CRIMENEWSನಮ್ಮರಾಜ್ಯ

ಸ್ವತಃ ರಾಯ್ ಅವರೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್‌ನ (Confident Group) ಸಂಸ್ಥಾಪಕ, ಮಾಲೀಕ ಡಾ. ಸಿ.ಜೆ.ರಾಯ್ (CJ Roy) ಅವರು ನಿನ್ನೆ ಆತ್ಮಹತ್ಯೆ ಮಾಡಿಕೊಂಡು ಸಂಬಂಧದ ಪ್ರಕರಣದ ಒಂದೊಂದು ಅಂಶಗಳು ಹೊರಬೀಳುತ್ತಿವೆ.

ಘಟನಾ ಸ್ಥಳವನ್ನು ಕೂಲಂಕಶವಾಗಿ ಹಾಗೂ ಮರಣೋತ್ತರ ಪರೀಕ್ಷೆಯಲ್ಲಿ ಸ್ವತಃ ರಾಯ್ ಅವರೇ ಗುಂಡು ಹಾರಿಸಿಕೊಂಡಿದ್ದಾರೆ ಎಂಬುವುದು ದೃಢವಾಗಿದೆ. ತನಿಖೆಯ ಪ್ರಕಾರ, ಸಿ.ಜೆ.ರಾಯ್ ಅವರು ತಮ್ಮ ಬಲಗೈಯಿಂದ ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಗುಂಡು ಎದೆಯ ಎಡಭಾಗದ ಮೂಲಕ ದೇಹವನ್ನು ಪ್ರವೇಶಿಸಿ, ಬೆನ್ನಿನ ಭಾಗದಲ್ಲಿ ಸಿಲುಕಿಕೊಂಡಿದೆ. ಒಂದು ಸುತ್ತು ಗುಂಡು ಹಾರಿಸಿಕೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗನ್ ಅನ್ನು ಎದೆಯ ಮೇಲಿಟ್ಟು ಅತ್ಯಂತ ಸಮೀಪದಿಂದ ಗುಂಡು ಹಾರಿಸಿಕೊಂಡಿರುವುದು ಪತ್ತೆಯಾಗಿದೆ. ಈ ಕಾರಣದಿಂದ ಎದೆಯ ಮೇಲ್ಭಾಗದ ಮಾಂಸಖಂಡಗಳು ಚದುರಿಲ್ಲ, ಬದಲಾಗಿ ಗುಂಡು ನೇರವಾಗಿ ದೇಹದೊಳಗೆ ಆಳವಾಗಿ ಇಳಿದಿದೆ. ಈ ವೇಳೆ ಎದೆ ಛಿದ್ರವಾಗಿ ಗುಂಡು ಬೆನ್ನಿನಲ್ಲಿ ಸಿಲುಕಿಕೊಂಡಿರುವುದಾಗಿ ತಿಳಿದು ಬಂದಿದೆ.

ಪಾಕೆಟ್ ಗನ್‌ನಿಂದ ಶೂಟ್ ಮಾಡಿಕೊಂಡಿದ್ದು, ಬುಲೆಟ್ ದೇಹದ ಒಳನುಗ್ಗಿದೆ. ಹೃದಯ ಹೊಕ್ಕು, ಶ್ವಾಸಕೋಶ, ರಕ್ತನಾಳಕ್ಕೆ ಹೋಗಿ ಕೊನೆಗೆ 11ನೇ ಪಕ್ಕೆಲುಬಿಗೆ ತಲುಪಿದೆ. ಕೊನೆಗೆ ಅಲ್ಲಿಯೇ ಟರ್ನ್ ಆಗಿ ಎದೆಯಲ್ಲಿ ಸಿಲುಕಿದೆ.

ಇನ್ನು ಮರಣೋತ್ತರ ಪರೀಕ್ಷೆಯಲ್ಲಿ ಬುಲೆಟ್‌ನ್ನು ಹೊರತೆಗೆದು, ಎಫ್‌ಎಸ್‌ಎಲ್‌ಗೆ ರವಾನಿಸಿದ್ದಾರೆ. ಬುಲೆಟ್‌ಗೆ ಯಾವುದೇ ಸ್ಕ್ರ‍್ಯಾಚ್ ಆಗದಂತೆ ಕಾರ್ಬನ್‌ನಲ್ಲಿ ಸುತ್ತಿ ರವಾನೆ ಮಾಡಲಾಗಿದೆ. ಆತ್ಮಹತ್ಯೆಗೆ ಬಳಸಿದ NP bore 0.25 ಪಿಸ್ತೂಲ್ ರಾಯ್ ಹೆಸರಿನಲ್ಲಿ ಪರವಾನಗಿ ಪಡೆಯಲಾಗಿತ್ತು ಎಂಬುದು ಖಚಿತವಾಗಿದೆ.

ಸದ್ಯ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ವಿಧಿವಿಜ್ಞಾನ ಪರೀಕ್ಷೆಗಾಗಿ (FSL) ಕಳುಹಿಸಲಾಗಿದೆ. ಒಟ್ಟಾರೆ ಸಾವಿರಾರು ಕೋಟಿ ರೂಪಾಯಿಯ ಉದ್ಯಮ ಸ್ಥಾಪಿಸಿ ಸಾವಿರಾರು ಜನರಿಗೆ ಕೆಲಸ ಕೊಟ್ಟಿದ ವ್ಯಕ್ತಿಯ ಅಂತ್ಯ ಈ ರೀತಿ ಆಗುತ್ತದೆ ಎಂದರೆ ನಮ್ಮ ಸರ್ಕಾರಗಳು, ಅಧಿಕಾರಿಗಳು ಇವರಿಗೆ ಎಷ್ಟು ಒತ್ತಡ ಹೇರಿರಬಹುದು ಎಂಬುದನ್ನು ನಿದರ್ಶಿಸುತ್ತಿದೆ.

Megha
the authorMegha

Leave a Reply

error: Content is protected !!
Latest news
KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?... ಸಾರಿಗೆ ನೌಕರರು: ಅಗ್ರಿಮೆಂಟ್ ಬೇಕು ಎನ್ನುವವರೇ ಒಮ್ಮೆ ನೋಡಿ ಇನ್ನಾದರೂ ಸರಿ ಸಮಾನ ವೇತನ ಕೇಳಲು ಮುಂದಾಗಿ..! ನಾಳೆ ಇಪಿಎಸ್-95, ಬಿಎಂಟಿಸಿ ‍& ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಮಾಸಿಕ ಸಭೆಯ ಶತದಿನೋತ್ಸವ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗೆ 993 ರೂ. ಹೆಚ್ಚಳ- ಭಾರೀ ಏರಿಕೆ ಮೇ 1ರಿಂದಲೇ ಜಾರಿ KSRTC: ಮೇ 4ರಂದು ಸರ್ಕಾರದ ವಿಳಂಬ ನೀತಿ ಖಂಡಿಸಿ ಸಾರಿಗೆ ನೌಕರರ ಒಕ್ಕೂಟದಿಂದ ಧರಣಿ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಸಾರಿಗೆ ನೌಕರರಿಂದ ಕರಾಳ ಕಾರ್ಮಿಕ ದಿನಾಚರಣೆ- ಡ್ಯೂಟಿ ಮೇಲೆ ಮೌನ ಪ್ರತಿಭಟನೆ GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ