CRIMENEWSನಮ್ಮಜಿಲ್ಲೆ

ರಾಮನಗರ: ಬಿಡದಿ ರೈಲ್ವೆ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಜಿಲ್ಲೆಯ ಬಿಡದಿಯ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ತಡರಾತ್ರಿ ಕಂಟ್ರೋಲ್ ರೂಂಗೆ ಕರೆಮಾಡಿ ಬೆದರಿಕೆ ಹಾಕಿದ ಹುಸಿ ಬಾಂಬ್ ಕರೆಯೊಂದು ಬಂದಿತ್ತು.

ಬೆಂಗಳೂರಿನ ರೈಲ್ವೆ ಕಂಟ್ರೋಲ್ ರೂಂಗೆ ಕರೆಮಾಡಿ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಕಿಡಿಗೇಡಿಗಳು ತಿಳಿಸಿದ್ದಾರೆ. ಈ ಹಿನ್ನೆಲೆ ಇಂದು ಬೆಳಗ್ಗೆಯೇ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್‌ನಿಂದ ಪರಿಶೀಲನೆ ನಡೆಸಿತು.

ರೈಲ್ವೆ ಅಧಿಕಾರಿಗಳು ಹಾಗೂ ರಾಮನಗರ ಡಿವೈಎಸ್ಪಿ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗಿದೆ. ಬಿಡದಿ ರೈಲ್ವೆ ನಿಲ್ದಾಣವನ್ನು ಇಂಚಿಂಚೂ ಪರಿಶೀಲನೆ ನಡೆಸಿದ್ದು, ರೈಲ್ವೆ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಮೇಲೂ ನಿಗಾ ಇಡಲಾಗುತ್ತಿದೆ. ಜತೆಗೆ ಬೆದರಿಕೆ ಕರೆ ಮಾಡಿರುವ ಕಿಡಿಗೇಡಿಗಳ ಪತ್ತೆ ಕಾರ್ಯದಲ್ಲೂ ಅಧಿಕಾರಿಗಳು ನಿರತರಾಗಿದ್ದಾರೆ.

Deva
the authorDeva

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ