NEWSನಮ್ಮಜಿಲ್ಲೆನಮ್ಮರಾಜ್ಯ

ನ.28ರಂದು ಬಿಎಂಟಿಸಿ & ಕೆಎಸ್ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನಾ ಸಭೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಪಿಎಸ್ ಪಿಂಚಿಣಿದಾರರ ಪ್ರತಿಭಟನಾ ಸಭೆ ಇದೇ ನವೆಂಬರ್‌ 28ರಂದು ಬಿಎಂಟಿಸಿ & ಕೆಎಸ್ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಕಾರ್ಯಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

ಅಂದು ಬೆಳಗ್ಗೆ 11 ಗಂಟೆಗೆ ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯನಿಧಿ ಕಚೇರಿ ಆವಣದಲ್ಲಿ ಜರುಗುವ ಪ್ರತಿಭಟನೆ ಹಾಗೂ ಈ ಬಾರಿ ತೀಕ್ಷಣವಾದ ಮನವಿ ಪತ್ರವನ್ನು ಅಧಿಕಾರಿಗಳಿಗೆ ಸಲ್ಲಿಸುವ ಸಭೆಗೆ ರಾಜ್ಯದ ಮೂಲೆ ಮೂಲೆಗಳಿಂದ ಎಲ್ಲ ಇಪಿಎಸ್ ನಿವೃತ್ತರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಿಧಿ ಅಪ್ಕೆ ನಿಕಟ್(Nidhi Aapke Nikit) ಕಾರ್ಯಕ್ರಮವನ್ನು ಇಪಿಎಫ್ಒ ಅಧಿಕಾರಿಗಳು ತಮ್ಮ ಕಚೇರಿ ಆವರಣದಲ್ಲಿ ಇದೇ ನ.28 ರಂದು ಹಮ್ಮಿಕೊಂಡಿದ್ದು, ಇಪಿಎಸ್ ನಿವೃತ್ತರ ಕುಂದು ಕೊರತೆಗಳನ್ನು ಈಡೇರಿಸುತ್ತೇವೆ ಎಂದು ತಿಳಿಸಿದ್ದಾರೆ. ಆದರೆ, ಈಗಾಗಲೇ ನಮ್ಮ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಹಲವಾರು ಬಾರಿ ಇಪಿಎಫ್ಒ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಹಲವಾರು ಮನವಿ ಪತ್ರಗಳನ್ನು ಕೊಟ್ಟರು ಈವರೆಗೂ ಈಡೇರಿಸಿಲ್ಲ.

ಅಲ್ಲದೆ ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವರಿಗೆ (minister for labour & employment) ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರ ಮೂಲಕ ಮನವಿ ಸಲ್ಲಿಸಿದ್ದರೂ ಕೂಡ ನಮ್ಮ ಮನವಿಗೆ ಸಂಬಂಧಿಸಿದಂತೆ ಕೇಂದ್ರದಿಂದಲೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ವಿಳಂಬ ನೀತಿ ಅನುಸರಿಸುತ್ತಿರುವುದು ಕಂಡುಬರುತ್ತಿದೆ ಎಂದು ಕಿಡಿಕಾರಿದ್ದಾರೆ.

ಇನ್ನು ಈ ಪ್ರತಿಭಟನಾ ಸಭೆಗೆ ರಾಷ್ಟ್ರೀಯ ಸಂಘರ್ಷ ಸಮಿತಿ ಸಂಯೋಜಕ ರಮಾತಾಂತ ನರಗುಂದ ಭಾಗವಹಿಸಲಿದ್ದು, ಡಿಸೆಂಬರ್ 7ರಿಂದ ಮುಂದುವರಿದಂತೆ, ದೆಹಲಿಯ ರಾಮಲೀಲಾ ಮೈದಾನ ಹಾಗೂ ಜಂತರ್ ಮಂತರ್‌ನಲ್ಲಿ ನಿವೃತ್ತರ ಕನಿಷ್ಠ ಪಿಂಚಣಿಗೆ ಆಗ್ರಹಿಸಿ, ಬೃಹತ್ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹ ನಡೆಯುವ ಬಗ್ಗೆ ಹಲವು ಮಾಹಿತಿ ಹಂಚಿಕೊಳ್ಳಲಿದ್ದಾರೆ.

ದೇಶಾದ್ಯಂತ ಅಂದು ಸಾವಿರಾರು ನಿವೃತ್ತರು ಪ್ರತಿಭಟನಾ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಇನ್ನು ಡಿಸೆಂಬರ್ 4ರಿಂದ 22ರವರೆಗೆ ಚಳಿಗಾಲದ ಪಾರ್ಲಿಮೆಂಟ್ ಅಧಿವೇಶನ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಇಪಿಎಸ್ ನಿವೃತ್ತರ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದ್ದು, ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಇದ್ದು ಸುಸಮಯವೇಂದು ತಿಳಿಸಿದ್ದಾರೆ.

ಇನ್ನು ಕೇಂದ್ರ ಸರ್ಕಾರಕ್ಕೆ ಇದೊಂದು ಎಚ್ಚರಿಕೆ ಗಂಟೆಯಾಗಲಿದೆ. ಈಗಾಗಲೇ ಕಮಾಂಡರ್ ಅಶೋಕ್ ರಾವುತ್ ರವರು ನಮ್ಮ ಪಿಂಚಣಿ ಬೇಡಿಕೆಗಳನ್ನು ಈಡೇರಿಸುವಂತೆ ಎಚ್ಚರಿಕೆಯ ಮನವಿ ಪತ್ರ ನೀಡಿದ್ದು, ಈ ಎಲ್ಲ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸದೆ ಹೋದಲ್ಲಿ, ದೆಹಲಿಯಲ್ಲಿ ನಡೆಯುವ ಉಪವಾಸ ಸತ್ಯಾಗ್ರಹ ಯಾವ ರೂಪ ತಾಳುತ್ತದೆ ಎಂಬುದನ್ನು ಕಾಲವೇ ನಿರ್ಧರಿಸಲಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್