NEWSನಮ್ಮರಾಜ್ಯಶಿಕ್ಷಣ-

ಪೂರ್ವಿಕ್ ಎಸ್.ವಿ.ದಾಸ್ ದ್ವಿತೀಯ ಪಿಯು ಪರೀಕ್ಷೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಐದನೇ ರ‍್ಯಾಂಕ್‌

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ದ್ವಿತೀಯ ಪಿಯುಸಿ ಪರೀಕ್ಷೆ ವಿಜ್ಞಾನ ವಿಭಾಗದಲ್ಲಿ ಪೂರ್ವಿಕ್ ಎಸ್.ವಿ.ದಾಸ್ 600ಕ್ಕೆ 594 ಅಂಕ ಪಡೆದು ರಾಜ್ಯಕ್ಕೆ ಐದನೇ ರ‍್ಯಾಂಕ್‌ ಪಡೆದಿದ್ದಾರೆ.

ಪೂರ್ವಿಕ್ ಎಸ್.ವಿ.ದಾಸ್ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ, ಹುಲಿಯೂರುದುರ್ಗ ಹೋಬಳಿಯ ಚೌಡನಕುಪ್ಪೆ ಗ್ರಾಮದ ನಿವಾಸಿ ಹಾಗೂ ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯದ ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಪ್ರೊ.ಸಿ.ಡಿ. ವೆಂಕಟೇಶ್ ಮತ್ತು ಡಾ. ಶಶಿಕಲಾ ದಂಪತಿಯ ಪುತ್ರ.

ಪೂರ್ವಿಕ್ ಬೆಂಗಳೂರಿನ ಶಾರದನಗರ ವಸಂತಪುರ, ಉತ್ತರಹಳ್ಳಿ ಮುಖ್ಯ ರಸ್ತೆಯ ವೇದಾಂತ ಪಿಯು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಬುಧವಾರ ಹೊರಬಿದ್ದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿಜ್ಞಾನ ವಿಭಾಗದಲ್ಲಿ 600ಕ್ಕೆ 594 ಅಂಕ ಪಡೆದು ರಾಜ್ಯಕ್ಕೆ ಐದನೇ ರ‍್ಯಾಂಕ್‌ ಬಂದಿದ್ದಾರೆ.

ಈ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದು, ಇದೇ ಸಂದರ್ಭದಲ್ಲಿ ಪ್ರಾಂಶುಪಾಲರು, ಕಾಲೇಜಿನ ಆಡಳಿತ ಮಂಡಳಿ, ಪೋಷಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

ಪೃಥ್ವಿರಾಜ್‌ ಎಲ್‌. ದ್ವಿತೀಯ ಪಿಯು ಪರೀಕ್ಷೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನದಲ್ಲಿ ಉತ್ತೀರ್ಣ

ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆ ವಿಜ್ಞಾನ ವಿಭಾಗದಲ್ಲಿ ಪೃಥ್ವಿರಾಜ್‌ ಎಲ್‌. 600ಕ್ಕೆ 427 ಅಂಕ ಪಡೆಯುವ ಮೂಲಕ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಪೃಥ್ವಿರಾಜ್‌ ಎಲ್‌. ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ, ಬನ್ನೂರು ಹೋಬಳಿಯ ಬೀಡನಹಳ್ಳಿ ಗ್ರಾಮದ ನಿವಾಸಿ ಹಾಗೂ ಪ್ರಸ್ತುತ ಜನಮಿತ್ರ ಪತ್ರಿಕೆಯ ಪ್ರಸರಣಾ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಲಿಂಗರಾಜು ಮತ್ತು ಪದ್ಮ ದಂಪತಿಯ ಪುತ್ರ.

ಪೃಥ್ವಿರಾಜ್‌ ಎಲ್‌. ಮೈಸೂರಿನ ಕುವೆಂಪು ನಗರದ ಸರ್ಕಾರಿ ಪರವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಬುಧವಾರ ಹೊರಬಿದ್ದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿಜ್ಞಾನ ವಿಭಾಗದಲ್ಲಿ 600ಕ್ಕೆ 427 ಅಂಕ ಪಡೆದು ಪಾಸಾಗಿದ್ದಾರೆ.

ಈ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದು, ಇದೇ ಸಂದರ್ಭದಲ್ಲಿ ಪ್ರಾಂಶುಪಾಲರು, ಕಾಲೇಜಿನ ಆಡಳಿತ ಮಂಡಳಿ, ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ