NEWSನಮ್ಮಜಿಲ್ಲೆನಮ್ಮರಾಜ್ಯ

NWKRTC ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಪ್ರಿಯಾಂಗಾ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಎಂ. ಪ್ರಿಯಾಂಗಾ ಸೋಮವಾರ ಕಾರ್ಯಭಾರ ವಹಿಸಿಕೊಂಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನಿಕಟಪೂರ್ವ ಎಂಡಿ ಎಸ್‌.ಭರತ್‌ ಅವರು ನಿಗಮದ ಅಧಿಕಾರಿಗಳು/ ನೌಕರರಿಗೆ ಅನುಕೂರವಾಗುವಂತಹ ಹಲವಾರು ಕೆಲಸಗಳನ್ನು ಮಾಡಿ ತೋರಿಸಿದ್ದಾರೆ. ಅವರಂತೆ ಪ್ರಿಯಾಂಗಾ ಅವರು ಕೂಡ ಮಾಡಿ ತೋರಿಸಲಿದ್ದಾರೆ ಎಂಬ ಆಶಾ ಭಾನವನೆಯನ್ನು ನಿಗಮದ ಪ್ರತಿಯೊಬ್ಬರು ಹೊಂದಿದ್ದಾರೆ. ಅದಕ್ಕೆ ಚ್ಯುತಿ ಬಾರಂತೆ ನೂತನ ಎಂಡಿ ಅವರು ನಡೆದುಕೊಳ್ಳಬೇಕು ಎಂಬುವುದು ನಮ್ಮ ಆಶಯ ಕೂಡ.

ನಿಗಮಕ್ಕೆ 799 ಹೊಸ ಬಸ್‌ಗಳ ಸೇರ್ಪಡೆ: ಸಂಸ್ಥೆ ವ್ಯಾಪ್ತಿಯಲ್ಲಿ 2023-24 ನೇ ಸಾಲಿನಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹೊಸ ಬಸ್‌ಗಳ ಖರೀದಿ ಪ್ರಕ್ರಿಯೆಯು ಜಾರಿಯಲ್ಲಿದ್ದು, 20 ಪಲ್ಲಕ್ಕಿ ನಾನ್ ಏಸಿ ಸ್ಲೀಪರ್, 04 ಮಲ್ಟಿ ಆಕ್ಸಲ್ ಏಸಿ ಸ್ಲೀಪರ್ (ಅಂಬಾರಿ ಉತ್ಸವ), 675 BS-6 ಮಾದರಿಯ ಗ್ರಾಮಾಂತರ ಬಸ್‌ಗಳು ಹಾಗೂ 100 ನಗರ ಸಾರಿಗೆ ಬಸ್‌ಗಳು ಹೀಗೆ ಒಟ್ಟು 799 ಹೊಸ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ.

ಈ ಪೈಕಿ ಈಗಾಗಲೇ 10 ಪಲ್ಲಕ್ಕಿ ನಾನ್ ಏಸಿ ಸ್ಲೀಪರ್, 236 BS-6 ಮಾದರಿಯ ಗ್ರಾಮಾಂತರ ನೂತನ ಬಸ್ಸುಗಳು ರಸ್ತೆಗಿಳಿದಿದ್ದು ಸಾರ್ವಜನಿಕ ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತಿವೆ. ಉಳಿದಂತೆ 10 ಪಲ್ಲಕ್ಕಿ ನಾನ್ ಏಸಿ ಸ್ಲೀಪರ್, 04 ಮಲ್ಟಿ ಆಕ್ಸಲ್ ಏಸಿ ಸ್ಲೀಪರ್ (ಅಂಬಾರಿ ಉತ್ಸವ), 439 BS-6 ಮಾದರಿಯ ಗ್ರಾಮಾಂತರ ಬಸ್‌ಗಳು ಹಾಗೂ 100 ನಗರ ಸಾರಿಗೆ ಬಸ್‌ಗಳ ಖರೀದಿಗೆ ಟೆಂಡರ್ ಕರೆಯಲಾಗಿದ್ದು, ಶೀಘ್ರದಲ್ಲೇ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿವೆ.

ಇದಲ್ಲದೇ 150 ನಗರ ಹಾಗೂ 200 ಗ್ರಾಮಾಂತರ ಹೀಗೆ ಒಟ್ಟು 350 ಎಲೆಕ್ಟ್ರಿಕಲ್ ವಾಹನಗಳ ಖರೀದಿಗೆ ಟೆಂಡರ್ ಕರೆಯಲಾಗುವುದು. ಪಲ್ಲಕ್ಕಿ’ ಸ್ಲೀಪರ್‌ ಬಸ್‌ಗಳು ‘ಸಂತೋಷವು ಪ್ರಯಾಣಿಸುತ್ತಿದೆ’ ಎಂಬ ಟ್ಯಾಗ್‌ಲೈನ್‌ ಒಳಗೊಂಡಿವೆ. 11.3 ಮೀಟರ್‌ ಉದ್ದದ ಈ ಬಸ್‌ಗಳು 197 ಎಚ್‌ಪಿ ಇಂಜಿನ್‌ ಒಳಗೊಂಡಿವೆ. ಮಲಗಲು ಇರುವಷ್ಟೇ ಆರಾಮದಾಯಕ ವ್ಯವಸ್ಥೆ, ಕುಳಿತುಕೊಳ್ಳಲೂ ಇದೆ. ಪ್ರತಿ ಆಸನಕ್ಕೂ ಮೊಬೈಲ್‌, ಲ್ಯಾಪ್‌ಟಾಪ್‌ ಚಾರ್ಜಿಂಗ್‌, ಆಡಿಯೋ ಸ್ಪೀಕರ್‌, ಪಾದರಕ್ಷೆಗಳನ್ನು ಇಡುವ ಸೌಲಭ್ಯ ಕಲ್ಪಿಸಲಾಗಿದೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ