ 19 ಕೋಟಿ ರೂಪಾಯಿಯಾಗಿದ್ದ ಕಾಮಗಾರಿ ಮೊತ್ತವು ಈಗ ಬರೋಬ್ಬರಿ 39 ಕೋಟಿ ರೂಪಾಯಿಗೆ ಏರಿಕೆಯಾಗಿದೆ ಎಂದು ಕಿಡಿಕಾರಿದರು.

ಇನ್ನು ಈ ಹಿಂದೆ ಸಿದ್ದರಾಮಯ್ಯ ಸರ್ಕಾರವು 2000 ಕೋಟಿ ರೂ. ವೆಚ್ಚದಲ್ಲಿ ಚಾಲುಕ್ಯ ವೃತ್ತದಿಂದ ಹೆಬ್ಬಾಳದ ತನಕ ಸ್ಟೀಲ್‌ ಸೇತುವೆ ನಿರ್ಮಾಣ ನೆಪದಲ್ಲಿ ಲೂಟಿಗೆ ಮುಂದಾದಾಗ ಎಎಪಿ ಹಾಗೂ ಹಲವು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಆಗ ಸಿದ್ದರಾಮಯ್ಯನವರ ವಿರುದ್ಧ 500 ಕೋಟಿ ರೂಪಾಯಿ ಲಂಚ ಪಡೆದ ಆರೋಪ ಕೇಳಿಬಂದಿತ್ತು. ಇದರಿಂದ ಪ್ರೇರಣೆಗೊಂಡ ಬಿಜೆಪಿ ಸರ್ಕಾರವು ಅಕ್ರಮ ನಡೆಸಲೆಂದೇ ಸ್ಟೀಲ್‌ ಸೇತುವೆಯನ್ನು ಪೂರ್ಣಗೊಳಿಸಿದೆ ಎಂದು ಮೋಹನ್‌ ದಾಸರಿ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಉಪಾಧ್ಯಕ್ಷ ಬಿ.ಟಿ.ನಾಗಣ್ಣ ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲವು ದಿನಗಳ ಹಿಂದೆ ಶೇ. 40ರಷ್ಟಿದ್ದ ಕಮಿಷನ್‌ ಈಗ ಶೇ. 50ಕ್ಕೆ ಏರಿಕೆಯಾಗಿದೆ ಎಂದು ಬಿಬಿಎಂಪಿಯ ಆಯುಕ್ತರಿಗೆ ಬಿಬಿಎಂಪಿ ಕಾರ್ಯನಿರತ ಪತ್ರಕರ್ತರ ಸಂಘವು ದೂರು ಸಲ್ಲಿಸಿರುವುದು ಆಘಾತಕಾರಿ ಎಂದು ಆತಂಕ ವ್ಯಕ್ತಪಡಿಸಿದರು.

ಇತ್ತ ಕಮಿಷನ್‌ ನೀಡಲು ಒಪ್ಪದ ಕಾರಣಕ್ಕಾಗಿ ಹಲವು ಗುತ್ತಿಗೆದಾರರಿಗೆ 22 ತಿಂಗಳುಗಳಿಂದ ಬಿಬಿಎಂಪಿ ಬಿಲ್‌ ಪಾವತಿಯಾಗಿಲ್ಲ. ಕಮಿಷನ್‌ ದಂಧೆಗೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗುತ್ತಿದ್ದರೂ ಬಿಜೆಪಿಯು ತಲೆಕೆಡಿಸಿಕೊಳ್ಳದೇ, ಕಮಿಷನ್‌ ಹೆಚ್ಚಿಸುವುದರಲ್ಲಿ ನಿರತವಾಗಿದೆ ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ರಾಜಶೇಖರ್ ದೊಡ್ಡಣ್ಣ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ !