Please assign a menu to the primary menu location under menu

NEWSಕೃಷಿದೇಶ-ವಿದೇಶ

ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಪಂಜಾಬ್, ಹರಿಯಾಣ ರೈತರ ಹೋರಾಟ ಎಂದು ಸಮಸ್ಯೆಗಳ ಪರಿಹಾರಕ್ಕೆ ಸರ್ವೋಚ್ಚ ನ್ಯಾಯಾಲಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಐದು ಜನ ಪರಿಣಿತರ ಸೇರಿಸಿ ಸಮಿತಿ ರಚಿಸಲಾಗಿದೆ ಈ ಸಮಿತಿಯಲ್ಲಿ ದಕ್ಷಿಣ ಭಾರತ ರಾಜ್ಯಗಳ ಪರಿಣಿತರನ್ನು ಸೇರಿಸಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.

ನಗರದ ಜಲದರ್ಶಿನಿಯಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ರೈತರಿಗೆ ಎಂಎಸ್‌ಪಿ ಗ್ಯಾರಂಟಿ ಕಾನೂನು ಆಗಬೇಕು ಎಂದು ಹೋರಾಟ ನಡೆಸಲಾಗುತ್ತಿದೆ. ಈ ಹೋರಾಟವನ್ನು ಇಡೀ ದೇಶದ ರೈತರು ಬೆಂಬಲಿಸಿ ಮುಂದುವರಿಸಿದ್ದಾರೆ. ಈಗ ರಚಿಸಿರುವ ಸಮಿತಿಯನ್ನು ಇಡೀ ದೇಶಕ್ಕೆ ಅನ್ವಯವಾಗುವಂತೆ ದಕ್ಷಿಣ ಭಾರತ ರಾಜ್ಯಗಳ ಪರಿಣಿತರನ್ನು ಸೇರಿಸಿ ಸಮಿತಿ ರಚಿಸಿ. ಈಗ ಹೂರಡಿಸಿರುವ ಆದೇಶ ಪುನರ್ ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.

(ಜಿಎಂ ಸೀಡ್ಸ) ಕುಲಾಂತರಿ ಬೀಜ ರೈತರ ಹಿತದೃಷ್ಟಿಯಿಂದ ರಾಜ್ಯ ಕೇಂದ್ರ ಸರ್ಕಾರಗಳು ಬಹಿಷ್ಕಾರ ಮಾಡಲಿ. ಖಾಸಗಿ ಫೈನಾನ್ಸ್ ಗಳು ಖಾಸಗಿ ಬ್ಯಾಂಕುಗಳ ಹಾವಳಿ. ಕಾನೂನುಬಾಹಿರ ಕಿರುಕುಳ ತಪ್ಪಿಸಲು ಕೂಡಲೇ ರಿಸರ್ವ್ ಬ್ಯಾಂಕ್ ಕಠಿಣ ನೀತಿ ರೂಪಿಸಬೇಕು. ರೈತರ ಕೃಷಿ ಸಾಲ ವಸೂಲಾತಿಗಾಗಿ ರೂಪಿಸಿರುವ ಸರ್ಪ್ರೈಸಿ ಕಾಯ್ದೆಯನ್ನು ರದ್ದುಗೊಳಿಸಬೇಕು ಈ ಬಗ್ಗೆ ರಾಜ್ಯದ ಸಂಸದರು ಒತ್ತಾಯಿಸಬೇಕು ಎಂದು ಆಗ್ರಹಿಸಿದರು.

ಪ್ರಸಕ್ತ ಸಾಲಿನ ಹೆಚ್ಚುವರಿ ಕಬ್ಬುದರ ನಿಗದಿ, ಕಳೆದ ವರ್ಷದ 150 ಬಾಕಿ ಕೊಡಿಸಲು ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಳ್ಳಬೇಕು. ಭತ್ತ ಉತ್ಪಾದನಾ ವೆಚ್ಚ ಏರಿಕೆಯಾಗಿದ್ದು, ರಾಜ್ಯ ಸರ್ಕಾರ ಕನಿಷ್ಠ ಬೆಂಬಲ ಬೆಲೆಗೆ ಹೆಚ್ಚುವರಿ 500 ಪ್ರೋತ್ಸಾಹ ಧನ ನೀಡಬೇಕು ಎಂದರು.

ಇನ್ನು ಕೇರಳ ಹಾಗೂ ಒರಿಸ್ಸಾ ಮಾದರಿಯಲ್ಲಿ ರಾಜ್ಯದ ರೈತರ ಸಮಸ್ಯೆಗಳ ಕುರಿತು ಅಕ್ಟೋಬರ್‌ನಲ್ಲಿ ರಾಜ್ಯ ರೈತ ಸಮಾವೇಶ ನಡೆಸಲಾಗುತ್ತದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಮುಖಂಡರಾದ ಬಲ್ಲೂರ್ ರವಿಕುಮಾರ್, ಮಂಜೇಶಗೌಡ, ಅಜೇಯ ಕುಮಾರ, ಧರ್ಮರಾಜ, ಅಯೂಬ್ ಖಾನ್, ನೆಲಮಂಗಲ ಜಗದೀಶ, ರವೀಶ, ಕೂಟ್ರೇಶ ಚೌಧರಿ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಉಡಿಗಾಲ ರೇವಣ್ಣ, ಸುಂದ್ರಪ್ಪ, ನೀಲಕಂಠಪ್ಪ ಮುಂತಾದವರು ಇದ್ದರು.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ