CrimeNEWSನಮ್ಮರಾಜ್ಯ

ಬಿಜೆಪಿ ನಾಯಕರ ವಿರುದ್ಧದ ಪೋಸ್ಟ್: ಡಿಸಿಎಂ ಶಿವಕುಮಾರ್ ವಿರುದ್ಧ ಎಫ್‌ಐಆರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರ ವಿರುದ್ಧ ಫೋಟೋ ಪೋಸ್ಟ್ ಮಾಡಿದ ಆರೋಪದಡಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ.

ಕರ್ನಾಟಕ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಬಿ.ಎಸ್‌. ಯಡಿಯೂರಪ್ಪ, ಬಿ.ವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರ ಕೈಗೆ ಸ್ಲೇಟ್‌ ಕೊಟ್ಟ ಫೋಟೋಗಳನ್ನು ಪೋಸ್ಟ್ ಮಾಡಲಾಗಿತ್ತು.

ಈ ಫೋಟೋ ಪೋಸ್ಟ್‌ಗೆ ಸಂಬಂಧಪಟ್ಟಂತೆ ಯೋಗೇಂದ್ರ ಹೊಡಾಘಟ್ಟ ಅವರು ಪಿಸಿಆರ್ ದಾಖಲು ಮಾಡಿದ್ರು. 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯ ಡಿಕೆಶಿ ಮತ್ತು ಬಿ.ಆರ್. ನಾಯ್ಡು ವಿರುದ್ದ ಕೇಸ್‌ಗೆ ಆದೇಶಿಸಿತ್ತು. ಕೋರ್ಟ್ ಆದೇಶದಂತೆ IPC 153(A), 504, 506 & 464 ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಡಿಸಿಎಂ ಶಿವಕುಮಾರ್ ವಿರುದ್ಧ ನೀಡಿದ ದೂರಿನಲ್ಲಿ ಬಿಜೆಪಿ ನಾಯಕರ ಕೈಗೆ ಸ್ಲೇಟ್ ಕೊಟ್ಟು ಸುಳ್ಳು ಬರಹದ ಪೋಸ್ಟ್ ಮಾಡಲಾಗಿದೆ. ಬಿಜೆಪಿ ಶಾಸಕರು ಮತ್ತು ಸಂಸದರು ಸೇರಿ ಅನೇಕ ನಾಯಕರ ವಿರುದ್ಧ ಪೋಸ್ಟ್ ಮಾಡಲಾಗಿದ್ದು, ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಸದ್ಯ ದೂರು ದಾಖಲಾಗಿದೆ.

ಯಾವ ಸೆಕ್ಷನ್ ಏನು ಹೇಳುತ್ತದೆ: 153(a) : ವ್ಯಕ್ತಿಯ ವೈಯಕ್ತಿವಾಗಿ ಚಾರಿತ್ರ್ಯವಧೆ ಮಾಡುವುದು. 504 : ದುರುದ್ದೇಶಪೂರ್ವಕವಾಗಿ ನಿಂದನೆ ಮಾಡುವುದು. 506: ಪರೋಕ್ಷ ಅಥವಾ ಪ್ರತ್ಯಕ್ಷ ಜೀವ ಬೆದರಿಕೆ ಒಡ್ಡುವುದು. 464: ಸುಳ್ಳು ಪೋಸ್ಟ್ ಕ್ರಿಯೆಟ್ ಮಾಡಿ ಅಪಪ್ರಚಾರ ಆರೋಪ.

Leave a Reply

error: Content is protected !!
LATEST
KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ BMTC: ವೇತನಕ್ಕೆ ಆಗ್ರಹಿಸಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರ ದಿಢೀರ್‌ ಪ್ರತಿಭಟನೆ ನಮ್ಮಲ್ಲಿ ಒಳಜಗಳ ಗಿಳಜಗಳ ಯಾವುದೂ ಇಲ್ಲ : ಸಿಎಂ ಸಿದ್ದರಾಮಯ್ಯ ಲೋಕಸಮರ 2024: 7ನೇ ಹಂತದ ಚುನಾವಣೆ - ವಾರಣಾಸಿಯಿಂದ 3ನೇ ಬಾರಿಗೆ ಪರೀಕ್ಷೆಗಿಳಿದ ಪ್ರಧಾನಿ ಮೋದಿ KSRTC: ಕರ್ತವ್ಯದ ವೇಳೆಯೇ ಬ್ರೈನ್‌ಸ್ಟ್ರೋಕ್‌ - ಸಾರಿಗೆ ನೌಕರನಿಗೆ ಬೇಕಿದೆ ಆರ್ಥಿಕ ನೆರವು ನಾಲ್ಕನೇ ಹಂತದ ಲೋಕಸಭಾ ಚುನಾವಣೆ: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 62.84ರಷ್ಟು ಮತದಾನ