NEWSಕೃಷಿನಮ್ಮಜಿಲ್ಲೆ

ತ.ನಾಡಿಗೆ ಹರಿಸುತ್ತಿರುವ ಕಾವೇರಿ ನೀರು ನಿಲ್ಲಿಸಲು ಆಗ್ರಹಿಸಿ ರೈತನಿಂದ ಜೀವಂತ ಸಮಾಧಿ- ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಮತ್ತು ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಅದರಲ್ಲೂ ಮಂಡ್ಯ ಜಿಲ್ಲೆಯಲ್ಲಿ ರೈತರು ಸರ್ಕಾರದ ಗಮನಸೆಳೆಯುವ ಸಲುವಾಗಿ ದಿನಕ್ಕೊಂದು ರೀತಿಯ ಪ್ರತಿಭಟನೆ ಚಳವಳಿ ನಡೆಸುತ್ತಿದ್ದರೂ ನೀರು ಹರಿಯುವುದು ಮಾತ್ರ ನಿಂತಿಲ್ಲ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಸೇರಿದಂತೆ ವಿವಿಧ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಮುಂದುವರಿದಿದೆ. ಈ ಬಾರಿ ಅರೆಬೆತ್ತಲೆ, ಚಪ್ಪಡಿಕಲ್ಲು ಹೊತ್ತು, ಬಾರುಕೋಲು, ಖಾಲಿ ಬಿಂದಿಗೆ ಹಿಡಿದು ಹೀಗೆ ಹತ್ತು ಹಲವು ಪ್ರತಿಭಟನೆಗಳನ್ನು ನಡೆಸಿ ರೈತರು ತಮ್ಮ ಆಕ್ರೋಶ ಹೊರ ಹಾಕುತ್ತಲೇ ಇದ್ದಾರೆ.

ಆದರೂ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸುವ ಯಾವುದೇ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿಲ್ಲ. ಇದದರಿಂದ ಇನ್ನಷ್ಟು ಆಕ್ರೋಶಗೊಂಡಿರುವ ಮಂಡ್ಯದ ರೈತರೊಬ್ಬರು ತನ್ನ ಜಮೀನಿನಲ್ಲಿ ಜೀವಂತ ಸಮಾಧಿಯಾಗುವ ಮೂಲಕ ವಿನೂತನ ಪ್ರತಿಭಟನೆ ನಡೆಸಿ ಸರ್ಕಾರದ ಗಮನಸೆಳೆಯುವ ಪ್ರಯತ್ನ ಮಾಡಿದ್ದಲ್ಲದೆ ಆಕ್ರೋಶದ ಕಿಚ್ಚನ್ನು ಹೊರ ಹಾಕಿದ್ದಾರೆ.

ಮಂಡ್ಯ ತಾಲೂಕಿನ ಉಪ್ಪಾರಕನಹಳ್ಳಿ ಗ್ರಾಮದ ರೈತ ಶಿವಕುಮಾರ್ ಎಂಬುವರು ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಜಮೀನಿನಲ್ಲಿ ಕುತ್ತಿಗೆ ತನಕ ಮಣ್ಣಿನಲ್ಲಿ ಶರೀರವನ್ನು ಹೂತು ತಲೆಯನ್ನು ಹೊರ ಹಾಕಿ ಜೀವಂತ ಸಮಾಧಿಯಾಗುವ ಮೂಲಕ ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ.

ಸರ್ಕಾರ ತಮಿಳುನಾಡಿಗೆ ನೀರು ಹರಿಸುವ ಮೂಲಕ ರೈತರನ್ನು ಜೀವಂತ ಸಮಾಧಿ ಮಾಡುತ್ತಿದೆ. ಇಷ್ಟು ದಿನ ವಿರೋಧಿ ಘೋಷಣೆ ಕೂಗುತ್ತಿದ್ದೆವು. ಆದರೆ ಇನ್ನು ಮುಂದೆ ಅವರ ಪರವಾಗಿ ಘೋಷಣೆ ಕೂಗುತ್ತೇವೆ. ಏಕೆಂದರೆ ನಾವು ಏನೇ ಮಾಡಿದರೂ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸುವುದಿಲ್ಲ. ವರುಣನ ಕೃಪೆಯಿಂದ ಜಲಾಶಯ ತುಂಬುತ್ತಿದೆ. ರೈತರನ್ನು ಸಮಾಧಿ ಮಾಡುವುದನ್ನು ಬಿಟ್ಟು. ಇನ್ನಾದರೂ ನೀರು ಹರಿಸುವುದನ್ನು ನಿಲ್ಲಿಸಲಿ ಎಂದು ಅವರು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ