ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ರಾತ್ರಿ ಇಡೀ ವ್ಯಾಪಕವಾಗಿ ಸುರಿದ ಮಳೆಯಿಂದಾಗಿ ಹಲವು ಕಡೆ ಸಮಸ್ಯೆಯಾಗಿದ್ದು, ಬಿಬಿಎಂಪಿ ಅಧಿಕಾರಿ ಸಮಸ್ಯೆಯಾಗಿರುವ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.
ನಗರದಲ್ಲಿ ನಿನ್ನೆ ರಾತ್ರಿ 10 ಗಂಟೆಯಿಂದ ಇಂದು ಮುಂಜಾನೆ 6 ಗಂಟೆಯವರೆಗೆ ಸರಾಸರಿ 66 ಮಿ.ಮೀ ಮಳೆಯಾಗಿದೆ. ಅತಿ ಹೆಚ್ಚು ಕೆಂಗೇರಿಯಲ್ಲಿ 132 ಮಿ.ಮೀ, ಅತೀ ಕಡಿಮೆ ಗೊಟ್ಟಿಗೆರೆಯಲ್ಲಿ 32 ಮಿ.ಮೀ ಮಳೆಯಾಗಿದ್ದು, ನಗರದಲ್ಲಿ ವಲಯವಾರು ಮಳೆಯಾಗಿರುವ ವಿವರಗಳು ದಾಖಲಿಸಲಾಗಿದೆ.
ಮಹದೇವಪುರ ವಲಯ: * ಮಹದೇವಪುರ ವಲಯದಲ್ಲಿ ಸುಮಾರು 10 ಕಡೆ ಜಲಾವೃತವಾಗಿದ್ದು, ಪ್ರಮುಖವಾಗಿ ಸಾಯಿ ಲೇಔಟ್ ಪ್ರದೇಶವು ಸಂಪೂರ್ಣ ಜಲಾವೃತವಾಗಿದೆ. 6 ಟ್ರ್ಯಾಕ್ಟರ್, 2 ಜೆ.ಸಿ.ಬಿ, 35 ಸಿಬ್ಬಂದಿಗಳು, 3 ಅಗ್ನಿ ಶಾಮಕ ವಾಹನ, ಎಸ್.ಡಿ.ಆರ್.ಎಫ್ ತಂಡದಿಂದ 2 ಬೋಟ್ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಸ್ಥಳೀಯ ನಿವಾಸಿಗಳಿಗೆ ಉಪಾಹಾರ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ.
* ಮಾರತ್ತಹಳ್ಳಿಯ ದೀಪ ನರ್ಸಿಂಗ್ ಹೋಮ್, ಚಿನ್ನಪ್ಪನಹಳ್ಳಿ 5ನೇ ಕ್ರಾಸ್, ಪಣತ್ತೂರ್ ರೈಲ್ವೆ ಕೆಳಸೇತುವೆ, ಗ್ರೀನ್ ಹುಡ್, ಇಬ್ಬಲೂರು ಜಂಕ್ಷನ್, ಬಾಲಾಜಿ ಲೇಔಟ್ – ಕೊತ್ತನೂರು, ಎ. ನಾರಾಯಣಪುರದ ಕೃಷ್ಣ ನಗರ, ಸುನೀಲ್ ಲೇಔಟ್, ಹರಳೂರು, ಬಿ.ಎಸ್.ಪಿ ಲೇಔಟ್ನ ಕಸವನಹಳ್ಳಿ ಕಡೆಗಳಲ್ಲಿ ರಸ್ತೆಗಳ ಮಲೆ ನೀರು ಮತ್ತು ಮನೆಗಳಿಗೆ ನೀರು ನುಗ್ಗಿದೆ. ಪಾಲಿಕೆ ಸಿಬ್ಬಂದಿ ಈಗಾಗಲೇ ಕಾರ್ಯಾಚರಣೆ ನಡೆಸಿ ಬಹುತೇಕ ಕಡೆ ಸಮಸ್ಯೆ ಬಗೆಹರಿಸಿದ್ದಾರೆ.
ಪೂರ್ವ ವಲಯ: * ರಾಜಕಾಲುವೆಯಲ್ಲಿ ನೀರು ತುಂಬಿ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಎಚ್.ಬಿ.ಆರ್ 5, 6, 7, 8ನೇ ಬ್ಲಾಕ್, ಬೈರಸಂದ್ರ ಲೇಔಟ್, ಕೆಂಪೇಗೌಡ ರಸ್ತೆ, ಕಾಮರಾಜ ನಗರ ಪ್ರದೇಶಗಳು ಜಲಾವೃತವಾಗಿವೆ. ನೀರು ಹೊರ ಹಾಕಲು ನಿರ್ವಹಣಾ ತಂಡಗಳು, 6 ಶಿಲ್ಟ್ & ಟ್ರ್ಯಾಕ್ಟರ್ ಗಳ ತಂಡಗಳು, 2 ಜೆ.ಸಿ.ಬಿ ಗಳು ಹಾಗೂ 10 ಪಂಪ್ ಗಳ ವ್ಯವಸ್ಥೆ ಮಾಡಿ ನೀರನ್ನು ಹೊರಹಾಕುವ ಕೆಲಸ ಮಾಡಲಾಗುತ್ತಿದೆ.
ಬೊಮ್ಮನಹಳ್ಳಿ ವಲಯ: * ಎಚ್.ಎಸ್.ಆರ್ ಲೇಔಟ್ 6 ಮತ್ತು 7ನೇ ಸೆಕ್ಟರ್ ಮತ್ತು ಬನ್ನೇರುಘಟಟ್ಟ ಬಿಳೇಕಲ್ಲಹಳ್ಳಿ ಸಿಗ್ನಲ್ ನ ರಸ್ತೆಯಲ್ಲಿ ನೀರು ನಿಂತಿರುವುದು, ಯಲಚೇನಹಳ್ಳಿಯಲ್ಲಿ ಮನೆಗಳಿಗೆ ನೀರು ನುಗ್ಗಿರುವುದನ್ನು ನಿರ್ವಹಣಾ ತಂಡ ಹಾಗೂ ಪಂಪ್ಗಳ ವ್ಯವಸ್ಥೆ ಮಾಡಿ ಸಮಸ್ಯೆ ಬಗೆಹರಿಸಲಾಗಿದೆ.
ದಕ್ಷಿಣ ವಲಯ: * ಕೆ-100, ಕೆ-200 ಬೃಹತ್ ನೀರುಗಾಲುವೆಗಳು ಸಂಪರ್ಕ ಕಲ್ಪಿಸುವ ಸ್ಥಳದಲ್ಲಿ ಅಗಲೀಕರಣ ಕಡಿಮೆ ಇರುವ ಪರಿಣಾಮ ನಿರಿನ ಹರಿವಿನ ಮಟ್ಟ ಹೆಚ್ಚಾಗಿ ಮಡಿವಾಳ ಡಾಲರ್ಸ್ ಕಾಲೋನಿ, ಕೋರಮಂಗಲದ 6ನೇ ಬ್ಲಾಕ್, ಈಜೀಪುರ ಪ್ರದೇಶಗಳು ಜಲಾವೃತವಾಗಿದೆ. ಈ ಸಂಬಂಧ ಬೆಳ್ಳಂದೂರು ಬಳಿ ಮಳೆ ನೀರಿನ ಹರಿವಿನ ಮಟ್ಟವನ್ನು ಕಡಿಮೆ ಮಾಡಲು ತಾತ್ಕಾಲಿಕವಾಗಿ ಜೆಸಿಬಿ ಮೂಲಕ ಬಂಡ್ ತೆರವುಗೊಳಿಸಿ ನೀರು ಸರಾಗವಾಗಿ ಹರಿದು ಹೋಗಲು ಅನುವು ಮಾಡಲಾಗಿದ್ದು, ಈ ಪ್ರದೇಶಗಳಲ್ಲಿ ಜಲಾವೃತ ಪ್ರಮಾಣ ಕ್ರಮೇಣ ಕಡಿಮೆಯಾಗುತ್ತಿದೆ.
* ವೃಷಭಾವತಿ ವ್ಯಾಲಿ ಗಾಳಿ ಆಂಜನೇಯ ದೇವಸ್ಥಾನದ ಬಳಿ ಜಲಾವೃತವಾಗಿ ಮನೆಗಳಿಗೆ ನೀರು ನುಗ್ಗಿದ್ದು, ಸಮಸ್ಯೆ ಬಗೆಹರಿಸಲಾಗಿದೆ.
ಯಲಹಂಕ ವಲಯ: * ಚೌಡೇಶ್ವರಿ ನಗರದ ಅಟ್ಟೂರು ವ್ಯಾಪ್ತಿಯಲ್ಲಿ ಸುಮಾರು 15 ಮನೆಗಳಿಗೆ, ಡಿಫೆನ್ಸ್ ಲೇಔಟ್ ಹಾಗೂ ದ್ವಾರಕಾ ನಗರದಲ್ಲಿ ಸುಮಾರು 5 ಮನೆಗಳಿಗೆ ನೀರು ನುಗ್ಗಿದ್ದು, ಸದರಿ ಸ್ಥಳಗಳಲ್ಲಿ ಪಂಪ್ ಗಳನ್ನು ಅಳವಡಿಸಿ ನೀರು ತೆರವು ಮಾಡಲಾಗಿದೆ. ಇನ್ನು ಟಾಟಾ ನಗರ ಮುಖ್ಯರಸ್ತೆಯಲ್ಲಿ ನಿಂತಿದ್ದ ನೀರನ್ನು ತೆರವುಗೊಳಿಸಲಾಗಿದೆ.
ರಾಜಾರಾಜೇಶ್ವರಿ ನಗರ ವಲಯ: * ಐಡಿಯಲ್ಸ್ ಹೋಮ್ಸ್ 1ನೇ ಎ ಕ್ರಾಸ್ ವೃಷಭಾವತಿ ವ್ಯಾಲಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ಹಿಮ್ಮುಖವಾಗಿ ಚಲಿಸಿದ ಪರಿಣಾಮ 3 ಹಸು, 1 ಕರು ಹಾಗೂ 1 ಎಮ್ಮೆ ಸೇರಿ 5 ಜಾನುವಾರಗಳು ಮೃತಪಟ್ಟಿರುತ್ತವೆ. ಅಲ್ಲದೆ ಸುಮಾರು 12 ಮನೆಗಳಿಗೆ ನೀರು ನುಗ್ಗಿದ್ದು, ಸೈಡ್ ಡೈನ್ ಗಳನ್ನು ಸ್ವಚ್ಚಗೊಳಿಸಿ ನೀರು ಹರಿದು ಹೋಗುವಂತೆ ವ್ಯವಸ್ಥೆ ಮಾಡಲಾಗಿದೆ.
* ವಿಜಯಶ್ರೀ ಬಡವಾಣೆ ಹೆಮ್ಮಿಗೆಪುರ ರಾಜಕಾಲುವೆಯಲ್ಲಿ ನೀರು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಜಲಾವೃತವಾಗಿದ್ದು, ಪಾಲಿಕೆಯ ತಂಡ ನಿಯೋಜಿಸುವ ಮಾಡಿ ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಂಗೇರಿ ಬಳಿಯ ಕೋಟೆ ಲೇಔಟ್ ನಲ್ಲಿ ಸುಮಾರು 100 ಮನೆಗಳಿಗೆ ನಿರು ನುಗ್ಗಿದ್ದು, 4 ಪಂಪ್ಗಳನ್ನು ಅಳವಡಿಸಿ ನೀರು ತೆರವು ಕಾರ್ಯ ಮಾಡಲಾಗುತ್ತಿದೆ.
ದಾಸರಹಳ್ಳಿ ವಲಯ: * ಕೆ.ಜಿ ಹಳ್ಳಿ, ಡಿಫೆನ್ಸ್ ಕಾಲೋನಿ, ಮೇಡರಹಳ್ಳಿಯ ಶ್ರೀದೇವಿ ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ನೀರನ್ನು ತೆರವುಗೊಳಿಸುವ ಕೆಲಸ ಮಾಡಲಾಗುತ್ತಿದೆ. ರುಕ್ಮಿಣಿ ನಗರ, ವಿದ್ಯಾನಗರ, ಬಿ.ಟಿ.ಎಸ್ ಲೇಔಟ್ ಗಳಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಪಂಪ್ಗಳನ್ನು ಅಳವಡಿಸಿ ನೀರು ತೆರವುಗೊಳಿಸಲಾಗಿದೆ.
ಪಶ್ಚಿಮ ವಲಯ: * ಕೆ.ಪಿ ಅಗ್ರಹಾರದಲ್ಲಿ ರಾಜಕಾಲುವೆಯಲ್ಲಿ ನೀರಿನ ಹರಿವಿನ ಮಟ್ಟ ಹೆಚ್ಚಾಗಿ 20 ಮನೆಗಳಿಗೆ ನೀರು ನುಗ್ಗಿದ್ದು, ಸದರಿ ಪ್ರದೇಶದಲ್ಲಿ 4 ಪಂಪ್ಗಳನ್ನು ಅಳವಡಿಸಿ ನೀರು ತೆರವು ಕಾರ್ಯ ಮಾಡಲಾಗುತ್ತಿದೆ.
ಧರೆಗುರುಳಿದ ಮರಗಳ ತೆರವು ಕಾರ್ಯಾಚರಣೆ: * ನಗರದಲ್ಲಿ ಧರೆಗುರುಳಿದ ಮರಗಳು, ರೆಂಬೆ/ಕೊಂಬೆಗಳು ತೆರವುಗೊಳಿಸಲು 30 ತಂಡಗಳನ್ನು ನಿಯೋಜಿಸಲಾಗಿದ್ದು, ರಾತ್ರಿ ಸುರಿದ ಮಳೆಯಿಂದಾಗಿ 27 ಮರಗಳು, 43 ಮರದ ರೆಂಬೆ/ಕೊಂಬೆಗಳು ಧರೆಗುರುಳಿದ್ದು, ಈಗಾಗಲೇ ಬಹುತೇಕ ಮರ, ಮರದ ರೆಂಬೆ/ಕೊಂಬೆಗಳನ್ನು ತೆರವುಗೊಳಿಸಲಾಗಿದೆ.
ನಾಗರಿಕರು ಸಹಾಯವಾಣಿ 1533 ಗೆ ಕರೆ ಮಾಡಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಯಿಂದಾಗುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದಲ್ಲಿ ನಾಗರಿಕರು ಕೂಡಲೇ ಬಿಬಿಎಂಪಿ ಸಹಾಯವಾಣಿ ಸಂಖ್ಯೆಯಾದ 1533 ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಅದಲ್ಲದೆ ಪಾಲಿಕೆ ಕೇಂದ್ರ ಕಛೇರಿ ಹಾಗೂ 8 ವಲಯಗಳಲ್ಲಿರುವ ನಿಯಂತ್ರಣ ಕೊಠಡಿಗಳ ಸಂಖ್ಯೆಗಳಿಗೆ ಕರೆ ಮಾಡಿ ದೂರು ನೀಡಲು ಕೋರಿದೆ.
ಯಲಹಂಕ ವಲಯದ ಎಲ್ಲ ಕೆರೆಗಳು ಭರ್ತಿ: ಯಲಹಂಕ ವಲಯ ವ್ಯಾಪ್ತಿಯಲ್ಲಿ 29 ಕೆರೆಗಳು ಬರಲಿದ್ದು, ಎಲ್ಲಾ ಕೆರೆಗಳು ಕೂಡ ಸಂಪೂರ್ಣವಾಗಿ ತುಂಬಿರುತ್ತವೆ. ಇನ್ನು ಪ್ರಮುಖವಾಗಿ ಚೌಡೇಶ್ವರಿ ಲೇಔಟ್ ವ್ಯಾಪ್ತಿಯಲ್ಲಿ 103 ಮಿ.ಮೀ ಮಳೆಯಾಗಿದ್ದರೂ ಕೂಡ ಕೇಂದ್ರೀಯ ವಿಹಾರ್ ಅಪಾರ್ಟ್ಮ್ಂಟ್ ನಲ್ಲಿ ಈ ಬಾರಿ ಯಾವುದೇ ರೀತಿಯ ಸಮಸ್ಯೆ ಆಗಿರುವುದಿಲ್ಲ. ರಮಣಶ್ರೀ ಕ್ಯಾಲಿಫೋರ್ನಿಯಾ ವ್ಯಾಪ್ತಿಯಲ್ಲಿಯೂ ಯಾವುದೇ ಜಲಾವೃತವಾಗಿರುವುದಿಲ್ಲ.
ವಲಯವಾರು ಹೆಚ್ಚು ಮಳೆಯಾಗಿರುವ ಪ್ರದೇಶಗಳ ವಿವರ:
* ರಾಜರಾಜೇಶ್ವರಿ ನಗರ ವಲಯದ ಕೆಂಗೇರಿಯಲ್ಲಿ 132 ಮಿ.ಮೀ
* ಯಲಹಂಕ ವಲಯದ ಚೌಡೇಶ್ವರಿ ನಗರದಲ್ಲಿ 103 ಮಿ.ಮೀ
* ದಕ್ಷಿಣ ವಲಯದ ಕೋರಮಂಗಲದಲ್ಲಿ 96 ಮಿ.ಮೀ
* ಮಹದೇವಪುರ ವಲಯದ ಎಚ್.ಎ.ಎಲ್ ವ್ಯಾಪ್ತಿಯಲ್ಲಿ 93 ಮಿ.ಮೀ.
* ದಾಸರಹಳ್ಳಿ ವಲಯದ ಬಾಗಲಗುಂಟೆ ವ್ಯಾಪ್ತಿಯಲ್ಲಿ 89 ಮಿ.ಮೀ
* ಪಶ್ಚಿಮ ವಲಯ ಕಾಟನ್ ಪೇಟೆ ವ್ಯಾಪ್ತಿಯಲ್ಲಿ 89 ಮಿ.ಮೀ
* ಪೂರ್ವ ವಲಯದ ಬಾಣಸವಾಡಿ ವ್ಯಾಪ್ತಿಯಲ್ಲಿ 85 ಮಿ.ಮೀ
* ಬೊಮ್ಮನಹಳ್ಳಿ ವಲಯದ ಎಚ್.ಎಸ್.ಆರ್ ಲೇಔಟ್ ನಲ್ಲಿ 73 ಮಿ.ಮೀ
Related

You Might Also Like
ಬೆಂ.ಗ್ರಾಮಾಂತರ: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮ- ವಾಹನ, ಸಾರ್ವಜನಿಕರ ಪ್ರವೇಶ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ (ಜೂ.20) ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದಲ್ಲಿನ ಬಿ.ಜಿ.ಎಸ್ ಆಸ್ಪತ್ರೆಯ ನೂತನ ಘಟಕದ ಕಟ್ಟಡ...
ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ...
ಮಾವಿನ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ
ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದ...
ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ
ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ...
KKRTC ಕಂಡಕ್ಟರ್ ಮೇಲೆ ಹಲ್ಲೆ: ಮೂವರಿಗೆ ₹75 ಸಾವಿರ ದಂಡ- ಕಟ್ಟಲಾಗದಿದ್ದರೆ 6 ತಿಂಗಳು ಜೈಲು ಶಿಕ್ಷೆ- ಕೋರ್ಟ್ ಮಹತ್ವದ ತೀರ್ಪು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಮೂವರಿಗೆ ಅಫಜಲಪುರ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯ ತಲಾ...
KKRTC ವಿಜಯಪುರ: ತಂದೆ ನಿಧನರಾದ ನಾಲ್ಕೇ ದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಅಂತ ಚಾಲಕನಿಗೆ ಗೈರುಹಾಜರಿ ಮಾಡಿದ ಡಿಸಿ ನಾರಾಯಣಪ್ಪ ಕುರುಬರ
ಒಟ್ಟು 58 ದಿನ ರಜೆಯಲ್ಲಿದ್ದ ಚಾಲಕ ಕಂ ನಿರ್ವಾಹಕನಿಗೆ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ 7ದಿನ ರಜೆ ಮಂಜೂರು ಮಾಡಿದ ಡಿಸಿಯ ನಡೆ ಅನುಮಾನಕ್ಕೆ ಎಡೆ...
BMTC: ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣದ FIRಗೆ ಹೈ ಕೋರ್ಟ್ ತಡೆ
ಬಿಎಂಟಿಸಿ ಚಾಲಕನ ಪರ ವಕ್ಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ವಕೀಲ ಎಚ್.ಬಿ.ಶಿವರಾಜು ಬಹುತೇಕ ಸಾರಿಗೆ ನೌಕರರ ಎಲ್ಲ ಪ್ರಕರಣಗಳಲ್ಲೂ ಜಾಣ್ಮೆಯ ವಾದ ಮಂಡಿಸಿ...
KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....