CRIMENEWSಸಿನಿಪಥ

ಮಚ್ಚು ಹಿಡಿದು ರೀಲ್ಸ್‌ ಮಾಡಿದ ಪ್ರಕರಣ: ರಜತ್‌ ಮತ್ತೆ ಬಂಧನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಚ್ಚು ಹಿಡಿದು ಮಾಡಿದ ರೀಲ್ಸ್‌ ಪ್ರಕರಣಕ್ಕೆ ಸಂಬಂಧಿಸಿದ ಜಾಮೀನು ಷರತ್ತುಗಳನ್ನು ಉಲ್ಲಂಘನೆ ಮಾಡಿರುವ ಆರೋಪದ ಮೇರೆಗೆ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಬಸವೇಶ್ವರನಗರ ಪೊಲೀಸರು ಮತ್ತೆ ರಜತ್‌ನನ್ನು ಬಂಧಿಸಿದ್ದು, ಮಚ್ಚು ಹಿಡಿದು ರೀಲ್ಸ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ರಜತ್‌ಗೆ ನೋಟಿಸ್ ನೀಡಿದ್ದರು. ಜತೆಗೆ ರೀಲ್ಸ್‌ಗ ಬಳಸಿದ ಮಚ್ಚು ಪತ್ತೆಯಾಗಿಲ್ಲ. ಆ ಬಳಿಕ ಎರಡು ಬಾರಿ ನೋಟಿಸ್ ನೀಡಲಾಗಿದೆ. ಆದರೆ, ಪೊಲೀಸರ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾಣ ವ್ಯಕ್ತಪಡಿಸಿರುವ ನ್ಯಾಯಾಲಯವು NBW ಜಾರಿ ಮಾಡಿತ್ತು.

ನ್ಯಾಯಾಲಯದ ಆದೇಶದ ಮೇರೆಗೆ ರಜತ್‌ನನ್ನು ಬಂಧಿಸಲಾಗಿದೆ. ಇನ್ನು ರಜತ್ ಬಂಧನದ ನಂತರ, ಪೊಲೀಸರು ವಿನಯ್ ಗೌಡ ಅವರನ್ನು ಬಂಧಿಸಲು ಮುಂದಾಗಿದ್ದಾರೆ. ಆ ನಂತರ, ಪೊಲೀಸರು ಇಬ್ಬರನ್ನೂ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ಬಂಧನ ಭೀತಿ ಶುರುವಾಗುತ್ತಿದ್ದಂತೆ ವಿನಯ್ ಗೌಡ ಪ್ರತಿಕ್ರಿಯಿಸಿದ್ದು, ನಾನು ಸಿನಿಮಾ ಚಿತ್ರೀಕರಣದಲ್ಲಿದ್ದೇನೆ, ನಿನ್ನೆ ಪೊಲೀಸ್ ಠಾಣೆಗೆ ಹೋಗಿದ್ದೆ, ವಾರಂಟ್ ಜಾರಿಯಾಗಿದೆಯೋ ಇಲ್ಲವೋ ನನಗೆ ತಿಳಿದಿಲ್ಲ ಎಂದು ಸ್ಪಷ್ಟಪಡಿಸಿದರು. ನಾನು ಸದ್ಯಕ್ಕೆ ಮನೆಯಲ್ಲಿಲ್ಲ, ನನಗೆ ಯಾವುದೇ ಕರೆ ಬಂದಿಲ್ಲ ಎಂದು ಹೇಳಿದ್ದಾರೆ.

Deva
the authorDeva

Leave a Reply

error: Content is protected !!
Latest news
ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ ಚಿತ್ರದುರ್ಗ: ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಾರಿಗೆ ನೌಕರರ ಪಾದಯಾತ್ರೆ ಆರಂಭ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ ನಾಪತ್ತೆ