NEWSನಮ್ಮರಾಜ್ಯ

ಪ್ರೇಮಕುಮಾರಿ ಪ್ರಕರಣ: ಇಂದು ಮಾಜಿ ಸಚಿವ ರಾಮದಾಸ್ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಈ ಹಿಂದೆ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಪ್ರೇಮಕುಮಾರಿ ಪ್ರಕರಣದಲ್ಲಿ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಎಸ್‌.ಎ. ರಾಮದಾಸ್​ ಅವರಿಗೆ ಸುಪ್ರೀಂ ಕೋರ್ಟ್ ನಲ್ಲೂ ಹಿನ್ನಡೆಯಾಗಿದೆ.

ನಂಬಿಸಿ ವಂಚಿಸಿದ್ದಾರೆ ಎಂದು ಆರೋಪಿಸಿ ಪ್ರೇಮಕುಮಾರಿ ಅವರು ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ರಾಮದಾಸ್​​ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಪಂಕಜ್‌ ಮಿತ್ತಲ್‌, ಎಸ್‌.ವಿ.ಎನ್‌.ಭಟ್ಟಿ ಅವರನ್ನೊಳಗೊಂಡ  ದ್ವಿಸದ್ಯಪೀಠ​ ಇಂದು ವಜಾ ಮಾಡಿದೆ.

ತನ್ನನ್ನು ವಂಚಿಸಿದ್ದಾರೆಂದು ಪ್ರೇಮಕುಮಾರಿ ಅವರು ರಾಮದಾಸ್ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ರಾಮದಾಸ್ ಹೈಕೋರ್ಟ್​ ಮೆಟ್ಟಿಲೇರಿದ್ದರು. ಅದರೆ ಹೈಕೋರ್ಟ್​ ಪ್ರರಣವನ್ನು ರದ್ದುಪಡಿಸಲು ನಿರಾಕರಿಸಿತ್ತು.

ನಂತರ ರಾಮದಾಸ್ ಅವರು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಸಹ ಮಾಜಿ ಸಚಿವರ ಅರ್ಜಿಯನ್ನು ತಿರಸ್ಕರಿಸಿದೆ.

ಹೀಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮತ್ತೆ ವಿಚಾರಣೆ ನಡೆಯಲಿದೆ. ಇನ್ನು ಪ್ರೇಮ ಕುಮಾರಿ ಪರವಾಗಿ ಸುಪ್ರೀಂ ಕೋರ್ಟ್‌ ಮತ್ತು ಹೈ ಕೋರ್ಟ್‌ ವಲಕಿಲರಾದ ಎಚ್‌.ಬಿ.ಶಿವರಾಜು, ರಾಮ್‌ ಲಾಲ್‌ಚೌದರಿ ವಾದ ಮಂಡಿಸಿದರು.

ಇನ್ನು ಸುಪ್ರೀಂ ಕೋರ್ಟ್‌ ಮತ್ತು ಹೈ ಕೋರ್ಟ್‌ ವಲಕಿಲ ಎಚ್‌.ಬಿ.ಶಿವರಾಜು ಅವರು ಈ ಪ್ರರಣದ ವಕಾಲತ್ತು ವಹಿಸಿದ್ದರು ಕೂಡ ಒಂದು ರೂಪಾಯಿಯನ್ನು ಸಹ ಸಂಭಾವನೆ ಪಡೆದಿಲ್ಲ ಎಂದು ಪ್ರೇಮ ಕುಮಾರಿ ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
KSRTC: ಶೇ.12-15ರ ನಡುವೆ ವೇತನ ಹೆಚ್ಚಳ ಬಹುತೇಕ ಖಚಿತ, ಅಧಿಕೃತ ಆದೇಶ ಹೊರಬೀಳುವುದೊಂದೆ ಬಾಕಿ ! ಜನರ ಆಶೀರ್ವಾದವಿರುವ ನಮ್ಮ 'ಕುರ್ಚಿ'ಗಳು ಭದ್ರವಾಗಿವೆ, ಕನ್ನಡಿಗರು ಕೇಳುತ್ತಿರುವ ಈ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಿ... KSRTC: ಬ್ರೇಕ್ ಫೇಲಾಗಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್‌- ತಪ್ಪಿದ ಭಾರಿ ಅನಾಹುತ ನಾಗಮಲೆ ಬಳಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ KKRTC ದ್ವಂದ್ವ ನಿಲುವಿಗೆ ಹೈಕೋರ್ಟ್‌ ತೀವ್ರ ಅಸಮಾಧಾನ- 25 ಸಾವಿರ ರೂ. ದಂಡ, ಅಧಿಕಾರಿಗಳಿಂದಲೇ ವಸೂಲಿಗೆ ಆದೇಶ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಮಿಳಗ ವೆಟ್ರಿ ಕಳಗಂ ನಾಯಕ ದಳಪತಿ ವಿಜಯ್ ಅತೀ ಶೀಘ್ರದಲ್ಲೇ KSRTC ನಾಲ್ಕೂ ನಿಗಮಗಳ ಸಾರಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆ ! ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ನಿಧನ NWKRTC: ಮೇ 11ರಂದು ಹಾಲಿ ನೌಕರರಿಗೆ, ಮೇ 15ರಂದು ನಿವೃತ್ತರಿಗೆ ಮೇ18ರಂದು ವರ್ಗಾವಣೆಗೊಂಡ ನೌಕರರಿಗೆ 11 ತಿಂಗಳುಗಳ ವೇ... ಮೇ 11ರಂದು KSRTC ನೌಕರರಿಗೆ 11 ತಿಂಗಳು- KKRTC ನೌಕರರಿಗೆ 12 ತಿಂಗಳುಗಳ ವೇತನ ಹಿಂಬಾಕಿ ಪಾವತಿಗೆ ಆದೇಶ