CrimeNEWSನಮ್ಮಜಿಲ್ಲೆ

ಪೊಲೀಸರ ಕ್ಷಪ್ರ ಕಾರ್ಯಾಚರಣೆ: 30 ಗಂಟೆಯೊಳಗೇ ಟೀಚರ್ ಕೊಲೆ ಆರೋಪಿ ಸೆರೆ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿ ಗ್ರಾಮದ ಶಿಕ್ಷಕಿ ದೀಪಿಕಾ ಹತ್ಯೆ ಕೇಸ್‌ನಲ್ಲಿ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುವ ಮೂಲಕ ಪ್ರಕರಣ ಬೆಳಕಿಗೆ ಬಂದ 30 ಗಂಟೆಯೊಳಗೇ ತಲೆಮರೆಸಿಕೂಂಡಿದ್ದ ಆರೋಪಿ 22 ವರ್ಷದ ನಿತೀಶ್‌ನನ್ನು ಬಂಧಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಆರೋಪಿ ನಿತೀಶ್‌ ಕೊಲೆಯಾದ ಟೀಚರ್ ದೀಪಿಕಾ ಜತೆ ಸಲುಗೆಯಿಂದ ಇದ್ದ. ಅಕ್ಕ, ಅಕ್ಕ ಎನ್ನುತ್ತಲೇ ಕೊಲೆ ಮಾಡಿ ಮೇಲುಕೋಟೆ ಬೆಟ್ಟದ ತಪ್ಪಲಲ್ಲಿ ಶಿಕ್ಷಕಿಯನ್ನು ಶವ ಹೂತಿಟ್ಟಿದ್ದನು ಎಂದು ಹೇಳಲಾಗುತ್ತಿದೆ.

ಘಟನೆ ವಿವರ: ಜನವರಿ 20ರಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ಶಿಕ್ಷಕಿ ದೀಪಿಕಾ (28) ಅವರ ಕೊಲೆಯಾಗಿತ್ತು. ಶನಿವಾರ ಮಧ್ಯಾಹ್ನ ಶಾಲೆಯಿಂದ ತೆರಳಿದ್ದ ದೀಪಿಕಾ ನಿಗೂಢವಾಗಿ ನಾಪತ್ತೆಯಾಗಿದ್ದರು. ಅಲ್ಲದೆ ಅಂದು ಸಂಜೆ ಬೆಟ್ಟದ ಹಿಂಭಾಗದ ರಸ್ತೆ ಸಮೀಪ ದೀಪಿಕಾ ಅವರ ಸ್ಕೂಟರ್ ಪತ್ತೆಯಾಗಿತ್ತು.

ಮೇಲುಕೋಟೆಯಲ್ಲಿ ದೀಪಿಕಾ ಅವರನ್ನು ಎಳೆದಾಡುತ್ತಿದ್ದ ದೃಶ್ಯವನ್ನು ಬೆಟ್ಟದ ಮೇಲಿಂದ ಪ್ರವಾಸಿಗೊಬ್ಬರು ವಿಡಿಯೋ ಮಾಡಿದ್ದರು. ಆರೋಪಿ ನಿತೀಶ್ ಅವರು ದೀಪಿಕಾಗೆ ಕಡೆಯದಾಗಿ ಫೋನ್ ಕೂಡ ಮಾಡಿದ್ದ.

ಈ ನಡುವೆ ಕಳೆದ ಸೋಮವಾರ ಸಂಜೆ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಶವ ಪತ್ತೆಯಾಗಿತ್ತು. ಶವ ಪತ್ತೆಯಾಗುತ್ತಿದ್ದಂತೆ ನಿತೀಶ್ ಗ್ರಾಮದಿಂದ ಎಸ್ಕೇಪ್ ಆಗಿದ್ದ. ಇದರಿಂದ ಅನುಮಾನಗೊಂಡ ದೀಪಿಕಾ ಪತಿ ಲೋಕೇಶ್ ಅವರು ನಿತೀಶನೆ ಕೊಲೆಗಾರ ಎಂದು ಆರೋಪಿಸಿದ್ದರು.

ಈ ಎಲ್ಲ ಆಧಾರದ ಮೇರೆಗೆ ದೀಪಿಕಾ ಮೃತದೇಹ ಸಿಕ್ಕ 30 ಗಂಟೆಯೊಳಗೇ ಆರೋಪಿ ನಿತೀಶ್‌ನನ್ನು ಪೊಲೀಸರು ಬಂಧಿಸಿದ್ದಾರೆ.

DYSP ಮುರುಳಿ ನೇತೃತ್ವದಲ್ಲಿ ಹಂತಕರ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿತ್ತು. ಆರೋಪಿ ನಿತೀಶ್‌ನನ್ನು ಬಂಧಿಸಿರುವ ಪೊಲೀಸರು ಇಂದೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಬಳಿಕ ರೀಲ್ಸ್ ಟೀಚರ್ ಕೊಲೆಗೆ ಕಾರಣವೇನು ಅನ್ನೋದರ ಬಗ್ಗೆ ವಿಚಾರಣೆ ನಡೆಸಲಿದ್ದಾರೆ.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ