CrimeNEWSನಮ್ಮಜಿಲ್ಲೆ

ನರೇಗಾದಲ್ಲಿ ಭಾರಿ ಭ್ರಷ್ಟಾಚಾರ: 32 ಪಿಡಿಒಗಳ ಅಮಾನತು ಮಾಡಿದ ಜಿಪಂ ಸಿಇಒ

ವಿಜಯಪಥ ಸಮಗ್ರ ಸುದ್ದಿ

ರಾಯಚೂರು: ಹಳ್ಳಿಗಳಿಂದ ನಗರಕ್ಕೆ ಉದ್ಯೋಗ ಅರಸಿ ಬರಬಾರದು ಎಂಬ ದೂರದೃಷ್ಟಿಯಿಂದ ಕಾಂಗ್ರೆಸ್‌ ಸರ್ಕಾರ 15 ವರ್ಷಗಳ  ಹಿಂದೆ ತಂದಿರುವ ನರೇಗಾ ಯೋಜನೆಯಡಿ ಪ್ರತಿ ವರ್ಷ ರಾಜ್ಯದಲ್ಲಿ ಸಾವಿರಾರು ಕೋಟಿ ರೂ.ಗಳ ಅವ್ಯವಹಾರ ನಡೆಯುತ್ತಿರುವುದು ಗೌಪ್ಯವಾಗೇನು ಉಳಿದಿಲ್ಲ. ಈ ರೀತಿ ಅಕ್ರಮ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಅಗತ್ಯವಿದೆ ಎಂದು ಜನರೇ ಹೇಳುತ್ತಿರುತ್ತಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇನ್ನು ಈ ರೀತಿ ಅಕ್ರಮ ಎಸಗುವವರನ್ನು ಕೆಸದಿಂದಲೇ ವಜಾ ಮಾಡಬೇಕು ಎಂಬ ಒತ್ತಾಯಗಳು ಕೇಳಿ ಬರುತ್ತಲೇ ಇವೆ. ಆದರೆ, ಅಲೊಂದು ಇಲ್ಲೊಂದು ಎಂಬಂತೆ ಕೆಲವರನ್ನು ಮಾತ್ರ ಅಮಾನತು ಮಾಡಿ ಮತ್ತೆ ಭ್ರಷ್ಟರಿಗೆ ಬೇರೆ ಜಾಗ ತೋರಿಸಿ ವರ್ಗಾವಣೆ ಮಾಡುವುದು ಸಾಮಾನ್ಯವಾಗಿದೆ. ಅಂದರೆ ಭ್ರಷ್ಟರಿಗೆ ಶಿಕ್ಷೆ ಆಗಿರುವುದು ಮಾತ್ರ ತೀರಾ ಕಡಿಮೆಯೇ.

ಅದೇ ರೀತಿ ದಕ್ಷ ಅಧಿಕಾರಿಯೊಬ್ಬರು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ 32 ಮಂದಿ ಭ್ರಷ್ಟ ಪಿಡಿಒಗಳು ಎಸಗಿದ ಅಕ್ರಮದ ವಿರುದ್ಧ ಕೆಂಡಮಂಡಲರಾಗಿದ್ದು, 32 ಪಿಡಿಒಗಳನ್ನು ಅಮಾನತು ಮಾಡಿದ್ದಾರೆ.

ರಾಯಚೂರು ಜಿಲ್ಲಾ ಪಂಚಾಯಿತಿ ಸಿಇಒ ಪಾಂಡೆ ರಾಹುಲ್ ತುಕಾರಾಂ ಅವರೇ ಭ್ರಷ್ಟರಿಗೆ ಸಿಂಹಸ್ವಪ್ನವಾಗಿದ್ದು, ನೀಚರ ನಿದ್ದೆಗೆಡಿಸಿರುವವರು. ದೇವದುರ್ಗ ತಾಲೂಕಿನ 32 ಮಂದಿ ಭ್ರಷ್ಟ ಪಿಡಿಒಗಳು ನರೇಗಾ ಯೋಜನೆಯಡಿ 150 ಕೋಟಿ ರೂ.ಗೂ ಅಧಿಕ ಹಣ ಅಕ್ರಮ ಬಳಕೆ ಮಾಡಿರುವುದು  ಸಾಬೀತಾದ ಹಿನ್ನೆಲೆ ಈ ಎಲ್ಲರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.

ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ 2020-21 ರಿಂದ 2022-23ರ ಸಾಲಿನ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿದ್ದವು. ಲೆಕ್ಕ ಪರಿಶೋಧನಾ ಸಮಿತಿ ತನಿಖೆ ವೇಳೆ ಭ್ರಷ್ಟಾಚಾರ ನಡೆದಿರುವುದು ಖಚಿತವಾಗಿದೆ. ಈ ಹಿನ್ನೆಲೆ ಜಿಲ್ಲೆಯ 32 ಪಿಡಿಒಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ದೇವದುರ್ಗ ತಾಲೂಕಿನ 33 ಗ್ರಾಮ ಪಂಚಾಯಿತಿಗಳಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ, ಇದಕ್ಕೆ ಸಂಬಂಧಿಸಿ 32 ಪಿಡಿಒಗಳನ್ನು ಅಮಾನತು ಮಾಡಲಾಗಿದೆ ಎಂದು ರಾಯಚೂರು ಜಿಪಂ ಸಿಇಒ ಪಾಂಡೆ ರಾಹುಲ್ ತುಕಾರಾಂ ವಿವರಿಸಿದ್ದಾರೆ.

ಇನ್ನು ಈ ಪೈಕಿ ನಮ್ಮ ಜಿಲ್ಲೆಯಲ್ಲಿರುವ 27 ಪಿಡಿಒಗಳನ್ನು ನೇರ ಅಮಾನತು ಮಾಡಲಾಗಿದ್ದು ಉಳಿದ 5 ಮಂದಿಯನ್ನು ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ನಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಅಕ್ರಮ ಎಸಗಿರುವ ಬಗ್ಗೆ ಮುಂದಿನ ದಿನಗಳಲ್ಲಿ ದೂರುಗಳು ಬಂದರೆ ಪರಿಶೀಲಿಸಿ ಅಂಥ ಭ್ರಷ್ಟ ಪಿಡಿಒಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ