CRIMENEWSನಮ್ಮಜಿಲ್ಲೆ

ಸ್ನೇಹಿತರ ಜತೆ ಕ್ವಾರೆಯಲ್ಲಿ ಈಜಲು ಹೋದ PUC ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ

ವಿಜಯಪಥ ಸಮಗ್ರ ಸುದ್ದಿ

ನೆಲಮಂಗಲ: ಸ್ನೇಹಿತರೊಂದಿಗೆ ಈಜಲು ಹೋಗಿದ್ದ 17ರ ವರ್ಷದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಕಿತ್ತನಹಳ್ಳಿಯ ಬೋಳಾರೆ ಕ್ವಾರೆಯಲ್ಲಿ ಭಾನುವಾರ ನಡೆದಿದೆ.

ಕಾಮಾಕ್ಷಿಪಾಳ್ಯದ ಕಾವೇರಿಪುರ ನಿವಾಸಿ ಪೃತ್ವಿಕ್ (17) ಮೃತ ಬಾಲಕ. ರಾಜಾಜಿನಗರದ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಭಾನುವಾರ (ಅ.12) ಮಧ್ಯಾಹ್ನ ಮೃತ ಬಾಲಕ ಸೇರಿ ಒಟ್ಟು ಆರು ಸ್ನೇಹಿತರು ಈಜಾಡಲು ಬೋಳಾರೆ ಕ್ವಾರೆಗೆ ತೆರಳಿದ್ದರು.

ಈ ವೇಳೆ ಪೃತ್ವಿಕ್ ಈಜು ಬಾರದಿದ್ದರೂ ಸ್ನೇಹಿತರ ಒತ್ತಾಯಕ್ಕೆ ಮಣಿದ ಮೃತ ಬಾಲಕ ಕ್ವಾರೆಗೆ ಇಳಿದು, ನೀರಿನಲ್ಲಿ ಮುಳುಗಿದ್ದಾನೆ. ಅದನ್ನು ಕಂಡ ಆತನ ಸ್ನೇಹಿತರು ಭಯದಿಂದ ಸ್ಥಳದಿಂದ ಪರಾರಿಯಾಗಿದ್ದಾರೆ.

ಸದ್ಯ ಮೃತ ಬಾಲಕನ ಪೋಷಕರು ಸ್ನೇಹಿತರಿಂದಲೇ ನಮ್ಮ ಮಗ ಮೃತಪಟ್ಟಿರುವುದು ಎಂದು ಆರೋಪಿಸಿದ್ದು, ಬಾಳಿ ಬದುಕಬೇಕಿದ್ದ ಬಾಲಕ ಹುಡುಗರ ಸಹವಾಸದಿಂದ ಅಸುನೀಗಿರುವುದಕ್ಕೆ ಪಾಲಕರು ಆಕ್ರೋಶ ಹೊರಹಾಕಿದ್ದಾರೆ.

ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳುತ್ತಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ