ಜೈಪುರ: ಭಾರತ-ಪಾಕಿಸ್ತಾನ ಯುದ್ಧ ಪರಿಸ್ಥಿತಿಯಿಂದ ದಿಢೀರ್ ಪಂದ್ಯ ರದ್ದಾಗಿದ್ದರಿಂದ ಒಂದು ವಾರದ ವಿಶ್ರಮಿಸಿದ ಬಳಿಕ ಪಂಜಾಬ್ ಕಿಂಗ್ಸ್ ಭಾನುವಾರ ಮಧ್ಯಾಹ್ನ 3:30ಕ್ಕೆ ಜೈಪುರದಲ್ಲಿ ನಡೆಯಲಿದ್ದು, ಮೈದಾನಕ್ಕಿಳಿಯಲಿದೆ. ಈಗಾಗಲೇ ಪ್ಲೇ-ಆಫ್ ರೇಸ್ನಿಂದ ಹೊರಗುಳಿದಿರುವ ರಾಜಸ್ಥಾನ ರಾಯಲ್ಸ್ ವಿರುದ್ಧ ಸೆಣಸಲಿರುವ ಪಂಜಾಬ್, ಪ್ಲೇ-ಆಫ್ ಸ್ಥಾನದ ಮೇಲೆ ಕಣ್ಣಿಟ್ಟಿದೆ.
11 ಪಂದ್ಯಗಳಿಂದ 15 ಅಂಕಗಳನ್ನು ಕಲೆಹಾಕಿರುವ ಪಂಜಾಬ್ಗೆ, ಉಳಿದ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಪ್ಲೇ-ಆಫ್ ಖಚಿತ. ಒಂದು ಗೆಲುವು ಸಾಧಿಸಿದರೂ, ಇತರ ತಂಡಗಳ ಫಲಿತಾಂಶ ಅನುಕೂಲಕರವಾಗಿದ್ದರೆ ನಾಕೌಟ್ ಹಂತಕ್ಕೆ ತಲುಪುವ ಸಾಧ್ಯತೆ ಇದೆ. ಪಂಜಾಬ್ ತಂಡಕ್ಕೆ ಈ ಪಂದ್ಯದಲ್ಲಿ ಇಬ್ಬರು ಪ್ರಮುಖ ವಿದೇಶಿ ಆಟಗಾರರಾದ ಮಾರ್ಕಸ್ ಸ್ಟೋಯಿನಿಸ್ ಮತ್ತು ಜೋಶ್ ಇಂಗ್ಲಿಸ್ ಅನುಪಸ್ಥಿತಿ ತೊಂದರೆಯಾಗಲಿದೆ.
ಈ ಇವರಿಬ್ಬರೂ ಭಾರತಕ್ಕೆ ವಾಪಸಾಗುವುದಾಗಿ ಹೇಳಿದ್ದರೂ, ಈ ಪಂದ್ಯಕ್ಕೆ ಲಭ್ಯರಿಲ್ಲ. ಆದ್ದರಿಂದ, ಬಿಗ್ ಬ್ಯಾಶ್ ಲೀಗ್ನಲ್ಲಿ ಮಿಂಚಿದ ಮಿಚ್ ಓವನ್ಗೆ ಚೊಚ್ಚಲ ಪಂದ್ಯ ಆಡುವ ಅವಕಾಶ ಸಿಗಬಹುದು. ಇದೇ ವೇಳೆ, ನ್ಯಾಂಡ್ರೆ ಬರ್ಗರ್ ಕೂಡ ಆಡುವ ಸಾಧ್ಯತೆ ಇದೆ. ಪಂಜಾಬ್ನ ಬ್ಯಾಟಿಂಗ್ ಮತ್ತು ಬೌಲಿಂಗ್ ಘಟಕ ಈ ಪಂದ್ಯದಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಬೇಕಿದೆ.
ಇನ್ನು ಮತ್ತೊಂದೆಡೆ, ರಾಜಸ್ಥಾನ ರಾಯಲ್ಸ್ 12 ಪಂದ್ಯಗಳಲ್ಲಿ ಕೇವಲ 3 ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಈ ಪಂದ್ಯ ತವರಿನಲ್ಲಿ ಈ ವರ್ಷದ ಕೊನೆಯ ಪಂದ್ಯವಾಗಿದ್ದು, ತಂಡಕ್ಕೆ ಗೌರವದ ಕದನ. ನಾಯಕ ಸಂಜು ಸ್ಯಾಮನ್ ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದಾರೆ. ಅವರ ನಾಯಕತ್ವದಲ್ಲಿ ರಾಜಸ್ಥಾನ ಉಳಿದ ಪಂದ್ಯಗಳನ್ನು ಗೆದ್ದು, ಅಂಕಪಟ್ಟಿಯ ಕೊನೆಯ ಸ್ಥಾನಕ್ಕೆ ಕುಸಿಯುವುದನ್ನು ತಪ್ಪಿಸಲು ಶ್ರಮಿಸಲಿದೆ. ತಂಡದ ಬ್ಯಾಟಿಂಗ್ ಶಕ್ತಿಯಾಗಿರುವ ಜೊಸ್ ಬಟ್ಲರ್ ಮತ್ತು ಯಶಸ್ವಿ ಜೈಸ್ವಾಲ್ರಿಂದ ದೊಡ್ಡ ರನ್ಗಳ ನಿರೀಕ್ಷೆ ಇದೆ.
ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಟೈಟಾನ್ಸ್: ಇದೇ ರೀತಿ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಭಾನುವಾರ ಸಂಜೆ 7.30ಕ್ಕೆ ಗುಜರಾತ್ ಟೈಟಾನ್ಸ್ ವಿರುದ್ಧ ಡು ಆರ್ ಡೈ ಪಂದ್ಯ ನಡೆಲಿದೆ. ಗುಜರಾತ್ ಈ ಪಂದ್ಯದಲ್ಲಿ ಗೆದ್ದರೆ, ಅವರು ಅಧಿಕೃತವಾಗಿ ಪ್ಲೇ-ಆಫ್ಗೆ ತಲುಪಲಿದ್ದಾರೆ. ಆದರೆ, ಡೆಲ್ಲಿ ಕಳೆದ 5 ಪಂದ್ಯಗಳಲ್ಲಿ ಕೇವಲ 1 ಗೆಲುವು ಸಾಧಿಸಿ, ಪ್ಲೇ-ಆಫ್ ಹಾದಿಯನ್ನು ಕಠಿಣಗೊಳಿಸಿಕೊಂಡಿದೆ. 11 ಪಂದ್ಯಗಳಿಂದ 13 ಅಂಕಗಳನ್ನು ಕಲೆಹಾಕಿರುವ ಡೆಲ್ಲಿ, ಉಳಿದ ಮೂರು ಪಂದ್ಯಗಳನ್ನು ಗೆದ್ದರೆ ಮಾತ್ರ ಪ್ಲೇ-ಆಫ್ಗೆ ತಲುಪುವ ಸಾಧ್ಯತೆ ಇದೆ.
ಡೆಲ್ಲಿ ತಂಡಕ್ಕೆ ವಿದೇಶಿ ಆಟಗಾರರ ಕೊರತೆ ತೊಂದರೆಯಾಗಿದೆ. ತಾರಾ ವೇಗಿ ಮಿಚೆಲ್ ಸ್ಟಾರ್ಕ್ ಆಸ್ಟ್ರೇಲಿಯಾಕ್ಕೆ ವಾಪಸಾಗಿದ್ದು, ಈ ಪಂದ್ಯಕ್ಕೆ ಲಭ್ಯರಿಲ್ಲ. ಅವರ ಬದಲಿಗೆ ಆಯ್ಕೆಯಾಗಿರುವ ಬಾಂಗ್ಲಾದೇಶದ ಮುಸ್ತಾಫಿಜುರ್ ರಹಮಾನ್ ಆಡುವುದು ಅನುಮಾನಾಸ್ಪದ. ಹೀಗಾಗಿ, ಡೆಲ್ಲಿ ಕೇವಲ ಮೂರು ವಿದೇಶಿ ಆಟಗಾರರೊಂದಿಗೆ ಕಣಕ್ಕಿಳಿಯಬಹುದು. ತಂಡದ ಬ್ಯಾಟಿಂಗ್ ರಿಷಭ್ ಪಂತ್ ಮತ್ತು ಶಾಯ್ ಹೋಪ್ರಿಂದ ದೊಡ್ಡ ಕೊಡುಗೆಯನ್ನು ನಿರೀಕ್ಷಿಸಲಾಗಿದೆ.
ಗುಜರಾತ್ ಟೈಟಾನ್ಸ್ ಸ್ಥಿರ ಪ್ರದರ್ಶನದೊಂದಿಗೆ ಗಮನ ಸೆಳೆದಿದೆ. ತಂಡದ ಅಗ್ರ-3 ಬ್ಯಾಟರ್ಗಳಾದ ಶುಭಮನ್ ಗಿಲ್, ಸಾಯಿ ಸುದರ್ಶನ್, ಮತ್ತು ಜೋಸ್ ಬಟ್ಲರ್ ತಲಾ 500ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ತಂಡದ ಒಟ್ಟು ರನ್ಗಳಲ್ಲಿ ಈ ಮೂವರ ಕೊಡುಗೆ ಶೇ.70ಕ್ಕಿಂತ ಹೆಚ್ಚಿದೆ. ಗುಜರಾತ್ನ ಬೌಲಿಂಗ್ನಲ್ಲಿ ರಶೀದ್ ಖಾನ್ ಮತ್ತು ಕಗಿಸೊ ರಬಾಡ ಅಪಾಯಕಾರಿ. ಈ ಪಂದ್ಯದಲ್ಲಿ ಗುಜರಾತ್ ತನ್ನ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಲು ಎದುರು ನೋಡುತ್ತಿದೆ.
Related

You Might Also Like
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...
ಟೇಕಾಫ್ ಆದ ಕೆಲವೇ ಕ್ಷಣದ ಏರ್ ಇಂಡಿಯಾ ವಿಮಾನ ಪತನ: ಇಬ್ಬರು ಸೇಫ್
ಅಹಮದಾಬಾದ್: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆಗೆ ಸಂಬಂಧಿಸಿದಂತೆ 240 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ವಿಮಾನದಲ್ಲಿ...
KSRTC ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಮ್ ಪಾಷ ನೇಮಕ: ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಂಪಾಷಾ ಅವರನ್ನು ನೇಮಿಸಿ ಸರ್ಕಾರ ಗುರುವಾರ (ಜೂ.12) ಆದೇಶ ಹೊರಡಿಸಿದೆ. ಇದೇ ಜೂನ್ 2ರ ಸೋಮವಾರ...
NWKRTC: ವರುಣನ ಅಬ್ಬರಕ್ಕೆ ಕಾರವಾರದ ಬಸ್ ಡಿಪೋ ಜಲಾವೃತ- ಮಳೆ ನೀರಿನಲ್ಲೇ ನಿಂತು ಹೆರಿಗೆ ಮಾಡಿಸಿದ ವೈದ್ಯರು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಧಾರಾಕರ ಮಳೆಯಾಗುತ್ತಿದ್ದು, ಈ ಮಳೆಗೆ ವಾಯುವ್ಯ ರಸ್ತೆ ಸಾರಿಗೆ ನಿಮಗದ ಘಟಕ ಸಂಪೂರ್ಣ ಜಲಾವೃತವಾಗಿದ್ದು, ಬಸ್ಗಳನ್ನು ತೆಗೆಯುವುದಕ್ಕೂ ಸಿಬ್ಬಂದಿ ಪರದಾಡಿತ...