NEWSದೇಶ-ವಿದೇಶನಮ್ಮರಾಜ್ಯ

ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಒಕ್ಕೂಟ ಸರ್ಕಾರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸಂಪೂರ್ಣ ಅನ್ಯಾಯವಾಗಿರುವುದರ ವಿರುದ್ಧ ಸಂಸತ್‌ನಲ್ಲಿ ರಾಜ್ಯದ ಪ್ರತಿನಿಧಿಗಳು ಧ್ವನಿ ಎತ್ತಬೇಕು ಎಂದು ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.

ರಾಜ್ಯದ 19 ಎನ್‌ಡಿಎ ಸಂಸದರು ಹಾಗೂ ಐವರು ರಾಜ್ಯಸಭಾ ಸದಸ್ಯರಿಗೆ ಪತ್ರವನ್ನು ಬರೆದಿರುವ ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಕರ್ನಾಟಕಕ್ಕೆ ಅನ್ಯಾಯವಾಗುತ್ತಿರುವುದಕ್ಕೆ ಇಲ್ಲಿನ ಸಂಸದರ ಮೌನವೇ ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

“ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿರುವುದು ನಿಮ್ಮ ಗಮನಕ್ಕೂ ಬಂದಿದೆ ಎಂಬ ವಿಶ್ವಾಸ ಹೊಂದಿದ್ದೇವೆ. ರಾಜ್ಯ ಪ್ರಮುಖ ಯೋಜನೆಗಳನ್ನು ಪೂರ್ಣಗೊಳಿಸಲು ಈ ಬಾರಿಯ ಬಜೆಟ್‌ನಲ್ಲಿ ಮಾನ್ಯತೆ ನೀಡಬಹುದು ಎಂದು ಭಾವಿಸಿದ್ದೆವು ಆದರೆ ಅದು ಆಗಿಲ್ಲ.

ಇನ್ನು ಮೇಕೆದಾಟು ಸಮಾನಾಂತರ ಅಣೆಕಟ್ಟು, ಭದ್ರಾ ಮೇಲ್ದಂಡೆ ಯೋಜನೆ, ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ, ಏಮ್ಸ್‌ ಸ್ಥಾಪನೆ, ಪೆರಿಫೆರಲ್‌ ರಿಂಗ್‌ ರೋಡ್‌, ಸಬ್‌ ಅರ್ಬನ್‌ ರೈಲ್ವೆ ಸೇರಿದಂತೆ ಅನೇಕ ಪ್ರಮುಖ ಯೋಜನೆಗಳಿಗೆ ಅನುದಾನವನ್ನು ನಿರೀಕ್ಷಿಸಿದ್ದೆವು. ಆದರೆ ಈ ಬಾರಿಯು ಕರ್ನಾಟಕವನ್ನು ಕಡೆಗಣಿಸಿರುವುದು ಬೇಸರ ಮೂಡಿಸಿದೆ.

ನಾಡಿನಿಂದ ಒಟ್ಟು 19 ಸಂಸದರನ್ನು ಕೊಟ್ಟಿದ್ದರೂ ಕನ್ನಡಿಗರನ್ನು ಕೈಬಿಡಲಾಗಿದೆ. ಕಳೆದ ಬಾರಿ 25 ಸಂಸದರನ್ನು ಕೊಟ್ಟಿದ್ದಾಗಲೂ ಇದೇ ರೀತಿ ಕಡೆಗಣಿಸಲಾಗಿತ್ತು. ಪ್ರತಿಬಾರಿಯ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಚೊಂಬನ್ನು ಹೊರತುಪಡಿಸಿ ಬೇರೇನು ಸಿಗುತ್ತಿಲ್ಲ” ಎಂದು ಮುಖ್ಯಮಂತ್ರಿ ಚಂದ್ರು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ರಾಜ್ಯದ ಯಾವೊಬ್ಬ ಬಿಜೆಪಿ ಸಂಸದರೂ ಪಾರ್ಲಿಮೆಂಟ್‌ನಲ್ಲಿ ಗಟ್ಟಿ ಧ್ವನಿಯಲ್ಲಿ ಮಾತನಾಡಿದ ಉದಾಹರಣೆ ಇದುವರೆಗೆ ಸಿಕ್ಕಿಲ್ಲ. ಕರ್ನಾಟಕಕ್ಕೆ ಅನ್ಯಾಯವಾಗುತ್ತಿರುವುದಕ್ಕೆ ಇಲ್ಲಿನ ಸಂಸದರ ಮೌನವೇ ಪ್ರಮುಖ ಕಾರಣವಾಗಿದೆ. ಕನ್ನಡಿಗರ ಪರವಾಗಿ ಧ್ವನಿಯೆತ್ತಲು ಅಶಕ್ತರಾಗಿದ್ದರೆ ಕನ್ನಡಿಗರನ್ನು ಏಕೆ ಪ್ರತಿನಿಧಿಸುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ ನಿಮ್ಮನ್ನು ಸಂಸತ್ತಿಗೆ ಕನ್ನಡಿಗರು ಏಕೆ ಆಯ್ಕೆ ಮಾಡಿ ಕಳುಹಿಸಿದ್ದಾರೆ ಎಂಬುದನ್ನು ಮನಗಂಡು ಚರ್ಚೆಯಲ್ಲಿ ಭಾಗವಿಸಬೇಕು. ಇನ್ನೂ ಕೈಕಟ್ಟಿ ಕುಳಿತರೆ ಪ್ರಯೋಜನವಿಲ್ಲ. ಸಂಸತ್‌ನಲ್ಲಿ ರಾಜ್ಯವನ್ನು ಪ್ರತಿನಿಧಿಸುವ ನೀವು ನಿಷ್ಕ್ರಿಯರಾಗದೆ ಕನ್ನಡಿಗರ ಪರ ಧ್ವನಿಯೆತ್ತಬೇಕು. ಕನ್ನಡಿಗರ ಹಿತಕಾಯುವ ದೃಷ್ಟಿಯಲ್ಲಿ ಸದಾ ಎಚ್ಚರದ ಸ್ಥಿತಿಯಲ್ಲಿರಬೇಕು. ಕರ್ನಾಟಕದ ಪರ ಧ್ವನಿಗೆ ಪಕ್ಷಾತೀತವಾಗಿ ನಾವು ಬೆಂಬಲ ನೀಡುತ್ತೇವೆ” ಎಂದು ಮುಖ್ಯಮಂತ್ರಿ ಚಂದ್ರು ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್