CrimeNEWSನಮ್ಮರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಕ್ಷಣಕ್ಷಣಕ್ಕೂ ಟ್ವಿಸ್ಟ್‌ – ದರ್ಶನ್‌ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷನ ಬಂಧನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಟಿ ಪವಿತ್ರಾ ಗೌಡ ಅವರ ಕುರಿತು ಅಶ್ಲೀಲ ಪೋಸ್ಟ್‌ ಮಾಡಿದ ಹಿನ್ನೆಲೆಯಲ್ಲಿ ನಡೆದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ.

ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರನ್ನು ಪೊಲೀಸರು ಈಂದು ಬೆಳಗ್ಗೆಯೇ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಇದೇ ಕೇಸ್‌ನಲ್ಲಿ ದರ್ಶನ್‌ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಅಲಿಯಾಸ್‌ ರಘು ದರ್ಶನ್‌ ಎಂಬಾತನನ್ನೂ ಪೊಲೀಸರು ಬಂಧಿಸಿದ್ದು ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ತೂಗುದೀಪ ಸೇನಾ ಚಿತ್ರದುರ್ಗದ ಜಿಲ್ಲಾಧ್ಯಕ್ಷ ರಘು ದರ್ಶನ್‌ ಎಂಬಾತನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.

ರೇಣುಕಾಸ್ವಾಮಿ ಅವರನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕಳುಹಿಸಲು ದರ್ಶನ್‌ ಅವರು ರಘು ದರ್ಶನ್‌ ಅವರ ನೆರವು ಪಡೆದಿದ್ದರು ಎನ್ನಲಾಗಿದೆ. ಕೊಲೆ ಕಾರಣಕ್ಕಾಗಿ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದ ಸಂಚಿನ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದು, ಬೇರೆ ಬೇರೆ ಆಯಾಮಗಳಲ್ಲಿ ವಿಚಾರಣೆ ಮಾಡುತ್ತಿದ್ದಾರೆ.

ರೇಣುಕಾಸ್ವಾಮಿ ಪತ್ನಿ 5ತಿಂಗಳ ಗರ್ಭಿಣಿ: ರೇಣುಕಾಸ್ವಾಮಿ ಹಾಗೂ ಸಹನಾ 2023ರ ಜೂನ್‌ 28ರಂದು ಮದುವೆಯಾಗಿದ್ದರು. ಇನ್ನೇನು ಕೆಲವೇ ದಿನಗಳಲ್ಲಿ ಇಬ್ಬರೂ ಮೊದಲ ವಿವಾಹ ವಾರ್ಷಿಕೋತ್ಸವ ಆಚರಿಸುವವರಿದ್ದರು. ಇದರ ಮಧ್ಯೆಯೇ ರೇಣುಕಾಸ್ವಾಮಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಸಹನಾ ಐದು ತಿಂಗಳ ಗರ್ಭಿಣಿಯಾಗಿದ್ದು, ಅವರಿಗೆ ರೇಣುಕಾಸ್ವಾಮಿ ಹತ್ಯೆಯಾಗಿರುವ ವಿಷಯವನ್ನು ಕುಟುಂಬಸ್ಥರು ಇನ್ನೂ ತಿಳಿಸಿಲ್ಲ. ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದಷ್ಟೇ ಹೇಳಿದ್ದಾರೆ.

ಇನ್ನು ಪತಿಯ ಹತ್ಯೆ ವಿಚಾರ ತಿಳಿದರೆ, ಗರ್ಭವತಿಯಾಗಿರುವ ಸಹನಾಗೆ ಏನಾಗುತ್ತದೆಯೋ ಎಂಬ ಭಯದಿಂದ ಕುಟುಂಬಸ್ಥರು ದುಃಖಿತರಾಗಿದ್ದು, ಈ ಸಾವಿನ ವಿಚಾರವನ್ನು ಹೇಗೆ ತಿಳಿಸುವುದು ಎಂಬ ಗೊಂದಲದಲ್ಲಿ ಸಿಲುಕಿ ಒದ್ದಾಡುತ್ತಾರೆ. ಇತ್ತ ಮಗನನ್ನು ಕಳದುಕೊಂಡಿದ್ದು ಈಗ ಸೊಸೆಗೆ ಏನಾದರೂ ಆದರೆ ಎಂಬ ಭಯದಲ್ಲಿ ಇದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ