₹5 ಸಾವಿರ ಕೊಟ್ಟರೆ ಕೆಲಸಕ್ಕೆ ವಾಪಸ್: ವಜಾಗೊಂಡ ನೌಕರರ ಸುಲಿಗೆಗೆ ನಿಂತಿದೆಯೇ KSRTC ನೌಕರರ ಸಂಘ!?
ಬೆಂಗಳೂರು: 2021ರ ಸಾರಿಗೆ ಮುಷ್ಕರದ ಸಮಯದಲ್ಲಿ ಸಾರಿಗೆ ನೌಕರರು ಮತ್ತು ಅವರ ಕುಟುಂಬ ಸದಸ್ಯರ ಮೇಲೆ ದಾಖಲಿಸಿರುವ ನೂರಕ್ಕೂ ಹೆಚ್ಚು ಪೊಲೀಸ್ ಕೇಸ್ಗಳು ಇತ್ಯರ್ಥವಾಗುವ ಹಂತ ತಲುಪಿವೆ. ಇನ್ನು ಈ ನಡುವೆ ಈ ಕೇಸ್ ವಾಪಸ್ ಪಡೆಯಲು ಅಧಿಕಾರಿಗಳಿಗೆ ಹೇಳುತ್ತೇವೆ. ಆದರೆ ಅವರಿಗೆ 5 ಸಾವಿರ ರೂ. ಲಂಚ ಕೊಡಬೇಕು ಎಂದು ಸಾರಿಗೆ ಸಂಸ್ಥೆಯ ಸಂಘಟನೆಯೊಂದರ ಪದಾಧಿಕಾರಿಗಳು ಪೊಲೀಸ್ ಕೇಸ್ ದಾಖಲಾಗಿರುವ ನೌಕರರ ಬೆನ್ನುಬಿದ್ದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಅಂದರೆ, 2021ರ ಸಾರಿಗೆ ಮುಷ್ಕರದ ಸಮಯದಲ್ಲಿ ಬಸ್ ಚಾಲನೆ ಮಾಡಿದ ನೌಕರರಿಗೆ ಮುಷ್ಕರದ ಸಮಯದಲ್ಲಿ ಬಸ್ ಏಕೆ ಓಡಿಸುತ್ತಿದ್ದೀಯ ಎಂದು ಕೇಳಿದ ಕಾರಣ ಬಿಎಂಟಿಸಿ ಆಡಳಿತ ಮಂಡಳಿ ಫೋನ್ ಮಾಡಿರುವವರ ವಿರುದ್ಧ ಪೊಲೀಸ್ ಕೇಸನ್ನು ದಾಖಲಿಸಿ ಕೆಲಸದಿಂದ ವಜಾ ಮಾಡಿದೆ.
ಈ ಆಡಳಿತ ಮಂಡಳಿ ದಾಖಲಿಸಿರುವ ಪೊಲೀಸ್ ಕೇಸ್ಗಳನ್ನು ಹಿಂಪಡೆಯಲು ಸರ್ಕಾರಕ್ಕೆ ಸಲ್ಲಿಸಿರುವ ಮನವಿಯಲ್ಲಿ 98 ಕೇಸುಗಳು ಇದ್ದು, ಈ ಕೇಸ್ಗಳನ್ನು ಈಗಾಗಲೇ ಸರ್ಕಾರದ ಮಟ್ಟದಲ್ಲಿ ಹಿಂಪಡೆಯುವ ಬಗ್ಗೆ ಅಂತಿಮಘಟ್ಟ ತಲುಪಿದ್ದು ಅತೀ ಶೀಘ್ರದಲ್ಲೇ ಈ ಎಲ್ಲ ಕೇಸ್ಗಳನ್ನು ಆಡಳಿತ ಮಂಡಳಿ ಹಿಂಪಡೆಯಲಿದೆ. ಹೀಗಾಗಿ ಇದನ್ನು ತಿಳಿದ ಸಾರಿಗೆ ನೌಕರರ ಸಂಘದ ಖಜಾಂಚಿ ಯೋಗೇಶ್ ಎಂಬುವರು ವಜಾಗೊಂಡಿರುವ ನೌಕರರಿಗೆ ಲಂಚಕೊಟ್ಟರೆ ನಿಮ್ಮ ಕೇಸ್ ವಾಪಸ್ ಪಡೆಯುತ್ತಾರೆ ಇಲ್ಲದಿದ್ದರೆ ಕಷ್ಟವಾಗುತ್ತದೆ ಹೇಳಿದ್ದಾರೆ ಎನ್ನಲಾದ ಫೋನ್ ರೆಕಾರ್ಡ್ ಆಡಿಯೋವೊಂದು ಸಿಕ್ಕಿದೆ.
ವಜಾಗೊಳಿಸಿರುವುದರ ವಿರುದ್ಧ ನ್ಯಾಯಾಲಯದಲ್ಲಿ ಕೇಸ್ ನಡೆಸುತ್ತಿರುವ ನೌಕರರೊಬ್ಬರಿಗೆ ಇವರು ಫೋನ್ ಮಾಡಿ ಸರ್ಕಾರದಿಂದ ಕೇಸು ಹಿಂಪಡೆಯಲು ಅಧಿಕಾರಿಗಳಿಗೆ 5 ಸಾವಿರ ರೂ. ಲಂಚ ಕೊಡಬೇಕು. ಮೊದಲಿಗೆ 3000 ರೂ. ಕೊಡು ಕೇಸು ವಾಪಸ್ ಪಡೆದ ನಂತರ ಉಳಿದ 2,000 ಕೊಡುವೆಯಂತೆ ಎಂದು ಹೇಳಿದ್ದಾರೆ.
ಅದಕ್ಕೆ ನೌಕರ ನಾನು ಫೋನ್ ಪೇ ಮಾಡುತ್ತೇನೆ ಎಂದರೆ ಬೇಡ ಬೇಡ ನಗದನ್ನುತಂದು ಕೊಡು ಎಂದು ಹೇಳಿದ್ದಾರೆ. ಕಾರಣ ಫೋನ್ ಪೇ ಗೂಗಲ್ ಪೇ ಆದರೆ ದಾಖಲೆಗಳು ಸೃಷ್ಟಿಯಾಗುತ್ತವೆ. ಅವುಗಳನ್ನು ಹಿಡಿದುಕೊಂಡು ಕೇಸ್ ಹಾಕಿದರೆ ನಾವು ಸಿಕ್ಕಿಕೊಳ್ಳುತ್ತೇವೆ ಎಂಬ ಭಯ. ಇನ್ನು ವಜಾಗೊಂಡ ಈ ನೌಕರ ತನ್ನ ಅಸಹಾಯಕತೆ ಮತ್ತು ತಾನು ಕಷ್ಟದಲ್ಲಿ ಇದ್ದೇನೆ ಎಂದರೂ ಮಾನವೀಯತೆ ಇಲ್ಲದೆ ಹಣಕ್ಕಾಗಿ ಪೀಡಿಸಿದ್ದಾರೆ.
Related


You Might Also Like
ಅಕ್ರಮ ಆನ್ಲೈನ್ ಬೆಟ್ಟಿಂಗ್ನಲ್ಲಿ 2,000 ಕೋಟಿ ರೂ. ಲಾಭಗಳಿದ ಶಾಸಕ ವೀರೇಂದ್ರ ಪಪ್ಪಿ: ಇಡಿ ದಾಳಿ ವೇಳೆ ಬಯಲು!
ಚಿತ್ರದುರ್ಗ: ಜನಪ್ರತಿನಿಧಿಗಳು ಎಂದರೆ ಸಾಮಾನ್ಯ ಜನರಿಗೆ ಮಾದರಿಯಾಗಿರಬೇಕು. ಆದರೆ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಕ್ರಮ ಆನ್ಲೈನ್ ಬೆಟ್ಟಿಂಗ್ನಲ್ಲಿ ಅಲ್ಪಾವಧಿಯಲ್ಲಿಯೇ 2,000 ಕೋಟಿ ರೂ. ಲಾಭಗಳಿಸಿದ್ದಾರೆಂಬುವುದು...
ನಾಗರಿಕರಿಗೆ ತ್ವರಿತವಾಗಿ ಸ್ಪಂದಿಸಿ: 5 ನಗರ ಪಾಲಿಕೆಗಳ ಆಯುಕ್ತರಿಗೆ ತುಷಾರ್ ಗಿರಿನಾಥ್ ಸೂಚನೆ
ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಎಲ್ಲ ವಿಭಾಗಗಳ ಕುರಿತು ಸಮಗ್ರ ಪರಿಚಯ ಹಾಗೂ ವಿಶೇಷವಾಗಿ 3 ವಿಷಯಗಳಾದ ರಸ್ತೆ ಗುಂಡಿ, ಬೀದಿ ದೀಪ ಹಾಗೂ ಕಸದ ಸಮಸ್ಯೆ...
ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ, ಜನರು ಸುಳ್ಳು ದೂರು ದಾಖಲಿಸಬೇಡಿ: ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ
ಬೆಂಗಳೂರು ಗ್ರಾಮಾಂತರ: ಸಾರ್ವಜನಿಕರು ಲೋಕಾಯುಕ್ತ ಹಾಗೂ ಇನ್ನಿತರೆ ನ್ಯಾಯಾಲಯಗಳಲ್ಲಿ ಸುಳ್ಳು ಕೇಸ್ ದಾಖಲಿಸಬೇಡಿ, ಸುಳ್ಳು ಕೇಸ್ ಎಂದು ಸಾಬೀತಾದರೆ ಅರ್ಜಿದಾರರು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ, ಜತೆಗೆ ನಿಜವಾದ...
ಜಿಬಿಎ-ಗುಂಡಿ ಮುಕ್ತ ರಸ್ತೆ, ಬ್ಲಾಕ್ ಸ್ಪಾಟ್ ರಹಿತ, ಮುಕ್ತ ಪಾದಚಾರಿ ಮಾರ್ಗ ನಿರ್ಮಾಣಕ್ಕೆ ಕಠಿಣ ಕ್ರಮ: ರಾಜೇಂದ್ರ ಚೋಳನ್
ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಂಚಾರ, ಸುರಕ್ಷತೆ ಮತ್ತು ಮೂಲಭೂತ ಸೌಕರ್ಯಗಳನ್ನು ಉತ್ತಮಗೊಳಿಸುವ ಉದ್ದೇಶದಿಂದ ಗುಂಡಿ ಮುಕ್ತ ರಸ್ತೆ, ಬ್ಲಾಕ್ ಸ್ಪಾಟ್ ರಹಿತ...
ಆ.5ರ ಮುಷ್ಕರ ದಿನದ ಚಾಲಕ, ನಿರ್ವಾಹಕರ ವೇತನ ಕಡಿತ- ಇದು ನ್ಯಾಯಸಮ್ಮತವೇ?
ಬೆಂಗಳೂರು: ಕಳೆದ 2021ರ ಏಪ್ರಿಲ್ನಲ್ಲಿ ನಡೆದಂತಹ ಸಾರಿಗೆ ಮುಷ್ಕರದ ಅವಧಿಯಲ್ಲಿ ಬಹಳಷ್ಟು ಸಾರಿಗೆ ನೌಕರರ ವಿರುದ್ಧ ವಜಾ, ವರ್ಗಾವಣೆ, ಅಮಾನತು ಹಾಗೂ ಪೊಲೀಸ್ ಪ್ರಕರಣಗಳು ದಾಖಲಿಸಲಾಗಿತ್ತು. ಈ...
ಮೈಸೂರು: ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ
ಮೈಸೂರು: ನಾಡಹಬ್ಬ ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಸರ್ಕಾರದ ಪರವಾಗಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಬುಧವಾರ...
ಯುವನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಸವರಾಜು ಸೂಚನೆ
ಬೆಂಗಳೂರು ಗ್ರಾಮಾಂತರ: ಯುವನಿಧಿ ಯೋಜನೆಯಡಿ ಪದವೀಧರರು ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ, ಫಲಾನುಭವಿಗಳ ಆಸಕ್ತಿ ಮತ್ತು ಅವರ ಸಾಮರ್ಥ್ಯಕ್ಕೆ ತಕ್ಕಂತೆ ಕೌಶಲ್ಯ ತರಬೇತಿ ನೀಡಲು ಕ್ರಮ...
ಜಿಬಿಎ: ನೂತನ ಪಾಲಿಕೆ ಕಚೇರಿಗಳ ನಿರ್ಮಾಣಕ್ಕೆ ನ.1 ರಂದು ಭೂಮಿಪೂಜೆ: ಉಪಮುಖ್ಯಮಂತ್ರಿ ಶಿವಕುಮಾರ್
ಐದು ಪಾಲಿಕೆಗಳಿಗೆ 300 ಕೋಟಿ ರೂ. ಅನುದಾನ ಹಂಚಿಕೆ ಬೆಂಗಳೂರು: “ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲ ಪಾಲಿಕೆಗಳ ಗಡಿ...