NEWSನಮ್ಮರಾಜ್ಯ

ಸಹಕಾರ ಕ್ಷೇತ್ರಕ್ಕೂ ಕಾಲಿಟ್ಟ ರೆಸಾರ್ಟ್ ರಾಜಕೀಯ- ಹೈಟೆಕ್ ಟಿಟಿಯಲ್ಲಿ ಮತದಾರರ ಟೂರ್‌

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಇಷ್ಟು ದಿನಗಳ ಕಾಲ ಶಾಸಕರು ರಾಜಕಾರಣದಲ್ಲಿ ರೆಸಾರ್ಟ್ ರಾಜಕೀಯ ನಡಿತ್ತಾ ಇತ್ತು. ಆದರೆ ಇದೀಗ ಸಹಕಾರ ಕ್ಷೇತ್ರಕ್ಕೂ ಸಹ ರೆಸಾರ್ಟ್ ರಾಜಕೀಯ ಕಾಲಿಟ್ಟಿದ್ದು ಇನ್ನಷ್ಟು ಭ್ರಷ್ಟಾಚಾರಕ್ಕೆ ಮುನ್ನುಡಿ ಬರೆಯುತ್ತಿದೆ.

ಹೌದು! ಬೆಳಗಾವಿ (ಡಿಸಿಸಿ ಬ್ಯಾಂಕ್ ವಿಚಾರದಲ್ಲಿ ಸದ್ಯ ಮತದಾನದ ಹಕ್ಕು ಪಡೆದ ಪಿಕೆಪಿಎಸ್ ನಿರ್ದೇಶಕರಿಗೆ ಟೂರ್ ಭ್ಯಾಗ್ಯವನ್ನು ಸ್ಪರ್ಧಾಕಾಂಕ್ಷಿಗಳು ಒದಗಿಸಿಕೊಟ್ಟಿದ್ದಾರೆ.

ಗೋವಾ, ಮಹಾರಾಷ್ಟ್ರ, ಉತ್ತರ ಭಾರತದ ಧಾರ್ಮಿಕ ಕ್ಷೇತ್ರಗಳಿಗೆ ಪಿಕೆಪಿಎಸ್ ಸದಸ್ಯರು ಟೂರ್ ಹೊರಟಿದ್ದಾರೆ. ಡಿಸಿಸಿ ಬ್ಯಾಂಕ್‌ನ 16 ಸ್ಥಾನಗಳ ಪೈಕಿ 9 ನಿರ್ದೇಶಕರು ಈಗಾಗಲೇ ಅವಿರೋಧ ಆಯ್ಕೆಯಾಗಿದ್ದು, ಇನ್ನೂ 7 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ನಿಪ್ಪಾಣಿ, ಹುಕ್ಕೇರಿ, ಅಥಣಿ, ರಾಯಭಾಗ, ರಾಮದುರ್ಗ, ಕಿತ್ತೂರು, ಬೈಲಹೊಂಗಲದಲ್ಲಿ ಚುನಾವಣೆ ನಡೆಯಲಿದೆ.

ಜಾರಕಿಹೊಳಿ ಹಾಗೂ ಕತ್ತಿ ಸವದಿ ಬಣಗಳ ಮಧ್ಯೆ ಡಿಸಿಸಿ ಬ್ಯಾಂಕ್ ತೆಕ್ಕೆಗೆ ಪಡೆಯಲು ಜಿದ್ದಾಜಿದ್ದಿಯೂ ನಡೆದಿದೆ. ಅಡ್ಡ ಮತದಾನ, ಮತದಾರರ ಸೆಳೆಯುವ ಭೀತಿಯ ಕಾರಣ ಮತದಾರರನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ.

ಇನ್ನು ಅಕ್ಟೋಬರ್ 19ಕ್ಕೆ ನಡೆಯುವ ಈ ಚುನಾವಣೆಗೆ ಮತದಾನ ಮಾಡಲು ನೇರವಾಗಿ ಮತದಾರರು ಪ್ರವಾಸ ಮುಗಿಸಿಕೊಂಡು ಬರಲಿದ್ದಾರೆ.

ಹೈಟೆಕ್ ಟಿಟಿಯಲ್ಲಿ ಬೇರೆ ಬೇರೆ ರಾಜ್ಯಗಳ ರೆಸಾರ್ಟ್‌ಗಳಿಗೆ ಮತದಾರರನ್ನು ಶಿಫ್ಟ್ ಮಾಡಲಾಗಿದ್ದು, ಮತದಾರರು ಭದ್ರತಾ ಸಿಬ್ಬಂದಿ ಕಣ್ಗಾವಲಿನಲ್ಲಿಯೇ ಇರಲಿದ್ದಾರೆ. ಇನ್ನು ಈ ರೆಸಾರ್ಟ್‌ಗೆ ತೆರಳುವ ಮತದಾರರಿಗೆ ಮೊಬೈಲ್ ಬಳಕೆಗೆ ಅವಕಾಶ ಇಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ.

Megha
the authorMegha

Leave a Reply

error: Content is protected !!
Latest news
ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ