NEWSನಮ್ಮಜಿಲ್ಲೆನಮ್ಮರಾಜ್ಯ

NWKRTC ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಪ್ರಿಯಾಂಗಾ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಎಂ. ಪ್ರಿಯಾಂಗಾ ಸೋಮವಾರ ಕಾರ್ಯಭಾರ ವಹಿಸಿಕೊಂಡಿದ್ದಾರೆ.

ನಿಕಟಪೂರ್ವ ಎಂಡಿ ಎಸ್‌.ಭರತ್‌ ಅವರು ನಿಗಮದ ಅಧಿಕಾರಿಗಳು/ ನೌಕರರಿಗೆ ಅನುಕೂರವಾಗುವಂತಹ ಹಲವಾರು ಕೆಲಸಗಳನ್ನು ಮಾಡಿ ತೋರಿಸಿದ್ದಾರೆ. ಅವರಂತೆ ಪ್ರಿಯಾಂಗಾ ಅವರು ಕೂಡ ಮಾಡಿ ತೋರಿಸಲಿದ್ದಾರೆ ಎಂಬ ಆಶಾ ಭಾನವನೆಯನ್ನು ನಿಗಮದ ಪ್ರತಿಯೊಬ್ಬರು ಹೊಂದಿದ್ದಾರೆ. ಅದಕ್ಕೆ ಚ್ಯುತಿ ಬಾರಂತೆ ನೂತನ ಎಂಡಿ ಅವರು ನಡೆದುಕೊಳ್ಳಬೇಕು ಎಂಬುವುದು ನಮ್ಮ ಆಶಯ ಕೂಡ.

ನಿಗಮಕ್ಕೆ 799 ಹೊಸ ಬಸ್‌ಗಳ ಸೇರ್ಪಡೆ: ಸಂಸ್ಥೆ ವ್ಯಾಪ್ತಿಯಲ್ಲಿ 2023-24 ನೇ ಸಾಲಿನಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹೊಸ ಬಸ್‌ಗಳ ಖರೀದಿ ಪ್ರಕ್ರಿಯೆಯು ಜಾರಿಯಲ್ಲಿದ್ದು, 20 ಪಲ್ಲಕ್ಕಿ ನಾನ್ ಏಸಿ ಸ್ಲೀಪರ್, 04 ಮಲ್ಟಿ ಆಕ್ಸಲ್ ಏಸಿ ಸ್ಲೀಪರ್ (ಅಂಬಾರಿ ಉತ್ಸವ), 675 BS-6 ಮಾದರಿಯ ಗ್ರಾಮಾಂತರ ಬಸ್‌ಗಳು ಹಾಗೂ 100 ನಗರ ಸಾರಿಗೆ ಬಸ್‌ಗಳು ಹೀಗೆ ಒಟ್ಟು 799 ಹೊಸ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ.

ಈ ಪೈಕಿ ಈಗಾಗಲೇ 10 ಪಲ್ಲಕ್ಕಿ ನಾನ್ ಏಸಿ ಸ್ಲೀಪರ್, 236 BS-6 ಮಾದರಿಯ ಗ್ರಾಮಾಂತರ ನೂತನ ಬಸ್ಸುಗಳು ರಸ್ತೆಗಿಳಿದಿದ್ದು ಸಾರ್ವಜನಿಕ ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತಿವೆ. ಉಳಿದಂತೆ 10 ಪಲ್ಲಕ್ಕಿ ನಾನ್ ಏಸಿ ಸ್ಲೀಪರ್, 04 ಮಲ್ಟಿ ಆಕ್ಸಲ್ ಏಸಿ ಸ್ಲೀಪರ್ (ಅಂಬಾರಿ ಉತ್ಸವ), 439 BS-6 ಮಾದರಿಯ ಗ್ರಾಮಾಂತರ ಬಸ್‌ಗಳು ಹಾಗೂ 100 ನಗರ ಸಾರಿಗೆ ಬಸ್‌ಗಳ ಖರೀದಿಗೆ ಟೆಂಡರ್ ಕರೆಯಲಾಗಿದ್ದು, ಶೀಘ್ರದಲ್ಲೇ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿವೆ.

ಇದಲ್ಲದೇ 150 ನಗರ ಹಾಗೂ 200 ಗ್ರಾಮಾಂತರ ಹೀಗೆ ಒಟ್ಟು 350 ಎಲೆಕ್ಟ್ರಿಕಲ್ ವಾಹನಗಳ ಖರೀದಿಗೆ ಟೆಂಡರ್ ಕರೆಯಲಾಗುವುದು. ಪಲ್ಲಕ್ಕಿ’ ಸ್ಲೀಪರ್‌ ಬಸ್‌ಗಳು ‘ಸಂತೋಷವು ಪ್ರಯಾಣಿಸುತ್ತಿದೆ’ ಎಂಬ ಟ್ಯಾಗ್‌ಲೈನ್‌ ಒಳಗೊಂಡಿವೆ. 11.3 ಮೀಟರ್‌ ಉದ್ದದ ಈ ಬಸ್‌ಗಳು 197 ಎಚ್‌ಪಿ ಇಂಜಿನ್‌ ಒಳಗೊಂಡಿವೆ. ಮಲಗಲು ಇರುವಷ್ಟೇ ಆರಾಮದಾಯಕ ವ್ಯವಸ್ಥೆ, ಕುಳಿತುಕೊಳ್ಳಲೂ ಇದೆ. ಪ್ರತಿ ಆಸನಕ್ಕೂ ಮೊಬೈಲ್‌, ಲ್ಯಾಪ್‌ಟಾಪ್‌ ಚಾರ್ಜಿಂಗ್‌, ಆಡಿಯೋ ಸ್ಪೀಕರ್‌, ಪಾದರಕ್ಷೆಗಳನ್ನು ಇಡುವ ಸೌಲಭ್ಯ ಕಲ್ಪಿಸಲಾಗಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ