NEWSನಮ್ಮಜಿಲ್ಲೆನಮ್ಮರಾಜ್ಯ

ಪತ್ನಿ, ಮಗನಿಗೆ ಮಾಸಿಕ ಜೀವನಾಂಶ ಪಾವತಿಸದ ಪತಿ ಆಸ್ತಿ ಮುಟ್ಟುಗೋಲು: ಹೈಕೋರ್ಟ್ ಮಹತ್ವದ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪತ್ನಿ ಮತ್ತು ವಿಕಲಚೇತನ ಮಗುವಿಗೆ ಮಾಸಿಕ ಜೀವನಾಂಶ ಪಾವತಿಸದ ಪತಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಜತೆಗೆ ಪತಿಯ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಾಲಯ ಇಂತಹ ಪ್ರಕರಣ ಮರುಕಳಿಸಬಾರದೆಂದು ಎಚ್ಚರಿಕೆ ನೀಡಿದೆ. ಅಲ್ಲದೆ ಈ ಆದೇಶ ಪರಿತ್ಯಕ್ತ ಪತ್ನಿಗೆ ಜೀವನಾಂಶ ನೀಡದೆ ಸತಾಯಿಸುವ ಪತಿರಾಯರಿಗೆ ಒಂದು ಎಚ್ಚರಿಕೆಯ ಗಂಟೆಯಾಗಿದೆ.

ಪತ್ನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ಅನಂತ್ ರಾಮನಾಥ್ ಹೆಗಡೆ ಅವರಿದ್ದ ದ್ವಿಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದ್ದು, 2012ರ ಏಪ್ರಿಲ್ 12ರಿಂದ ಮಾಸಿಕ ಜೀವನಾಂಶವಾಗಿ ತಲಾ 5,000 ರೂ.ಗಳನ್ನು ಪಾವತಿಸುವಂತೆ ಸೂಚನೆ ನೀಡಿ ಆದೇಶಿಸಿದೆ.

ವಾದ ಪ್ರತಿವಾದ ಆಲಿಸಿದ ಪೀಠ, ಜೀವನಾಂಶವನ್ನು ತಲಾ 5,000 ರೂ.ಗೆ ಹೆಚ್ಚಿಸಿತು. ಮಗ ವಿಕಲ ಚೇತನನಾಗಿರುವುದರಿಂದ, ಮೊತ್ತವು ಸಾಧಾರಣವಾಗಿದೆ ಮತ್ತು ಕುಟುಂಬ ನ್ಯಾಯಾಲಯವು ಅದಕ್ಕೆ ಅನುಗುಣವಾಗಿ ಆದೇಶಿಸಬೇಕಾಗಿತ್ತು ಎಂದು ಪೀಠ ಅಭಿಪ್ರಯಾಪಟ್ಟಿತು.

ಅಷ್ಟೆ ಅಲ್ಲದೆ, ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ಪತಿಯ 1,276 ಚದರ ಅಡಿ ಮನೆಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಪತ್ನಿ ಪತಿಗೆ ಸಂಬಂಧಿಸಿದ ಇತರ ಆಸ್ತಿ ವಿವರಗಳನ್ನು ಒದಗಿಸಿದರೆ, ಅದರಲ್ಲಿಯೂ ಸಹ ಭಾಗಿದಾರರಾಗಿರುತ್ತಾರೆ ಎಂದು ಪೀಠ ಹೇಳಿದೆ.

ನೊಂದ ಪತ್ನಿ ಪತಿವಿರುದ್ಧ ಹೈ ಕೋರ್ಟ್‌ ಮೆಟ್ಟಿಲೇರಿ ಕೌಟುಂಬಿಕ ನ್ಯಾಯಾಲಯವು ತನ್ನ ಮೇಲೆ ವಿಧಿಸಿದ ಹೊಣೆಗಾರಿಕೆಯನ್ನು ಪತಿ ನಿರ್ವಹಿಸಿಲ್ಲ. 1882ರ ಆಸ್ತಿ ವರ್ಗಾವಣೆ ಕಾಯ್ದೆಯ ಸೆಕ್ಷನ್ 39ರ ಅಡಿಯಲ್ಲಿ, ನಿರ್ವಹಣೆಯ ಬಾಕಿಯು ಆಸ್ತಿಯ ಮೇಲೆ ಶುಲ್ಕವನ್ನಾಗಿಸುವುದಕ್ಕೆ ಅವಕಾಶವಿದೆ.

ಇನ್ನು ಪತಿಯಾದವರು ಈ ಹಿಂದಿನ ಆದೇಶವನ್ನು ಪಾಲಿಸಿಲ್ಲ. ಆದ್ದರಿಂದ ಅರ್ಜಿದಾರರಿಗೆ (ಪತ್ನಿ ಮತ್ತು ಮಗ) ಪಾವತಿಯ ಆಸ್ತಿಯ ಮೇಲೆ ಭಾಗ ಪಡೆಯಬಹುದು ಎಂದು ಪೀಠ ಅಭಿಪ್ರಾಯ ಪಟ್ಟಿದೆ. ಪತ್ನಿಯ ಪರ ವಕೀಲರು, ಪತಿ ಕೆಲವು ಸ್ಥಿರಾಸ್ತಿಗಳನ್ನು ಮಾರಾಟ ಮಾಡಿದ್ದಾರೆ, ತಿಂಗಳಿಗೆ 5000 ರೂ.ಗಳನ್ನು ಪಾವತಿಸಬಹುದು ಮತ್ತು ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಕೋರಿದ್ದರು.

ಪ್ರಕರಣ ವೇನು?: 2012ರಲ್ಲಿ ಪತಿಯ ಮನೆಯಿಂದ ಹೊರನಡೆದಿದ್ದ ಮಹಿಳೆ, ತನಗೆ ಮತ್ತು ತನ್ನ ಅಂಗವಿಕಲ ಮಗನಿಗೆ ಜೀವನಾಂಶ ನೀಡುವಂತೆ ಕೋರಿದ್ದಳು. ಆರಂಭದಲ್ಲಿ ಪತ್ನಿ ಮತ್ತು ಮಗನಿಗೆ ಕ್ರಮವಾಗಿ 2000 ಮತ್ತು 1000 ರೂ.ಗಳ ಮಾಸಿಕ ಮೊತ್ತವನ್ನು ನೀಡಲಾಯಿತು. ದಶಕದ ಬಳಿಕ ಪತ್ನಿ ಮತ್ತು ಮಗ ತಲಾ 5 ರೂ.ಗಳೀಗೆ ಹೆಚ್ಚಿಸಲು ಕೋರಿದರು.

ಸೆಪ್ಟೆಂಬರ್ 2018ರಲ್ಲಿ, ಕೌಟುಂಬಿಕ ನ್ಯಾಯಾಲಯವು ಪತಿಗೆ ತಲಾ 3000 ರೂ.ಗಳನ್ನು ಪಾವತಿಸುವಂತೆ ನಿರ್ದೇಶನ ನೀಡಿತ್ತು. ಆದರೆ, ಕೌಟುಂಬಿಕ ನ್ಯಾಯಾಲಯದ ಆದೇಶದಿಂದ ನೊಂದ ಮಹಿಳೆ ಮೊತ್ತವನ್ನು ಮತ್ತಷ್ಟು ಹೆಚ್ಚಳ ಮಾಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅದರಲ್ಲಿ ಪರಿಹಾರ ಮೊತ್ತ ಕಡಿಮೆಯಿದ್ದು, ಹೆಚ್ಚಳ ಮಾಡಬೇಕು. ಜತೆಗೆ, ಪತಿ ಬಾಕಿ ಪಾವತಿಸಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದರು ಪತ್ನಿ. ಈ ಹಿನ್ನೆಲೆಯಲ್ಲಿ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ಈ ಆದೇಶ ಹೊರಡಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ