ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ಗೆ ಮತ್ತೆ ಜೈಲಾ ಇಲ್ಲ ಬೇಲಾ- ಒಂದು ವಾರ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನ್ಯೂಡೆಲ್ಲಿ: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ಸೇರಿದಂತೆ 7 ಮಂಗಿಗೆ ಮತ್ತೆ ಜೈಲಾಗುತ್ತಾ ಅಥವಾ ಬೇಲಾಗುತ್ತಾ ಅನ್ನೋ ವಿಚಾರ ಸುಪ್ರೀಂ ಕೋರ್ಟ್ನಲ್ಲಿ ಕುತೂಹಲವಾಗಿಯೇ ಉಳಿದಿದೆ.
ಸದ್ಯ ಎರಡೂ ಕಡೆ ವಕೀಲರ ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಾರ್ದಿವಾಲಾ ನೇತೃತ್ವದ ದ್ವಿ-ಸದಸ್ಯ ನ್ಯಾಯಪೀಠ ಬಳಿಕ ಒಂದು ವಾರದಲ್ಲಿ ಆದೇಶ ಪ್ರಕಟಿಸುವುದಾಗಿ ಹೇಳಿ ಆದೇಶವನ್ನು ಕಾಯ್ದಿರಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ಗೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ದ್ವಿ-ಸದಸ್ಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಹೈಕೋರ್ಟ್ ರೀತಿ ತರಾತುರಿಯಲ್ಲಿ ಆದೇಶ ನೀಡುವುದಿಲ್ಲ ಎಂದು ಹೇಳಿದ ಸುಪ್ರೀಂ ಒಂದು ವಾರದಲ್ಲಿ ಆದೇಶ ಪ್ರಕಟಿಸುವುದಾಗಿ ತಿಳಿಸಿದೆ.
ಇನ್ನು ಒಂದೂವರೆ ಗಂಟೆಗಳ ಕಾಲ ವಾದ-ಪ್ರತಿವಾದ ಆಲಿಸಿ ಕಡೆಯಲ್ಲಿ ಇತರೇ ಆರೋಪಿಗಳ ಪರ ವಕೀಲರ ಮಾಹಿತಿ ಕೇಳಿತು. ಎಲ್ಲ ಆರೋಪಿಗಳ ಪರ ವಕೀಲರು ಲಿಖಿತ ವಾದ ಮಂಡಿಸಬಹುದು. ಇಂದಿನಿಂದ ಒಂದು ವಾರದಲ್ಲಿ ಮೂರು ಪುಟಗಳ ಮಾಹಿತಿ ನೀಡಬೇಕು. ಬಳಿಕ ಆದೇಶ ನೀಡಲಾಗುವುದು ಎಂದು ಕೋರ್ಟ್ ಹೇಳಿದೆ.
ನಟ ದರ್ಶನ್ ಪರ ಹಿರಿಯ ವಕೀಲ ಸಿದ್ಧಾರ್ಥ್ ದವೆ ವಾದ ಮಂಡಿಸಿದ್ದರೆ, ಸರ್ಕಾರಿ ವಕೀಲರಾಗಿ ಸಿದ್ಧಾರ್ಥ ಲೂಥ್ರಾ ಪ್ರಬಲವಾಗಿಯೇ ವಾದ ಮಂಡಿಸಿದ್ದಾರೆ.

Related


You Might Also Like
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...