NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಪುಟ್ಟಣ್ಣ ಚೆಟ್ಟಿ ಪುರಭವನ ಬಾಡಿಗೆ ದರ ಪರಿಷ್ಕರಣೆ: 2022 ಸೆಪ್ಟೆಂಬರ್ 01 ರಿಂದ ಜಾರಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಖ್ಯೆ ಹೆಚ್ಚಿಸಲು ಹಾಗೂ ಕನ್ನಡ ರಂಗಭೂಮಿಗೆ ರಂಗ ವೇದಿಕೆಗಳ ಕೊರತೆ ನೀಗಿಸುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಒಡೆತನದಲ್ಲಿರುವ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದ ಬಾಡಿಗೆ ದರವನ್ನು ಪರಿಷ್ಕರಿಸಿದೆ.

ಅದರಂತೆ, ಈ ಹಿಂದೆ ಪೂರ್ತಿ ದಿನ(ಬೆಳಗ್ಗೆ 8.00 ರಿಂದ ರಾತ್ರಿ 10.00 ಗಂಟೆಯವರೆಗೆ)ಕ್ಕೆ ಎ.ಸಿ(Air Conditioner) ಇದ್ದರೆ 75,000 ರೂ. ಹಾಗೂ ನಾನ್ ಎಸಿ (Non Air Conditioner)ಗೆ 60,000 ರೂ. ನಿಗದಿಪಡಿಸಲಾಗಿತ್ತು. ಇದೀಗ ದರ ಪರಿಷ್ಕರಿಸಿದ್ದು, ಪೂರ್ತಿ ದಿನಕ್ಕೆ ಎ.ಸಿಗೆ 60,000 ರೂ. ಹಾಗೂ ನಾನ್ ಎ.ಸಿಗೆ 50,000 ದರ ನಿಗದಿಪಡಿಸಲಾಗಿದ್ದು, ತೆರಿಗೆಗಳು ಪ್ರತ್ಯೇಕವಾಗಿರುತ್ತದೆ‌.

ಅಲ್ಲದೆ, ಮೊದಲಾರ್ಧ ದಿನ(ಬೆಳಗ್ಗೆ 8.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ) ಹಾಗೂ ದ್ವಿತಿಯಾರ್ಧ ದಿನ(ಮಧ್ಯಾಹ್ನ 3.00 ರಿಂದ ರಾತ್ರಿ 10.00 ಗಂಟೆಯವರೆಗೆ)ಕ್ಕೆ ಎ.ಸಿಗೆ 30,000 ಹಾಗೂ ನಾನ್ ಎ.ಸಿಗರ 25,000 ರೂ. ದರ ನಿಗದಿಪಡಿಸಿದ್ದು, ತೆರಿಗೆಗಳು ಪ್ರತ್ಯೇಕವಾಗಿರುತ್ತದೆ‌.

ಕನ್ನಡ ರಂಗಭೂಮಿಯ ಎಲ್ಲಾ ನಾಟಕ – ಪ್ರಸಂಗಗಳಿಗೆ ಹಾಗೂ ವಿಶೇಷ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಪರಿಷ್ಕೃತ ದರದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಲಾಗುವುದು. ಪರಿಷ್ಕೃತ ದರಗಳು ಹಾಗೂ ರಿಯಾಯಿತಿ ಸೌಲಭ್ಯವು ಇದೇ “2022 ರ ಸೆಪ್ಟೆಂಬರ್ 1 ರಿಂದ” ಜಾರಿಗೆ ಬರಲಿದೆ.

ಕನ್ನಡ ರಂಗಭೂಮಿಗೆ ಬಿಬಿಎಂಪಿ ವತಿಯಿಂದ ಗೌರಿ-ಗಣೇಶ ಹಬ್ಬದ ಉಡುಗೊರೆ ನೀಡುತ್ತಿದ್ದು, ಬೆಂಗಳೂರಿನ ಸಾಂಸ್ಕೃತಿಕ ಹಾಗೂ ರಂಗಭೂಮಿ ಸಂಘಟನೆಗಳು ಪುರಭವನದ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಲು ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ್ ರಾಯ್ ಪುರ ಕೋರಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ