NEWSನಮ್ಮಜಿಲ್ಲೆಬೆಂಗಳೂರು

ಬೆಳಗ್ಗೆ 5 ಗಂಟೆಗೆ ಬೃಹತ್ ಸಾಮೂಹಿಕ ಸ್ವಚ್ಛತಾ ಕಾರ್ಯ ಸ್ಥಳಕ್ಕೆ ಭೇಟಿ ನೀಡಿದ ರಾಜೇಂದ್ರ ಚೋಳನ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಂದು ಬೆಳಗ್ಗೆ 5 ಗಂಟೆಯಿಂದ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 6 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಬೃಹತ್ ಸಾಮೂಹಿಕ ಸ್ವಚ್ಛತಾ ಕಾರ್ಯದ ಸ್ಥಳಕ್ಕೆ ಭೇಟಿ ನೀಡಿದ ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಪರಿಶೀಲನೆ ನಡೆಸಿ, ಅಚ್ಚುಕಟ್ಟಾಗಿ ಸ್ವಚ್ಛತಾ ಕಾರ್ಯ ನಡೆಸಲು ಸೂಚಿಸಿದರು.

ಚಿಕ್ಕಪೇಟೆ ವಿಭಾಗದ ಆರ್.ವಿ.ರಸ್ತೆ, ಲಾಲ್‌ಬಾಗ್ ರಸ್ತೆಯಲ್ಲಿ ನಡೆಯುತ್ತಿರುವ ಸ್ವಚ್ಛತೆ ಕಾರ್ಯದಲ್ಲಿ ನಿರತರಾದ ಸ್ವಚ್ಛತೆ ಸಿಬ್ಬಂದಿಗಳು ಹಾಗೂ ಪೌರಕಾರ್ಮಿಕರೊಂದಿಗೆ ಚರ್ಚೆ ನಡೆಸಿ ಆಯುಕ್ತರು, ನಗರದ ಸ್ವಚ್ಛತೆ ಕಾಪಾಡುವಲ್ಲಿ ಪೌರಾಕಾರ್ಮಿಕರ/ ಸ್ವಚ್ಛತಾ (ನಿಮ್ಮ ಪಾತ್ರ) ಶ್ಲಾಘನೀಯವೆಂದು ತಿಳಿಸಿದರು.

ಪೌರ ಕಾರ್ಮಿಕರೊಂದಿಗೆ ಸಂವಾದ ನಡೆಸಿ ಅವರ ಕುಂದುಕೊರತೆ ಆಲಿಸಿದರು. ಪೌರಕಾರ್ಮಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು, ಪರಿಕರ, ಮಳೆಗಾಲದಲ್ಲಿ ಆಶ್ರಯತಾಣ, ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಅತ್ಯಂತ ತ್ವರಿತ ಗತಿಯಲ್ಲಿ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನು ಗಾಂಧಿನಗರದಲ್ಲಿ ನಡೆಯುತ್ತಿರುವ ಬೃಹತ್ ಸ್ವಚ್ಛತಾ ಕಾರ್ಯ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು ಸ್ವಚ್ಛತಾ ಕಾರ್ಯ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಪ್ರತಿ 15 ದಿನಗಳಿಗೊಮ್ಮೆ ಈ ರೀತಿಯ ಕಾರ್ಯ ಮುಂದುವರಿಸಿಕೊಂಡು ಹೋದಲ್ಲಿ ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಡಲು ಸಹಾಯಕವಾಗುತ್ತದೆ. ಆ ನಿಟ್ಟಿನಲ್ಲಿ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಟ್ರಾವೆಲ್ಸ್ ನವರಿಗೆ ದಂಡ ವಿಧಿಸಿ: ಗಾಂಧಿನಗರದಲ್ಲಿ ನಡೆಯುತ್ತಿರುವ ಸ್ವಚ್ಛತಾ ಕಾರ್ಯ ಪರಿಶೀಲನೆ ನಡೆಸುವ ವೇಳೆ ಸುಮಾರು ಹೊತ್ತಿನಿಂದ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಟ್ರಾವೆಲ್ಸ್ ನ್ನು ಗಮನಿಸಿದ ಆಯುಕ್ತರು ಸಂಚಾರಕ್ಕೆ ಅಡಚಣೆಯಾಗುತ್ತಿರುವುದರ ಜತೆಗೆ ಟ್ರಾವೆಲ್ಸ್ ಸಂಸ್ಥೆಯ ಕಚೇರಿಯವರಿಂದ ರಸ್ತೆಯಲ್ಲಿ ನೈರ್ಮಲ್ಯ ಹಾಳಾಗಿದ್ದು ಈ ಏಜನ್ಸಿಯವರಿಗೆ ದಂಡ ವಿಧಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ