CrimeNEWSನಮ್ಮರಾಜ್ಯ

ಬಿಜೆಪಿ ನಾಯಕರ ವಿರುದ್ಧದ ಪೋಸ್ಟ್: ಡಿಸಿಎಂ ಶಿವಕುಮಾರ್ ವಿರುದ್ಧ ಎಫ್‌ಐಆರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರ ವಿರುದ್ಧ ಫೋಟೋ ಪೋಸ್ಟ್ ಮಾಡಿದ ಆರೋಪದಡಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ.

ಕರ್ನಾಟಕ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಬಿ.ಎಸ್‌. ಯಡಿಯೂರಪ್ಪ, ಬಿ.ವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರ ಕೈಗೆ ಸ್ಲೇಟ್‌ ಕೊಟ್ಟ ಫೋಟೋಗಳನ್ನು ಪೋಸ್ಟ್ ಮಾಡಲಾಗಿತ್ತು.

ಈ ಫೋಟೋ ಪೋಸ್ಟ್‌ಗೆ ಸಂಬಂಧಪಟ್ಟಂತೆ ಯೋಗೇಂದ್ರ ಹೊಡಾಘಟ್ಟ ಅವರು ಪಿಸಿಆರ್ ದಾಖಲು ಮಾಡಿದ್ರು. 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯ ಡಿಕೆಶಿ ಮತ್ತು ಬಿ.ಆರ್. ನಾಯ್ಡು ವಿರುದ್ದ ಕೇಸ್‌ಗೆ ಆದೇಶಿಸಿತ್ತು. ಕೋರ್ಟ್ ಆದೇಶದಂತೆ IPC 153(A), 504, 506 & 464 ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಡಿಸಿಎಂ ಶಿವಕುಮಾರ್ ವಿರುದ್ಧ ನೀಡಿದ ದೂರಿನಲ್ಲಿ ಬಿಜೆಪಿ ನಾಯಕರ ಕೈಗೆ ಸ್ಲೇಟ್ ಕೊಟ್ಟು ಸುಳ್ಳು ಬರಹದ ಪೋಸ್ಟ್ ಮಾಡಲಾಗಿದೆ. ಬಿಜೆಪಿ ಶಾಸಕರು ಮತ್ತು ಸಂಸದರು ಸೇರಿ ಅನೇಕ ನಾಯಕರ ವಿರುದ್ಧ ಪೋಸ್ಟ್ ಮಾಡಲಾಗಿದ್ದು, ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಸದ್ಯ ದೂರು ದಾಖಲಾಗಿದೆ.

ಯಾವ ಸೆಕ್ಷನ್ ಏನು ಹೇಳುತ್ತದೆ: 153(a) : ವ್ಯಕ್ತಿಯ ವೈಯಕ್ತಿವಾಗಿ ಚಾರಿತ್ರ್ಯವಧೆ ಮಾಡುವುದು. 504 : ದುರುದ್ದೇಶಪೂರ್ವಕವಾಗಿ ನಿಂದನೆ ಮಾಡುವುದು. 506: ಪರೋಕ್ಷ ಅಥವಾ ಪ್ರತ್ಯಕ್ಷ ಜೀವ ಬೆದರಿಕೆ ಒಡ್ಡುವುದು. 464: ಸುಳ್ಳು ಪೋಸ್ಟ್ ಕ್ರಿಯೆಟ್ ಮಾಡಿ ಅಪಪ್ರಚಾರ ಆರೋಪ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ