NEWSನಮ್ಮಜಿಲ್ಲೆಶಿಕ್ಷಣ

ರಾಯಚೂರು: ಕಂಠಮಟ್ಟ ಕುಡಿದು ಶಾಲೆ ಅಡುಗೆ ಕೋಣೆ ಬಾಗಿಲ ಮೆಟ್ಟಿಲುಗಳ ಮೇಲೆ ಮಲಗಿದ್ದ ಎಚ್‌ಎಂ ಅಮಾನತು

ವಿಜಯಪಥ ಸಮಗ್ರ ಸುದ್ದಿ

ರಾಯಚೂರು: ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರೊಬ್ಬರು ಬೆಳ್ಳಂಬೆಳಗ್ಗೆ ಮದ್ಯಪಾನ ಮಾಡಿ ಶಾಲೆಯ ಅಡುಗೆ ಕೊಠಡಿಯ ಮೆಟ್ಟಿಲುಗಳ ಮೇಲೆ ಮಲಗಿದ್ದರು, ಈ ಹಿನ್ನೆಯಲ್ಲಿ ಅವರನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಜಿಲ್ಲೆ ಮಸ್ಕಿ ತಾಲೂಕಿನ ಗೋನಾಳ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ನಿಂಗಪ್ಪ ನಿತ್ಯ ಫುಲ್ ಟೈಟಾಗಿ ಶಾಲೆಗೆ ಬರುತ್ತಿದ್ದ ಎಚ್‌ಎಂ ಆಗಿದ್ದು, ಅವರನ್ನು ಸದ್ಯ ಅಮಾನತು ಮಾಡಿ ಸಿಂಧನೂರು ಕ್ಷೇತ್ರ ಶಿಕ್ಷಣಾಧಿಕಾರಿ ಬಸಲಿಂಗಪ್ಪ ಆದೇಶ ಹೊರಡಿಸಿದ್ದಾರೆ.

ಈ ಹೆಡ್ ಮಾಸ್ಟರ್ ಕಂಠಪೂರ್ತಿ ಕುಡಿದು ಶಾಲಾ ಅಡುಗೆ ಕೋಣೆ ಬಾಗಿಲಿನ ಮೆಟ್ಟಿಲುಗಳ ಮೇಲೆ ಮಲಗಿದ್ದ. ಇದು ವೈರಲ್‌ ಆಗುತ್ತಿದ್ದಂತೆ ಎಚ್ಚೆತ್ತ ಶಿಕ್ಷಣ ಇಲಾಖೆ ಪರಿಶೀಲನೆ ನಡೆಸಿ‌ ಕ್ರಮ ಕೈಗೊಂಡಿದೆ.

ಮದ್ಯಪಾನ ಮಾಡಿ ಶಾಲಾ ಆವರಣದಲ್ಲಿ ಮಲಗಿದ್ದ ಹೆಡ್‌ಮಾಸ್ಟರ್ ನಿಂಗಪ್ಪನನ್ನ ಅಮಾನತು ಮಾಡಿದ್ದು, ‌ಕರ್ತವ್ಯ ಲೋಪ, ದುರ್ನಡತೆ ಹಾಗೂ ಬೇಜವಾಬ್ದಾರಿತನ ಹಿನ್ನೆಲೆ ಅಮಾನತುಗೊಳಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸಲಿಂಗಪ್ಪ ಆದೇಶದಲ್ಲಿ ತಿಳಿಸಿದ್ದಾರೆ.

ಈ ಎಚ್‌ಎಂ ಗ್ರಾಮದ ಅಂಭಾದೇವಿ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಐ ಹೆಡ್‌ಮಾಸ್ಟರ್ ಆಗಿದ್ದು, ಈತ ಬಿಸಿಯೂಟ ಅಡುಗೆ ಮಾಡುವ ಮಹಿಳೆಯರೊಂದಿಗೂ ಅಸಭ್ಯ ವರ್ತನೆ ತೋರಿದ್ದ ಎಂಬ ಆರೋಪವಿದೆ.

ಇನ್ನು ಈ ಹಿಂದೆ ಗ್ರಾಮಸ್ಥರು, ಪೋಷಕರು ಎಷ್ಟೇ ಬಾರಿ ಛೀಮಾರಿ ಹಾಕಿದ್ರು ಈತ ಬದಲಾಗಿಲ್ಲ. ನಿತ್ಯ ಕುಡಿದು ಶಾಲೆಗೆ ಬರುತ್ತಿದ್ದ ಈತನ ವಿರುದ್ಧ ಕ್ರಮ ಕೈಗೊಂಡು ಅಮಾನತು ಮಾಡಿರುವುದು ಸರಿಯಾಗಿದೆ ಎಂದು ಗ್ರಾಮಸ್ಥರು ಕೂಡ ಹೇಳುತ್ತಿದ್ದಾರೆ.

Megha
the authorMegha

Leave a Reply

error: Content is protected !!
Latest news
ಪವಿತ್ರ ರಂಜಾನ್ ಹಬ್ಬದ ಸಂದೇಶ ಮನುಕುಲಕ್ಕೆ‌ ಮಾರ್ಗದರ್ಶನ: ಸಿಎಂ ರಾಜ್ಯ ಉಗ್ರಾಣ ನಿಗಮದ ಎಂಡಿ ಆತ್ಮಹತ್ಯೆ ಪ್ರಕರಣ: ಸಾರಿಗೆ ಸಚಿವ ರಾಜೀನಾಮೆ! KKRTC: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್‌ ಪಲ್ಟಿ- 8ಮಂದಿಗೆ ಗಾಯ BMTC: ಘಟಕ 22ರಲ್ಲಿ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿದ್ದ ಬಸ್‌ ಚಲಿಸಿ ಸಂಚಾರ ನಿಯಂತ್ರಕರ ಕಚೇರಿ, ಬೈಕ್‌ಗಳಿಗೆ ಡಿಕ್... KSRTCಶಿರಾ: ಬರಗೂರು ಸಮೀಪ ಬಸ್‌ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು ಬೆಂಗಳೂರಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರಿ ಬಸ್‌ ಬ್ರೇಕ್ ಫೇಲಾಗಿ ಬೈಕ್, ಪಿಕಪ್ ವ್ಯಾನ್‌ಗೆ ಡಿಕ್ಕಿ: ಗರ್ಭಿಣಿ, ಮಗು ಸೇರಿ ಎಂಟು ಮಂದಿ ಸಾವು BMTC: ಕುಡಿದು ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜತೆ ಚಾಲಕನ ರಂಪಾಟ ಆರೋಪ ನೌಕರರ ವರ್ಗಾವಣೆ ವಿಚಾರದಲ್ಲಿ ಸಿಎಂಒ ನೇರ ಹಸ್ತಕ್ಷೇಪಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ಮಾಜಿ ಪ್ರಧಾನಿ ಎಚ್‌ಡಿಡಿ ಸಹೋದರಿ ಜವರಮ್ಮ ನಿಧನ