NEWSದೇಶ-ವಿದೇಶನಮ್ಮರಾಜ್ಯವಿಡಿಯೋ

ಕನಿಷ್ಠ ಪಿಂಚಣಿ, ವೈದ್ಯಕೀಯ ಸೌಲಭ್ಯಕ್ಕೆ ಆಗ್ರಹಿಸಿ ದೆಹಲಿಯಲ್ಲಿ ನಿವೃತ್ತ ನೌಕರರ ಉಪವಾಸ ಸತ್ಯಾಗ್ರಹ

ವಿಜಯಪಥ ಸಮಗ್ರ ಸುದ್ದಿ
  • ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆಯ ಕಾರ್ಯಾಧ್ಯಕ್ಷ ನಂಜುಂಡೇಗೌಡ ಸೇರಿ ರಾಜ್ಯದಿಂದ 360 ಮಂದಿ ನಿವೃತ್ತ ನೌಕರರು ಭಾಗಿ

ನ್ಯೂಡೆಲ್ಲಿ: ಕನಿಷ್ಠ ಪಿಂಚಣಿ ಬೇಡಿಕೆ 7500 ರೂ. ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯವನ್ನು ವಿಸ್ತರಿಸಬೇಕೆಂದು ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಪಿಎಸ್ ನಿವೃತ್ತ ನೌಕರರ ಪ್ರತಿಭಟನಾ ಸಮಾವೇಶ ಎನ್‌ಎಸಿ ರಾಷ್ಟ್ರೀಯ ಸಂಘರ್ಷ ಸಮಿತಿ ಅಧ್ಯಕ್ಷ ಕಮಾಂಡರ್ ಅಶೋಕ್ ರಾಹುತ್ ಅವರ ನೇತೃತ್ವದಲ್ಲಿ ಡಿ.7ರ ಇಂದು ಜರುಗಿತು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಪ್ರತಿಭಟನಾ ಸಭೆಯಲ್ಲಿ ಕರ್ನಾಟಕದಿಂದ ಸುಮಾರು 360 ಮಂದಿ ನಿವೃತ್ತ ನೌಕರರು ಭಾಗವಹಿಸಿದ್ದು, ವಿವಿಧ ರಾಜ್ಯಗಳಿಂದ ಆಗಮಿಸಿದ ನಿವೃತ್ತರ ಸಂಖ್ಯೆ ಸುಮಾರು 20 ಸಾವಿರದಷ್ಟು ಇತ್ತು.

ಪಾರ್ಲಿಮೆಂಟ್ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದ್ದು, ಇಂದಿನ ಸಭೆಯಲ್ಲಿ ಆಗಮಿಸಿದ್ದ ವಿವಿಧ ರಾಜ್ಯಗಳ ಮುಖಂಡರು ಮಾತನಾಡಿ ಕೂಡಲೇ ನಮ್ಮ ಕನಿಷ್ಠ ಪಿಂಚಣಿ ಬೇಡಿಕೆ 7500 ರೂ. ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯವನ್ನು ವಿಸ್ತರಿಸಬೇಕೆಂದು ಆಗ್ರಹಿಸಿದರು.

ಇನ್ನು ನಾಳೆ ಅಂದರೆ ಡಿ.8ರಿಂದ ನಿರಂತರವಾಗಿ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ಹಾಗೂ ನಂತರ ದಿನಗಳಲ್ಲಿ ರಾಷ್ಟ್ರೀಯ ನಾಯಕರು ಮರಣಾಂತ ಉಪವಾಸ ಸತ್ಯಾಗ್ರಹವನ್ನು ನಡೆಸಲು ಈಗಾಗಲೇ ನಿರ್ಧರಿಸಿದ್ದಾರೆ.

ನಾಳೆಯಿಂದ ಅಂದರೆ ಡಿ.8ರಿಂದ ಡಿ.24ರವರೆಗೆ ಜಂತರ್ ಮಂತರ್‌ನಲ್ಲಿ  ತೀವ್ರತರವಾದ ಹೋರಾಟವನ್ನು ಹಮ್ಮಿಕೊಳ್ಳಲಾಗಿದ್ದು ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸಿದರೆ ಕೈ ಬಿಡಲಾಗುವುದು ಎಂದು ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆಯ ಕಾರ್ಯಾಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ