CrimeNEWSನಮ್ಮಜಿಲ್ಲೆ

ಪೊಲೀಸರ ಕ್ಷಪ್ರ ಕಾರ್ಯಾಚರಣೆ: 30 ಗಂಟೆಯೊಳಗೇ ಟೀಚರ್ ಕೊಲೆ ಆರೋಪಿ ಸೆರೆ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿ ಗ್ರಾಮದ ಶಿಕ್ಷಕಿ ದೀಪಿಕಾ ಹತ್ಯೆ ಕೇಸ್‌ನಲ್ಲಿ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುವ ಮೂಲಕ ಪ್ರಕರಣ ಬೆಳಕಿಗೆ ಬಂದ 30 ಗಂಟೆಯೊಳಗೇ ತಲೆಮರೆಸಿಕೂಂಡಿದ್ದ ಆರೋಪಿ 22 ವರ್ಷದ ನಿತೀಶ್‌ನನ್ನು ಬಂಧಿಸಿದ್ದಾರೆ.

ಆರೋಪಿ ನಿತೀಶ್‌ ಕೊಲೆಯಾದ ಟೀಚರ್ ದೀಪಿಕಾ ಜತೆ ಸಲುಗೆಯಿಂದ ಇದ್ದ. ಅಕ್ಕ, ಅಕ್ಕ ಎನ್ನುತ್ತಲೇ ಕೊಲೆ ಮಾಡಿ ಮೇಲುಕೋಟೆ ಬೆಟ್ಟದ ತಪ್ಪಲಲ್ಲಿ ಶಿಕ್ಷಕಿಯನ್ನು ಶವ ಹೂತಿಟ್ಟಿದ್ದನು ಎಂದು ಹೇಳಲಾಗುತ್ತಿದೆ.

ಘಟನೆ ವಿವರ: ಜನವರಿ 20ರಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ಶಿಕ್ಷಕಿ ದೀಪಿಕಾ (28) ಅವರ ಕೊಲೆಯಾಗಿತ್ತು. ಶನಿವಾರ ಮಧ್ಯಾಹ್ನ ಶಾಲೆಯಿಂದ ತೆರಳಿದ್ದ ದೀಪಿಕಾ ನಿಗೂಢವಾಗಿ ನಾಪತ್ತೆಯಾಗಿದ್ದರು. ಅಲ್ಲದೆ ಅಂದು ಸಂಜೆ ಬೆಟ್ಟದ ಹಿಂಭಾಗದ ರಸ್ತೆ ಸಮೀಪ ದೀಪಿಕಾ ಅವರ ಸ್ಕೂಟರ್ ಪತ್ತೆಯಾಗಿತ್ತು.

ಮೇಲುಕೋಟೆಯಲ್ಲಿ ದೀಪಿಕಾ ಅವರನ್ನು ಎಳೆದಾಡುತ್ತಿದ್ದ ದೃಶ್ಯವನ್ನು ಬೆಟ್ಟದ ಮೇಲಿಂದ ಪ್ರವಾಸಿಗೊಬ್ಬರು ವಿಡಿಯೋ ಮಾಡಿದ್ದರು. ಆರೋಪಿ ನಿತೀಶ್ ಅವರು ದೀಪಿಕಾಗೆ ಕಡೆಯದಾಗಿ ಫೋನ್ ಕೂಡ ಮಾಡಿದ್ದ.

ಈ ನಡುವೆ ಕಳೆದ ಸೋಮವಾರ ಸಂಜೆ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಶವ ಪತ್ತೆಯಾಗಿತ್ತು. ಶವ ಪತ್ತೆಯಾಗುತ್ತಿದ್ದಂತೆ ನಿತೀಶ್ ಗ್ರಾಮದಿಂದ ಎಸ್ಕೇಪ್ ಆಗಿದ್ದ. ಇದರಿಂದ ಅನುಮಾನಗೊಂಡ ದೀಪಿಕಾ ಪತಿ ಲೋಕೇಶ್ ಅವರು ನಿತೀಶನೆ ಕೊಲೆಗಾರ ಎಂದು ಆರೋಪಿಸಿದ್ದರು.

ಈ ಎಲ್ಲ ಆಧಾರದ ಮೇರೆಗೆ ದೀಪಿಕಾ ಮೃತದೇಹ ಸಿಕ್ಕ 30 ಗಂಟೆಯೊಳಗೇ ಆರೋಪಿ ನಿತೀಶ್‌ನನ್ನು ಪೊಲೀಸರು ಬಂಧಿಸಿದ್ದಾರೆ.

DYSP ಮುರುಳಿ ನೇತೃತ್ವದಲ್ಲಿ ಹಂತಕರ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿತ್ತು. ಆರೋಪಿ ನಿತೀಶ್‌ನನ್ನು ಬಂಧಿಸಿರುವ ಪೊಲೀಸರು ಇಂದೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಬಳಿಕ ರೀಲ್ಸ್ ಟೀಚರ್ ಕೊಲೆಗೆ ಕಾರಣವೇನು ಅನ್ನೋದರ ಬಗ್ಗೆ ವಿಚಾರಣೆ ನಡೆಸಲಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ